ನಗರದಲ್ಲಿ ನರ್ಸರಿ ಅಭಿವೃದ್ಧಿ ಪಡಿಸುವ ಕುರಿತು ಕಾರ್ಯಾಗಾರ

ಪ್ರತಿಯೊಬ್ಬರಿಗೂ ಸಕಾಲದಲ್ಲಿ ನರ್ಸರಿ ಗಿಡಗಳು  ದೊರಕಬೇಕೆನ್ನುವ ಉದ್ದೇಶದಿಂದ ಸರ್ಕಾರ ನರ್ಸರಿಯನ್ನು ಅಭಿವೃದ್ಧಿಪಡಿಸುವಲ್ಲಿ ಸ್ವಸಾಹಾಯ ಸಂಘಗಳಿಗೆ  ಉತ್ತೇಜನ ನೀಡುತ್ತಿದೆ ಎಂದು  ಜಿ.ಪಂ ಉಪಕಾರ್ಯದರ್ಶಿ ಟಿ.ಕೆ  ರಮೇಶ್ ಹೇಳಿದರು.

ದೊಡ್ಡಬಳ್ಳಾಪುರ ತಾಲೂಕಿನ ತೋಟಗಾರಿಕ ಕ್ಷೇತ್ರದಲ್ಲಿ  ಜಿಲ್ಲಾ ಪಂಚಾಯತ್ ಹಾಗೂ ತೋಟಗಾರಿಕೆ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಸ್ವ ಸಹಾಯ ಮಹಿಳಾ ಸಂಘದಿಂದ  ಮಂಗಳವಾರ ನರ್ಸರಿ ಅಭಿವೃದ್ಧಿಪಡಿಸುವ ಕುರಿತು ಕಾರ್ಯಾಗಾರವನ್ನು ನಡೆಸಲಾಯಿತು.

ಈ ವೇಳೆ ಮಾತನಾಡಿದ ಅವರು, ವಿವಿಧ ಇಲಾಖೆಗಳ ಸಹಾಯದೊಂದಿಗೆ ಅಧಿಕಾರಿಗಳ ಸಮ್ಮುಖದಲ್ಲಿ  ತರಬೇತಿ ಕಾರ್ಯಕ್ರಮ ನಡೆಸುತ್ತಿರುವುದು ಅರ್ಥಪೂರ್ಣವಾಗಿದೆ. ಸರಕಾರ  ಬೇಡಿಕೆಗೆ ಅನುಗುಣವಾಗಿ ನರ್ಸರಿ ಸಸಿಗಳನ್ನು ಪ್ರತಿಮನೆಗೂ ತಲುಪಿಸಲು ಸಾಧ್ಯವಾಗುತಿಲ್ಲ ಆದ್ದರಿಂದ ಸ್ವಸಹಾಯ ಸಂಘಗಳ ಮೂಲಕ ತರಬೇತಿ ನೀಡಿ  ನರ್ಸರಿಗಳನ್ನು ಉತ್ತೇಜಿಸಿ ಎಲ್ಲಿರಿಗೂ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಈ ಕಾರ್ಯಗಾರ ಹಮ್ಮಿಕೊಳ್ಳಲಾಗಿದೆ. ಈಗಾಗಲೇ ಜಿಲ್ಲೆಯಾದ್ಯಾಂತ 12 ಸ್ವಸಹಾಯ ಸಂಘಗಳನ್ನು ಗುರುತಿಸಿದ್ದು  ನರ್ಸರಿ ಅಭಿವೃದ್ದಿಗಾಗಿ ಶ್ರಮಿಸಲಾಗುತ್ತಿದೆ ಎಂದರು.

ಈ ವೇಳೆ ಕಾರ್ಯಾಗಾರದಲ್ಲಿ ಜೆ.ಗುಣವಂತ, ತೋಟಗಾರಿಕೆ ಉಪನಿರ್ದೇಶಕರು,ಉಪ ನಿರ್ದೇಶಕರು ರೇಷ್ಮೆ ಇಲಾಖೆ, ಉಪ ಅರಣ್ಯ ಸಂರಕ್ಷಣಾಧಿಕಾರಿಗಳು,ಕಾರ್ಯನಿರ್ವಾಹಕ ಅಧಿಕಾರಿಗಳಾದ ಎನ್, ಮುನಿರಾಜು, ಮಧು, ಮಂಜುನಾಥ್ ರವರು ಉಪಸ್ಥಿತರಿದ್ದರು.ಕೆ.ವಿ.ಕೆ.ಯ ವಿಜ್ಞಾನಿಗಳಾದ ಡಾ.ಜಗದೀಶ್, ಬಿ.ಚುಂಚಯ್ಯ ಹಿ.ಸ.ತೋ.ನಿ ಹಾಗೂ ಹರ್ಷವರ್ಧನ್ ,ಉಪನಿರ್ದೇಶಕರು ವಿಷಯವಾರು ತರಬೇತಿ ನೀಡಿದರು. ಈ ಕಾರ್ಯಾಗಾರದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ನರ್ಸರಿ ಅಭಿವೃದ್ಧಿ ಪಡಿಸುವ ಸ್ವಸಹಾಯ ಸಂಘಗಳ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಭಾಗವಹಿಸಿದ್ದರು.

Ramesh Babu

Journalist

Recent Posts

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

36 minutes ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

1 hour ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

8 hours ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

8 hours ago

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

14 hours ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

1 day ago