ಪ್ರತಿಯೊಬ್ಬರಿಗೂ ಸಕಾಲದಲ್ಲಿ ನರ್ಸರಿ ಗಿಡಗಳು ದೊರಕಬೇಕೆನ್ನುವ ಉದ್ದೇಶದಿಂದ ಸರ್ಕಾರ ನರ್ಸರಿಯನ್ನು ಅಭಿವೃದ್ಧಿಪಡಿಸುವಲ್ಲಿ ಸ್ವಸಾಹಾಯ ಸಂಘಗಳಿಗೆ ಉತ್ತೇಜನ ನೀಡುತ್ತಿದೆ ಎಂದು ಜಿ.ಪಂ ಉಪಕಾರ್ಯದರ್ಶಿ ಟಿ.ಕೆ ರಮೇಶ್ ಹೇಳಿದರು.
ದೊಡ್ಡಬಳ್ಳಾಪುರ ತಾಲೂಕಿನ ತೋಟಗಾರಿಕ ಕ್ಷೇತ್ರದಲ್ಲಿ ಜಿಲ್ಲಾ ಪಂಚಾಯತ್ ಹಾಗೂ ತೋಟಗಾರಿಕೆ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಸ್ವ ಸಹಾಯ ಮಹಿಳಾ ಸಂಘದಿಂದ ಮಂಗಳವಾರ ನರ್ಸರಿ ಅಭಿವೃದ್ಧಿಪಡಿಸುವ ಕುರಿತು ಕಾರ್ಯಾಗಾರವನ್ನು ನಡೆಸಲಾಯಿತು.
ಈ ವೇಳೆ ಮಾತನಾಡಿದ ಅವರು, ವಿವಿಧ ಇಲಾಖೆಗಳ ಸಹಾಯದೊಂದಿಗೆ ಅಧಿಕಾರಿಗಳ ಸಮ್ಮುಖದಲ್ಲಿ ತರಬೇತಿ ಕಾರ್ಯಕ್ರಮ ನಡೆಸುತ್ತಿರುವುದು ಅರ್ಥಪೂರ್ಣವಾಗಿದೆ. ಸರಕಾರ ಬೇಡಿಕೆಗೆ ಅನುಗುಣವಾಗಿ ನರ್ಸರಿ ಸಸಿಗಳನ್ನು ಪ್ರತಿಮನೆಗೂ ತಲುಪಿಸಲು ಸಾಧ್ಯವಾಗುತಿಲ್ಲ ಆದ್ದರಿಂದ ಸ್ವಸಹಾಯ ಸಂಘಗಳ ಮೂಲಕ ತರಬೇತಿ ನೀಡಿ ನರ್ಸರಿಗಳನ್ನು ಉತ್ತೇಜಿಸಿ ಎಲ್ಲಿರಿಗೂ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಈ ಕಾರ್ಯಗಾರ ಹಮ್ಮಿಕೊಳ್ಳಲಾಗಿದೆ. ಈಗಾಗಲೇ ಜಿಲ್ಲೆಯಾದ್ಯಾಂತ 12 ಸ್ವಸಹಾಯ ಸಂಘಗಳನ್ನು ಗುರುತಿಸಿದ್ದು ನರ್ಸರಿ ಅಭಿವೃದ್ದಿಗಾಗಿ ಶ್ರಮಿಸಲಾಗುತ್ತಿದೆ ಎಂದರು.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…