ನಗರದಲ್ಲಿ ಜುಲೈ 7 ರಂದು ನಾಡಪ್ರಭು ಕೆಂಪೇಗೌಡ ಜಯಂತಿ

ಕೆಂಪೇಗೌಡ ಜಯಂತಿ ಆಚರಣೆ ಸಮಿತಿ ವತಿಯಿಂದ ಜುಲೈ 7ರಂದು ನಗರದ ಒಕ್ಕಲಿಗರ ಸಮುದಾಯ ಭವನದಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ಅದ್ಧೂರಿಯಾಗಿ ನಡೆಸಲು ಸಕಲ ಸಿದ್ಧತೆ ನಡೆಸಲಾಗಿದೆ ಎಂದು ತಾಲೂಕು ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ ಸಮಿತಿ ಅಧ್ಯಕ್ಷ ಟಿ.ವಿ ಲಕ್ಷ್ಮಿನಾರಾಯಣ ಅವರು ತಿಳಿಸಿದರು.

ನಗರದ ಪಿಎಲ್‌ಡಿ ಬ್ಯಾಂಕ್‌ನಲ್ಲಿ ಕೆಂಪೇಗೌಡ ಜಯಂತಿ ಆಚರಣೆ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜು.7ರಂದು ಬೆಳಿಗ್ಗೆ 9ಕ್ಕೆ ಬೆಳ್ಳಿ-ರಥದಲ್ಲಿ ಕೆಂಪೇಗೌಡರ ಭಾವಚಿತ್ರದ ಮೆರವಣಿಗೆ ನಡೆಯಲಿದೆ. ವಿವಿಧ ಸಾಂಸ್ಕೃತಿಕ ಕಲಾತಂಡಗಳೊಂದಿಗೆ ನಗರದ ನೆಲದಾಂಜನೇಯಸ್ವಾಮಿ ದೇವಾಲಯದಿಂದ ಆರಂಭವಾಗುವ ಮೆರವಣಿಗೆ, ಸೌಂದರ್ಯ ಮಹಲ್ ಚಿತ್ರಮಂದಿರ, ತಾಲ್ಲೂಕು ಕಚೇರಿ ವೃತ್ತ ಮೂಲಕ ಜಿ.ರಾಮೇಗೌಡ ವೃತ್ತಕ್ಕೆ ತೆರಳಿ, ನಂತರ ಒಕ್ಕಲಿಗರ ಸಮುದಾಯ ಭವನಕ್ಕೆ ಆಗಮಿಸಲಿದೆ. ನಂತರ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದರು.

ಕಾರ್ಯಕ್ರಮದಲ್ಲಿ ಇದೇ ಮೊದಲ ಬಾರಿಗೆ 2023-24ನೇ ಸಾಲಿನಲ್ಲಿ ಎಸ್. ಎಸ್.ಎಲ್.ಸಿ, ದ್ವಿತೀಯ ಪಿಯು ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕ ಪಡೆದ ಒಕ್ಕಲಿಗ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಲಿದೆ ಎಂದರು.

ಜೆಡಿಎಸ್ ಜಿಲ್ಲಾಧ್ಯಕ್ಷ ಮುನೇಗೌಡ ಮಾತನಾಡಿ, ಕೃಷಿ ಚಟುವಟಿಕೆಗಳಿಗೆ ಪೂರಕವಾಗಿ ಬೆಂಗಳೂರಿನ ವಿವಿಧ ಪೇಟೆಗಳನ್ನು ನಿರ್ಮಾಣ ಮಾಡಿದ ನಾಡಪ್ರಭು ಕೆಂಪೇಗೌಡ ಅವರ ದೂರದೃಷ್ಟಿಯು ಅಭಿವೃದ್ಧಿಗೆ ಹಿಡಿದ ಕನ್ನಡಿಯಾಗಿದೆ. ಬೆಂಗಳೂರು ಕಟ್ಟಿದ ಕೆಂಪೇಗೌಡ ವಿಶಾಲ ಬಯಲು ಪ್ರದೇಶವನ್ನು ಆಯ್ಕೆ ಮಾಡಿಕೊಂಡು ಕೃಷಿಗೆ ಪೂರಕವಾದ ಕೆರೆ- ಕಟ್ಟೆ ನಿರ್ಮಾಣ ಮಾಡಿದ್ದರು. ಇಂತಹ ಮಹಾನ್ ಪುರುಷರ ಜಯಂತಿಗೆ ಯಾವುದೇ ಪಕ್ಷ ಬೇಧವಿಲ್ಲದೆ ಎಲ್ಲರೂ ಒಗ್ಗೂಡಿ ಕೆಂಪೇಗೌಡ ಜಯಂತಿಯನ್ನು ಆಚರಿಸಬೇಕಿದೆ ಎಂದು ಹೇಳಿದರು.

ತಾಲೂಕಿನಲ್ಲಿ ರಾಜ್ಯ ಒಕ್ಕಲಿಗರ ಸಂಘದಲ್ಲಿ ಸುಮಾರು 25 ಸಾವಿರ ಮಂದಿ ಸದಸ್ಯತ್ವ ಹೊಂದಿದ್ದು, ಎಲ್ಲರೂ  ಕಾರ್ಯಕ್ರಮದಲ್ಲಿ ಭಾಗಿಯಾಗಬೇಕೆಂದರು ಮನವಿ ಮಾಡಿದರು.

ಈ ವೇಳೆ ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ, ಮುಖಂಡರಾದ ಲಕ್ಷ್ಮಿಪತಿ, ನರಸಿಂಹಣ್ಣ, ಅಶ್ವಥ್ ನಾರಾಯಣ ಗೌಡ, ವಿಶ್ವಾಸ್ ಹನುಮಂತೇಗೌಡ ಸೇರಿದಂತೆ ಇತರರು ಉಪಸ್ಥಿರಿದ್ದಜುಲೈ

Ramesh Babu

Journalist

Recent Posts

ಹಳಿ ತಪ್ಪಿದಂತಿರುವ ಭಾರತದ ವಿದೇಶಾಂಗ ನೀತಿ……..

ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…

1 hour ago

ಅರಸೇಶ್ವರಿ ದೇವಿಯ ಜಾಗ ಖಾಸಗಿ ವ್ಯಕ್ತಿಗೆ ಖಾತೆ:ಸರ್ಕಾರಿ ಜಮೀನು ಒತ್ತುವರಿ ತೆರವು ಸೇರಿದಂತೆ ಇತರೆ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ಪ್ರತಿಭಟ‌ನೆ

ತಾಲ್ಲೂಕಿನ ಕಾಡತಿಪ್ಪೂರು ಗ್ರಾಮದಲ್ಲಿನ ಇತಿಹಾಸ ಪ್ರಸಿದ್ಧ ಅರಸೇಶ್ವರಿ ದೇಗುಲದ ಇನಾಮ್ತಿ ಜಮೀನನ್ನು ಕಂದಾಯ ಇಲಾಖೆ ಅಧಿಕಾರಿಗಳು ಖಾಸಗಿ ವ್ಯಕ್ತಿಗಳ ಜೊತೆ…

2 hours ago

ಕೇಬಲ್ ಕಾರ್ಖಾನೆಗೆ ಬೆಂಕಿ: ಧಗಧಗ ಉರಿಯುತ್ತಿರುವ ಕಾರ್ಖಾನೆ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…

14 hours ago

ಮೆಳೇಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಳ್ಳತನ: ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟ ಕದ್ದೊಯ್ದ ಐನಾತಿಗಳು

ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…

17 hours ago

ಮಾರಮ್ಮ ದೇವಿಯ ಮೂರು ಚಿನ್ನದ ತಾಳಿ, ನಾಲ್ಕು ಗುಂಡುಗಳನ್ನ ಕದ್ದ ಖದೀಮರು

ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ‌ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…

18 hours ago