ನಗರದಲ್ಲಿ ನರ್ಸರಿ ಅಭಿವೃದ್ಧಿ ಪಡಿಸುವ ಕುರಿತು ಕಾರ್ಯಾಗಾರ

ಪ್ರತಿಯೊಬ್ಬರಿಗೂ ಸಕಾಲದಲ್ಲಿ ನರ್ಸರಿ ಗಿಡಗಳು  ದೊರಕಬೇಕೆನ್ನುವ ಉದ್ದೇಶದಿಂದ ಸರ್ಕಾರ ನರ್ಸರಿಯನ್ನು ಅಭಿವೃದ್ಧಿಪಡಿಸುವಲ್ಲಿ ಸ್ವಸಾಹಾಯ ಸಂಘಗಳಿಗೆ  ಉತ್ತೇಜನ ನೀಡುತ್ತಿದೆ ಎಂದು  ಜಿ.ಪಂ ಉಪಕಾರ್ಯದರ್ಶಿ ಟಿ.ಕೆ  ರಮೇಶ್ ಹೇಳಿದರು.

ದೊಡ್ಡಬಳ್ಳಾಪುರ ತಾಲೂಕಿನ ತೋಟಗಾರಿಕ ಕ್ಷೇತ್ರದಲ್ಲಿ  ಜಿಲ್ಲಾ ಪಂಚಾಯತ್ ಹಾಗೂ ತೋಟಗಾರಿಕೆ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಸ್ವ ಸಹಾಯ ಮಹಿಳಾ ಸಂಘದಿಂದ  ಮಂಗಳವಾರ ನರ್ಸರಿ ಅಭಿವೃದ್ಧಿಪಡಿಸುವ ಕುರಿತು ಕಾರ್ಯಾಗಾರವನ್ನು ನಡೆಸಲಾಯಿತು.

ಈ ವೇಳೆ ಮಾತನಾಡಿದ ಅವರು, ವಿವಿಧ ಇಲಾಖೆಗಳ ಸಹಾಯದೊಂದಿಗೆ ಅಧಿಕಾರಿಗಳ ಸಮ್ಮುಖದಲ್ಲಿ  ತರಬೇತಿ ಕಾರ್ಯಕ್ರಮ ನಡೆಸುತ್ತಿರುವುದು ಅರ್ಥಪೂರ್ಣವಾಗಿದೆ. ಸರಕಾರ  ಬೇಡಿಕೆಗೆ ಅನುಗುಣವಾಗಿ ನರ್ಸರಿ ಸಸಿಗಳನ್ನು ಪ್ರತಿಮನೆಗೂ ತಲುಪಿಸಲು ಸಾಧ್ಯವಾಗುತಿಲ್ಲ ಆದ್ದರಿಂದ ಸ್ವಸಹಾಯ ಸಂಘಗಳ ಮೂಲಕ ತರಬೇತಿ ನೀಡಿ  ನರ್ಸರಿಗಳನ್ನು ಉತ್ತೇಜಿಸಿ ಎಲ್ಲಿರಿಗೂ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಈ ಕಾರ್ಯಗಾರ ಹಮ್ಮಿಕೊಳ್ಳಲಾಗಿದೆ. ಈಗಾಗಲೇ ಜಿಲ್ಲೆಯಾದ್ಯಾಂತ 12 ಸ್ವಸಹಾಯ ಸಂಘಗಳನ್ನು ಗುರುತಿಸಿದ್ದು  ನರ್ಸರಿ ಅಭಿವೃದ್ದಿಗಾಗಿ ಶ್ರಮಿಸಲಾಗುತ್ತಿದೆ ಎಂದರು.

ಈ ವೇಳೆ ಕಾರ್ಯಾಗಾರದಲ್ಲಿ ಜೆ.ಗುಣವಂತ, ತೋಟಗಾರಿಕೆ ಉಪನಿರ್ದೇಶಕರು,ಉಪ ನಿರ್ದೇಶಕರು ರೇಷ್ಮೆ ಇಲಾಖೆ, ಉಪ ಅರಣ್ಯ ಸಂರಕ್ಷಣಾಧಿಕಾರಿಗಳು,ಕಾರ್ಯನಿರ್ವಾಹಕ ಅಧಿಕಾರಿಗಳಾದ ಎನ್, ಮುನಿರಾಜು, ಮಧು, ಮಂಜುನಾಥ್ ರವರು ಉಪಸ್ಥಿತರಿದ್ದರು.ಕೆ.ವಿ.ಕೆ.ಯ ವಿಜ್ಞಾನಿಗಳಾದ ಡಾ.ಜಗದೀಶ್, ಬಿ.ಚುಂಚಯ್ಯ ಹಿ.ಸ.ತೋ.ನಿ ಹಾಗೂ ಹರ್ಷವರ್ಧನ್ ,ಉಪನಿರ್ದೇಶಕರು ವಿಷಯವಾರು ತರಬೇತಿ ನೀಡಿದರು. ಈ ಕಾರ್ಯಾಗಾರದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ನರ್ಸರಿ ಅಭಿವೃದ್ಧಿ ಪಡಿಸುವ ಸ್ವಸಹಾಯ ಸಂಘಗಳ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಭಾಗವಹಿಸಿದ್ದರು.

Ramesh Babu

Journalist

Recent Posts

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…

3 hours ago

ಮಹತ್ವಾಕಾಂಕ್ಷಿ ಕ್ವಿನ್ ಸಿಟಿಗೆ ಮೊದಲ ಬೃಹತ್ ಹೂಡಿಕೆ ಒಪ್ಪಂದ

ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…

13 hours ago

108 ಅರೋಗ್ಯ ಕವಚ ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರ ಉದ್ಘಾಟನೆ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ…

13 hours ago

SIR ಜಾಗೃತಿ ಹಾಗೂ ಮತದಾರರ ಪಟ್ಟಿಯ ಸಂರಕ್ಷಣೆ ಕಾರ್ಯಕ್ಕೆ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…

1 day ago

ಸಚಿವ ಸ್ಥಾನ ತ್ಯಾಗ ಮಾಡುವ ವಿಚಾರ “ಹೈಕಮಾಂಡ್ ತೀರ್ಮಾನಕ್ಕೆ ಬದ್ದ”- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…

1 day ago

ಬಿಜೆಪಿ – ಕಾಂಗ್ರೆಸ್ ನಡುವೆ SIR ಫೈಟ್: ಕಾಂಗ್ರೆಸ್ ನಾಯಕರ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ಕಿಡಿ

ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…

1 day ago