ನಗರದಲ್ಲಿ ಚುನಾವಣಾ ಚಾಣಕ್ಯ ಅಮಿತ್ ಶಾ ಭರ್ಜರಿ ರೋಡ್ ಶೋ: ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜ್ ಪರ ಮತಯಾಚನೆ. ಪುಷ್ಪಮಳೆಗೈದು ಸ್ವಾಗತಿಸಿದ ಜನತೆ

ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜ್ ಪರ ಚುನಾವಣಾ ಚಾಣಕ್ಯ ಎಂದೇ ಕರೆಸಿಕೊಳ್ಳುವ ಕೇಂದ್ರ ಗೃಹ ಸಚಿವ ಅಮಿತ್ ಶಾ‌ ನಗರದಲ್ಲಿಂದು ಭರ್ಜರಿ ರೋಡ್ ಶೋ ನಡೆಸುವ ಮೂಲಕ ಮತಯಾಚನೆ ಮಾಡಿದರು.

2023ರ ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನೆರಡು ದಿನ ಬಾಕಿ ಉಳಿದಿದ್ದು ಚುನಾವಣೆಗೂ ಮುನ್ನ ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಪಕ್ಷದ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ಕೈಗೊಂಡಿರುವ ಅಮಿತ್ ಶಾ ರವರು ಇಂದು ದೊಡ್ಡಬಳ್ಳಾಪುರ ವಿಧಾನಸಭಾ
ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜ್ ಪರ ರೋಡ್ ಶೋ ನಡೆಸುವ‌ ಮೂಲಕ ಶಕ್ತಿ ಪ್ರದರ್ಶನ ನಡೆಸಿದರು.

ಈ ವೇಳೆ ರಸ್ತೆ ಇಕ್ಕೆಲಗಳಲ್ಲಿ ನಿಂತಿದ್ದ ಜನಸ್ತೋಮಕ್ಕೆ ಕೈಬೀಸಿ ಹಾರೈಸಿದರು. ಮುಗುವಾಳಪ್ಪ ಸರ್ಕಲ್ ನಿಂದ ಆರಂಭವಾದ ರೋಡ್ ಶೋ ತಾಲ್ಲೂಕು ಕಚೇರಿ ಮುಖಾಂತರ ಹಾದು ಅಂಬೇಡ್ಕರ್ ರಸ್ತೆ ಮೂಲಕ ರಾಮೇಗೌಡ ವೃತ್ತದಲ್ಲಿ ಮುಕ್ತಾಯಗೊಂಡಿತು.

ರಸ್ತೆಯುದ್ದಕ್ಕೂ ನಿಂತಿದ್ದ ಜನ ಮೋದಿ, ಅಮಿತ್ ಶಾ,‌ ಧೀರಜ್ ಮುನಿರಾಜ್ ಎಂದು ಜೈಕಾರ ಕೂಗಿ ಸಂಭ್ರಮಿಸಿದರು.

ಯುವಕನಿಗೆ ಪಕ್ಷ ಅವಕಾಶ ಮಾಡಿಕೊಟ್ಟಿದೆ, ಮತದಾರರಾದ ನೀವು ಸಹ ಮತ ನೀಡಿ ಗೆಲ್ಲಿಸಿ ವಿಧಾನಸಭೆಗೆ ಕಳುಹಿಸಿ ಕ್ಷೇತ್ರಾಭಿವೃದ್ಧಿಗೆ ಅವಕಾಶ ಮಾಡಿಕೊಡಿ ಎಂದು ಮತದಾರರಲ್ಲಿ ಮನವಿ ಮಾಡಿದ ಅಮಿತ್ ಶಾ.

Ramesh Babu

Journalist

Recent Posts

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

25 minutes ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

13 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

17 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

17 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

20 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago