ಪ್ರತಿಯೊಬ್ಬರಿಗೂ ಸಕಾಲದಲ್ಲಿ ನರ್ಸರಿ ಗಿಡಗಳು ದೊರಕಬೇಕೆನ್ನುವ ಉದ್ದೇಶದಿಂದ ಸರ್ಕಾರ ನರ್ಸರಿಯನ್ನು ಅಭಿವೃದ್ಧಿಪಡಿಸುವಲ್ಲಿ ಸ್ವಸಾಹಾಯ ಸಂಘಗಳಿಗೆ ಉತ್ತೇಜನ ನೀಡುತ್ತಿದೆ ಎಂದು ಜಿ.ಪಂ ಉಪಕಾರ್ಯದರ್ಶಿ ಟಿ.ಕೆ ರಮೇಶ್ ಹೇಳಿದರು.
ದೊಡ್ಡಬಳ್ಳಾಪುರ ತಾಲೂಕಿನ ತೋಟಗಾರಿಕ ಕ್ಷೇತ್ರದಲ್ಲಿ ಜಿಲ್ಲಾ ಪಂಚಾಯತ್ ಹಾಗೂ ತೋಟಗಾರಿಕೆ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಸ್ವ ಸಹಾಯ ಮಹಿಳಾ ಸಂಘದಿಂದ ಮಂಗಳವಾರ ನರ್ಸರಿ ಅಭಿವೃದ್ಧಿಪಡಿಸುವ ಕುರಿತು ಕಾರ್ಯಾಗಾರವನ್ನು ನಡೆಸಲಾಯಿತು.
ಈ ವೇಳೆ ಮಾತನಾಡಿದ ಅವರು, ವಿವಿಧ ಇಲಾಖೆಗಳ ಸಹಾಯದೊಂದಿಗೆ ಅಧಿಕಾರಿಗಳ ಸಮ್ಮುಖದಲ್ಲಿ ತರಬೇತಿ ಕಾರ್ಯಕ್ರಮ ನಡೆಸುತ್ತಿರುವುದು ಅರ್ಥಪೂರ್ಣವಾಗಿದೆ. ಸರಕಾರ ಬೇಡಿಕೆಗೆ ಅನುಗುಣವಾಗಿ ನರ್ಸರಿ ಸಸಿಗಳನ್ನು ಪ್ರತಿಮನೆಗೂ ತಲುಪಿಸಲು ಸಾಧ್ಯವಾಗುತಿಲ್ಲ ಆದ್ದರಿಂದ ಸ್ವಸಹಾಯ ಸಂಘಗಳ ಮೂಲಕ ತರಬೇತಿ ನೀಡಿ ನರ್ಸರಿಗಳನ್ನು ಉತ್ತೇಜಿಸಿ ಎಲ್ಲಿರಿಗೂ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಈ ಕಾರ್ಯಗಾರ ಹಮ್ಮಿಕೊಳ್ಳಲಾಗಿದೆ. ಈಗಾಗಲೇ ಜಿಲ್ಲೆಯಾದ್ಯಾಂತ 12 ಸ್ವಸಹಾಯ ಸಂಘಗಳನ್ನು ಗುರುತಿಸಿದ್ದು ನರ್ಸರಿ ಅಭಿವೃದ್ದಿಗಾಗಿ ಶ್ರಮಿಸಲಾಗುತ್ತಿದೆ ಎಂದರು.
2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…
ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್ನಲ್ಲಿದ್ದಾರೆ ಎನ್ನುವುದು…
ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…
ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಚುನಾವಣಾ ಆಯೋಗ…
ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…
ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…