ನಗರದಲ್ಲಿ ಜುಲೈ 7 ರಂದು ನಾಡಪ್ರಭು ಕೆಂಪೇಗೌಡ ಜಯಂತಿ

ಕೆಂಪೇಗೌಡ ಜಯಂತಿ ಆಚರಣೆ ಸಮಿತಿ ವತಿಯಿಂದ ಜುಲೈ 7ರಂದು ನಗರದ ಒಕ್ಕಲಿಗರ ಸಮುದಾಯ ಭವನದಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ಅದ್ಧೂರಿಯಾಗಿ ನಡೆಸಲು ಸಕಲ ಸಿದ್ಧತೆ ನಡೆಸಲಾಗಿದೆ ಎಂದು ತಾಲೂಕು ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ ಸಮಿತಿ ಅಧ್ಯಕ್ಷ ಟಿ.ವಿ ಲಕ್ಷ್ಮಿನಾರಾಯಣ ಅವರು ತಿಳಿಸಿದರು.

ನಗರದ ಪಿಎಲ್‌ಡಿ ಬ್ಯಾಂಕ್‌ನಲ್ಲಿ ಕೆಂಪೇಗೌಡ ಜಯಂತಿ ಆಚರಣೆ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜು.7ರಂದು ಬೆಳಿಗ್ಗೆ 9ಕ್ಕೆ ಬೆಳ್ಳಿ-ರಥದಲ್ಲಿ ಕೆಂಪೇಗೌಡರ ಭಾವಚಿತ್ರದ ಮೆರವಣಿಗೆ ನಡೆಯಲಿದೆ. ವಿವಿಧ ಸಾಂಸ್ಕೃತಿಕ ಕಲಾತಂಡಗಳೊಂದಿಗೆ ನಗರದ ನೆಲದಾಂಜನೇಯಸ್ವಾಮಿ ದೇವಾಲಯದಿಂದ ಆರಂಭವಾಗುವ ಮೆರವಣಿಗೆ, ಸೌಂದರ್ಯ ಮಹಲ್ ಚಿತ್ರಮಂದಿರ, ತಾಲ್ಲೂಕು ಕಚೇರಿ ವೃತ್ತ ಮೂಲಕ ಜಿ.ರಾಮೇಗೌಡ ವೃತ್ತಕ್ಕೆ ತೆರಳಿ, ನಂತರ ಒಕ್ಕಲಿಗರ ಸಮುದಾಯ ಭವನಕ್ಕೆ ಆಗಮಿಸಲಿದೆ. ನಂತರ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದರು.

ಕಾರ್ಯಕ್ರಮದಲ್ಲಿ ಇದೇ ಮೊದಲ ಬಾರಿಗೆ 2023-24ನೇ ಸಾಲಿನಲ್ಲಿ ಎಸ್. ಎಸ್.ಎಲ್.ಸಿ, ದ್ವಿತೀಯ ಪಿಯು ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕ ಪಡೆದ ಒಕ್ಕಲಿಗ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಲಿದೆ ಎಂದರು.

ಜೆಡಿಎಸ್ ಜಿಲ್ಲಾಧ್ಯಕ್ಷ ಮುನೇಗೌಡ ಮಾತನಾಡಿ, ಕೃಷಿ ಚಟುವಟಿಕೆಗಳಿಗೆ ಪೂರಕವಾಗಿ ಬೆಂಗಳೂರಿನ ವಿವಿಧ ಪೇಟೆಗಳನ್ನು ನಿರ್ಮಾಣ ಮಾಡಿದ ನಾಡಪ್ರಭು ಕೆಂಪೇಗೌಡ ಅವರ ದೂರದೃಷ್ಟಿಯು ಅಭಿವೃದ್ಧಿಗೆ ಹಿಡಿದ ಕನ್ನಡಿಯಾಗಿದೆ. ಬೆಂಗಳೂರು ಕಟ್ಟಿದ ಕೆಂಪೇಗೌಡ ವಿಶಾಲ ಬಯಲು ಪ್ರದೇಶವನ್ನು ಆಯ್ಕೆ ಮಾಡಿಕೊಂಡು ಕೃಷಿಗೆ ಪೂರಕವಾದ ಕೆರೆ- ಕಟ್ಟೆ ನಿರ್ಮಾಣ ಮಾಡಿದ್ದರು. ಇಂತಹ ಮಹಾನ್ ಪುರುಷರ ಜಯಂತಿಗೆ ಯಾವುದೇ ಪಕ್ಷ ಬೇಧವಿಲ್ಲದೆ ಎಲ್ಲರೂ ಒಗ್ಗೂಡಿ ಕೆಂಪೇಗೌಡ ಜಯಂತಿಯನ್ನು ಆಚರಿಸಬೇಕಿದೆ ಎಂದು ಹೇಳಿದರು.

ತಾಲೂಕಿನಲ್ಲಿ ರಾಜ್ಯ ಒಕ್ಕಲಿಗರ ಸಂಘದಲ್ಲಿ ಸುಮಾರು 25 ಸಾವಿರ ಮಂದಿ ಸದಸ್ಯತ್ವ ಹೊಂದಿದ್ದು, ಎಲ್ಲರೂ  ಕಾರ್ಯಕ್ರಮದಲ್ಲಿ ಭಾಗಿಯಾಗಬೇಕೆಂದರು ಮನವಿ ಮಾಡಿದರು.

ಈ ವೇಳೆ ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ, ಮುಖಂಡರಾದ ಲಕ್ಷ್ಮಿಪತಿ, ನರಸಿಂಹಣ್ಣ, ಅಶ್ವಥ್ ನಾರಾಯಣ ಗೌಡ, ವಿಶ್ವಾಸ್ ಹನುಮಂತೇಗೌಡ ಸೇರಿದಂತೆ ಇತರರು ಉಪಸ್ಥಿರಿದ್ದಜುಲೈ

Ramesh Babu

Journalist

Recent Posts

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

7 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

13 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

14 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

2 days ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

2 days ago