ನಗರದ ಹೊರವಲಯದಲ್ಲಿರುವ ಅಗ್ನಿ ಶಾಮಕ ಠಾಣೆ ಬಳಿ ದಿಢೀರನೆ ಅಪರೂಪದ ಚಿಪ್ಪು ಹಂದಿ ಪ್ರತ್ಯಕ್ಷವಾಗಿದೆ. ಇದನ್ನು ಗಮನಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ರಕ್ಷಣೆ ಮಾಡಿ ಅರಣ್ಯ ಇಲಾಖೆಗೆ ಒಪ್ಪಿಸಿರುವ ಘಟನೆ ನಡೆದಿದೆ.
ಸುಮಾರು 10 ರಿಂದ 12 ವರ್ಷದ ವಯಸ್ಸಿನ ಚಿಪ್ಪು ಹಂದಿ ಇದಾಗಿದ್ದು, ಇಂತಹ ಪ್ರಾಣಿ ಸಾರ್ವಜನಿಕವಾಗಿ ಕಾಣಿಸಿಕೊಳ್ಳುವುದು ಅಪರೂಪವಾಗಿದೆ.
ಇದು ಸಾಮಾನ್ಯವಾಗಿ ಉಷ್ಣ ವಲಯದ ದೇಶಗಳಾದ ಆಫ್ರಿಕಾದಲ್ಲಿ ಕಾಣಿಸುತ್ತದೆ. ಇವುಗಳಿಗೆ ತಮ್ಮ ಚರ್ಮದ ಮೇಲೆ ಅಗಲವಾದ ಚಿಪ್ಪುಗಳಿವೆ. ಮರದ ಪೊಟರೆಗಳಲ್ಲಿ ಮತ್ತು ಮಣ್ಣಿನಲ್ಲಿ ಜೀವಿಸುತ್ತವೆ.
ಇವುಗಳು ಇರುವೆ ಮತ್ತು ಗೆದ್ದಲುಗಳನ್ನು ತಿಂದು ಬದುಕುತ್ತವೆ. ಉದ್ದವಾದ ನಾಲಗೆ ಹೊಂದಿದ್ದು, ಒಂದು ಬಾರಿಗೆ 1 ರಿಂದ 3 ಮರಿಗಳಿಗೆ ಜನ್ಮ ನೀಡುತ್ತದೆ.
ದೇಹವು ಪ್ರಬಲ, ಮೊನಚಾದ ಹಾಗೂ ಅತಿಕ್ರಮಿಸುವ ಮಾಪಕಗಳಿಂದ ಒಳಗೊಂಡಿದೆ. ಈ ಅತಿಕ್ರಮಿಸುವ ಮಾಪಕಗಳು ಉದ್ದುದ್ದವಾದ ಸಾಲುಗಳಲ್ಲಿ ವ್ಯವಸ್ಥಿತಗೊಂಡಿದೆ. ತಲೆಯು ಸಣ್ಣದಾಗಿದ್ದು, ಚೂಪಾದ ಮುಖ ಇದೆ. ಈ ಪ್ರಾಣಿಗಳಿಗೆ ಹಲ್ಲು ಇರುವುದಿಲ್ಲ. ಕಣ್ಣು ಹಾಗೂ ಮೂಗು ಸಣ್ಣದಾಗಿದೆ. ನಾಲಗೆಯು ಗಮನಾರ್ಹವಾಗಿ ಉದ್ದ, ಜಿಗುಟಾಗಿದೆ. ಕೈ, ಕಾಲುಗಳಲ್ಲಿ ಬಲವಾದ ಬಾಗಿದ ಉಗುರುಗಳಿವೆ. ಮುಂದಿನ ಉಗುರುಗಳು ಬಿಲವನ್ನು ತೋಡಲು ಹಾಗೂ ಗೆದ್ದಲು ಗೂಡುಗಳನ್ನು ಹರಿದು ಹಾಕಲು ಉಪಯೊಗಿಸುತ್ತವೆ. ಈ ಪ್ರಾಣಿಗಳ ಮೇಲೆ ದಾಳಿ ನಡೆಸಿದಾಗ ಅವುಗಳು ಚೆಂಡುವಿನ ಆಕಾರ ತಾಳಿ ತಮ್ಮನ್ನು ತಾವು ರಕ್ಷಿಸಿಕೊಳ್ಳುತ್ತವೆ.
ಅರಣ್ಯನಾಶದಿಂದಾಗಿ ಇವು ಈಗ ವಿನಾಶದ ಅಂಚಿನಲ್ಲಿವೆ.
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…