ನಗರದ ಹೊರವಲಯದಲ್ಲಿರುವ ಅಗ್ನಿ ಶಾಮಕ ಠಾಣೆ ಬಳಿ ದಿಢೀರನೆ ಅಪರೂಪದ ಚಿಪ್ಪು ಹಂದಿ ಪ್ರತ್ಯಕ್ಷವಾಗಿದೆ. ಇದನ್ನು ಗಮನಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ರಕ್ಷಣೆ ಮಾಡಿ ಅರಣ್ಯ ಇಲಾಖೆಗೆ ಒಪ್ಪಿಸಿರುವ ಘಟನೆ ನಡೆದಿದೆ.
ಸುಮಾರು 10 ರಿಂದ 12 ವರ್ಷದ ವಯಸ್ಸಿನ ಚಿಪ್ಪು ಹಂದಿ ಇದಾಗಿದ್ದು, ಇಂತಹ ಪ್ರಾಣಿ ಸಾರ್ವಜನಿಕವಾಗಿ ಕಾಣಿಸಿಕೊಳ್ಳುವುದು ಅಪರೂಪವಾಗಿದೆ.
ಇದು ಸಾಮಾನ್ಯವಾಗಿ ಉಷ್ಣ ವಲಯದ ದೇಶಗಳಾದ ಆಫ್ರಿಕಾದಲ್ಲಿ ಕಾಣಿಸುತ್ತದೆ. ಇವುಗಳಿಗೆ ತಮ್ಮ ಚರ್ಮದ ಮೇಲೆ ಅಗಲವಾದ ಚಿಪ್ಪುಗಳಿವೆ. ಮರದ ಪೊಟರೆಗಳಲ್ಲಿ ಮತ್ತು ಮಣ್ಣಿನಲ್ಲಿ ಜೀವಿಸುತ್ತವೆ.
ಇವುಗಳು ಇರುವೆ ಮತ್ತು ಗೆದ್ದಲುಗಳನ್ನು ತಿಂದು ಬದುಕುತ್ತವೆ. ಉದ್ದವಾದ ನಾಲಗೆ ಹೊಂದಿದ್ದು, ಒಂದು ಬಾರಿಗೆ 1 ರಿಂದ 3 ಮರಿಗಳಿಗೆ ಜನ್ಮ ನೀಡುತ್ತದೆ.
ದೇಹವು ಪ್ರಬಲ, ಮೊನಚಾದ ಹಾಗೂ ಅತಿಕ್ರಮಿಸುವ ಮಾಪಕಗಳಿಂದ ಒಳಗೊಂಡಿದೆ. ಈ ಅತಿಕ್ರಮಿಸುವ ಮಾಪಕಗಳು ಉದ್ದುದ್ದವಾದ ಸಾಲುಗಳಲ್ಲಿ ವ್ಯವಸ್ಥಿತಗೊಂಡಿದೆ. ತಲೆಯು ಸಣ್ಣದಾಗಿದ್ದು, ಚೂಪಾದ ಮುಖ ಇದೆ. ಈ ಪ್ರಾಣಿಗಳಿಗೆ ಹಲ್ಲು ಇರುವುದಿಲ್ಲ. ಕಣ್ಣು ಹಾಗೂ ಮೂಗು ಸಣ್ಣದಾಗಿದೆ. ನಾಲಗೆಯು ಗಮನಾರ್ಹವಾಗಿ ಉದ್ದ, ಜಿಗುಟಾಗಿದೆ. ಕೈ, ಕಾಲುಗಳಲ್ಲಿ ಬಲವಾದ ಬಾಗಿದ ಉಗುರುಗಳಿವೆ. ಮುಂದಿನ ಉಗುರುಗಳು ಬಿಲವನ್ನು ತೋಡಲು ಹಾಗೂ ಗೆದ್ದಲು ಗೂಡುಗಳನ್ನು ಹರಿದು ಹಾಕಲು ಉಪಯೊಗಿಸುತ್ತವೆ. ಈ ಪ್ರಾಣಿಗಳ ಮೇಲೆ ದಾಳಿ ನಡೆಸಿದಾಗ ಅವುಗಳು ಚೆಂಡುವಿನ ಆಕಾರ ತಾಳಿ ತಮ್ಮನ್ನು ತಾವು ರಕ್ಷಿಸಿಕೊಳ್ಳುತ್ತವೆ.
ಅರಣ್ಯನಾಶದಿಂದಾಗಿ ಇವು ಈಗ ವಿನಾಶದ ಅಂಚಿನಲ್ಲಿವೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…
ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…
ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…
ರೇಷ್ಮೆ ನಗರಿ, ಕೈಗಾರಿಕಾ ನಗರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದೊಡ್ಡಬಳ್ಳಾಪುರ ನಗರ ಇಂದು ಅಭಿವೃದ್ಧಿಯ ಅವಕಾಶಗಳ ಜೊತೆಗೆ ಮೂಲ ಸಮಸ್ಯೆಗಳ…