ನಗರದ ಹೊರವಲಯದಲ್ಲಿರುವ ಅಗ್ನಿ ಶಾಮಕ ಠಾಣೆ ಬಳಿ ದಿಢೀರನೆ ಅಪರೂಪದ ಚಿಪ್ಪು ಹಂದಿ ಪ್ರತ್ಯಕ್ಷವಾಗಿದೆ. ಇದನ್ನು ಗಮನಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ರಕ್ಷಣೆ ಮಾಡಿ ಅರಣ್ಯ ಇಲಾಖೆಗೆ ಒಪ್ಪಿಸಿರುವ ಘಟನೆ ನಡೆದಿದೆ.
ಸುಮಾರು 10 ರಿಂದ 12 ವರ್ಷದ ವಯಸ್ಸಿನ ಚಿಪ್ಪು ಹಂದಿ ಇದಾಗಿದ್ದು, ಇಂತಹ ಪ್ರಾಣಿ ಸಾರ್ವಜನಿಕವಾಗಿ ಕಾಣಿಸಿಕೊಳ್ಳುವುದು ಅಪರೂಪವಾಗಿದೆ.
ಇದು ಸಾಮಾನ್ಯವಾಗಿ ಉಷ್ಣ ವಲಯದ ದೇಶಗಳಾದ ಆಫ್ರಿಕಾದಲ್ಲಿ ಕಾಣಿಸುತ್ತದೆ. ಇವುಗಳಿಗೆ ತಮ್ಮ ಚರ್ಮದ ಮೇಲೆ ಅಗಲವಾದ ಚಿಪ್ಪುಗಳಿವೆ. ಮರದ ಪೊಟರೆಗಳಲ್ಲಿ ಮತ್ತು ಮಣ್ಣಿನಲ್ಲಿ ಜೀವಿಸುತ್ತವೆ.
ಇವುಗಳು ಇರುವೆ ಮತ್ತು ಗೆದ್ದಲುಗಳನ್ನು ತಿಂದು ಬದುಕುತ್ತವೆ. ಉದ್ದವಾದ ನಾಲಗೆ ಹೊಂದಿದ್ದು, ಒಂದು ಬಾರಿಗೆ 1 ರಿಂದ 3 ಮರಿಗಳಿಗೆ ಜನ್ಮ ನೀಡುತ್ತದೆ.
ದೇಹವು ಪ್ರಬಲ, ಮೊನಚಾದ ಹಾಗೂ ಅತಿಕ್ರಮಿಸುವ ಮಾಪಕಗಳಿಂದ ಒಳಗೊಂಡಿದೆ. ಈ ಅತಿಕ್ರಮಿಸುವ ಮಾಪಕಗಳು ಉದ್ದುದ್ದವಾದ ಸಾಲುಗಳಲ್ಲಿ ವ್ಯವಸ್ಥಿತಗೊಂಡಿದೆ. ತಲೆಯು ಸಣ್ಣದಾಗಿದ್ದು, ಚೂಪಾದ ಮುಖ ಇದೆ. ಈ ಪ್ರಾಣಿಗಳಿಗೆ ಹಲ್ಲು ಇರುವುದಿಲ್ಲ. ಕಣ್ಣು ಹಾಗೂ ಮೂಗು ಸಣ್ಣದಾಗಿದೆ. ನಾಲಗೆಯು ಗಮನಾರ್ಹವಾಗಿ ಉದ್ದ, ಜಿಗುಟಾಗಿದೆ. ಕೈ, ಕಾಲುಗಳಲ್ಲಿ ಬಲವಾದ ಬಾಗಿದ ಉಗುರುಗಳಿವೆ. ಮುಂದಿನ ಉಗುರುಗಳು ಬಿಲವನ್ನು ತೋಡಲು ಹಾಗೂ ಗೆದ್ದಲು ಗೂಡುಗಳನ್ನು ಹರಿದು ಹಾಕಲು ಉಪಯೊಗಿಸುತ್ತವೆ. ಈ ಪ್ರಾಣಿಗಳ ಮೇಲೆ ದಾಳಿ ನಡೆಸಿದಾಗ ಅವುಗಳು ಚೆಂಡುವಿನ ಆಕಾರ ತಾಳಿ ತಮ್ಮನ್ನು ತಾವು ರಕ್ಷಿಸಿಕೊಳ್ಳುತ್ತವೆ.
ಅರಣ್ಯನಾಶದಿಂದಾಗಿ ಇವು ಈಗ ವಿನಾಶದ ಅಂಚಿನಲ್ಲಿವೆ.
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…