ನಗರದಲ್ಲಿ ಜಿಲ್ಲಾ ಮಟ್ಟದ ದೇಹದಾರ್ಢ್ಯ ಸ್ಪರ್ಧೆ ಹಾಗೂ ತಾಲೂಕು ಮಟ್ಟದ ಮೆನ್ ಫಿಸಿಕ್ ಸ್ಪರ್ಧೆಯನ್ನು ಆಯೋಜನೆ

ದೊಡ್ಡಬಳ್ಳಾಪುರ ನಗರದ ವರ್ಕೌಟ್ ವಾರಿಯರ್ಸ್ ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಜಿಲ್ಲಾ ಮಟ್ಟದ ದೇಹದಾರ್ಢ್ಯ ಸ್ಪರ್ಧೆ ಹಾಗೂ ತಾಲೂಕು ಮಟ್ಟದ ಮೆನ್ ಫಿಸಿಕ್ ಸ್ಪರ್ಧೆಯನ್ನು ಆಯೋಜನೆ ಮಾಡಲಾಗಿತ್ತು.

ದೇಹದಾರ್ಢ್ಯ ಸ್ಪರ್ಧೆ ಹಾಗೂ ಮೆನ್ ಫಿಸಿಕ್ ಸ್ಪರ್ಧೆಯಲ್ಲಿ ಸ್ಪರ್ಧಿಗಳು ವಿವಿಧ ಭಂಗಿಯಲ್ಲಿ ತಮ್ಮ ದೇಹ ಪ್ರದರ್ಶಿಸಿದರು. ಈ ವೇಳೆ ಪ್ರೇಕ್ಷಕರು ಜೋರಾಗಿ ಚಪ್ಪಾಳೆ ತಟ್ಟಿ, ಶಿಳ್ಳೆ ಹಾಕಿ ಪ್ರೋತ್ಸಾಹ ನೀಡಿದರು.

ಮೆನ್ ಫಿಸಿಕ್ ವಿಭಾಗದಲ್ಲಿ ದೊಡ್ಡಬಳ್ಳಾಪುರದ ಯುವಕ‌ ಪ್ರಥಮ ಸ್ಥಾನ ಪಡೆದುಕೊಂಡಿದ್ದು, ಗೆದ್ದ ಯುವಕನಿಗೆ ಮಿಸ್ಟರ್ ಕನ್ನಡ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ವಿಶೇಷ ಆಹ್ವಾನಿತರಾಗಿ ಬಿ.ಕೆ ನಾರಾಯಣಸ್ವಾಮಿ, ಮುನಿರಾಜ್ ಅವರು ಆಗಮಿಸಿದ್ದರು. ಶಶಿ, ಗಣಿ ಅವರು ಕಾರ್ಯಕ್ರಮವನ್ನು ಆಯೋಜನೆ ಮಾಡಿ ಯಶಸ್ವಿಗೊಳಿಸಿದ್ದಾರೆ.

Leave a Reply

Your email address will not be published. Required fields are marked *