ಪ್ರತಿಯೊಬ್ಬರಿಗೂ ಸಕಾಲದಲ್ಲಿ ನರ್ಸರಿ ಗಿಡಗಳು ದೊರಕಬೇಕೆನ್ನುವ ಉದ್ದೇಶದಿಂದ ಸರ್ಕಾರ ನರ್ಸರಿಯನ್ನು ಅಭಿವೃದ್ಧಿಪಡಿಸುವಲ್ಲಿ ಸ್ವಸಾಹಾಯ ಸಂಘಗಳಿಗೆ ಉತ್ತೇಜನ ನೀಡುತ್ತಿದೆ ಎಂದು ಜಿ.ಪಂ ಉಪಕಾರ್ಯದರ್ಶಿ ಟಿ.ಕೆ ರಮೇಶ್ ಹೇಳಿದರು.
ದೊಡ್ಡಬಳ್ಳಾಪುರ ತಾಲೂಕಿನ ತೋಟಗಾರಿಕ ಕ್ಷೇತ್ರದಲ್ಲಿ ಜಿಲ್ಲಾ ಪಂಚಾಯತ್ ಹಾಗೂ ತೋಟಗಾರಿಕೆ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಸ್ವ ಸಹಾಯ ಮಹಿಳಾ ಸಂಘದಿಂದ ಮಂಗಳವಾರ ನರ್ಸರಿ ಅಭಿವೃದ್ಧಿಪಡಿಸುವ ಕುರಿತು ಕಾರ್ಯಾಗಾರವನ್ನು ನಡೆಸಲಾಯಿತು.
ಈ ವೇಳೆ ಮಾತನಾಡಿದ ಅವರು, ವಿವಿಧ ಇಲಾಖೆಗಳ ಸಹಾಯದೊಂದಿಗೆ ಅಧಿಕಾರಿಗಳ ಸಮ್ಮುಖದಲ್ಲಿ ತರಬೇತಿ ಕಾರ್ಯಕ್ರಮ ನಡೆಸುತ್ತಿರುವುದು ಅರ್ಥಪೂರ್ಣವಾಗಿದೆ. ಸರಕಾರ ಬೇಡಿಕೆಗೆ ಅನುಗುಣವಾಗಿ ನರ್ಸರಿ ಸಸಿಗಳನ್ನು ಪ್ರತಿಮನೆಗೂ ತಲುಪಿಸಲು ಸಾಧ್ಯವಾಗುತಿಲ್ಲ ಆದ್ದರಿಂದ ಸ್ವಸಹಾಯ ಸಂಘಗಳ ಮೂಲಕ ತರಬೇತಿ ನೀಡಿ ನರ್ಸರಿಗಳನ್ನು ಉತ್ತೇಜಿಸಿ ಎಲ್ಲಿರಿಗೂ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಈ ಕಾರ್ಯಗಾರ ಹಮ್ಮಿಕೊಳ್ಳಲಾಗಿದೆ. ಈಗಾಗಲೇ ಜಿಲ್ಲೆಯಾದ್ಯಾಂತ 12 ಸ್ವಸಹಾಯ ಸಂಘಗಳನ್ನು ಗುರುತಿಸಿದ್ದು ನರ್ಸರಿ ಅಭಿವೃದ್ದಿಗಾಗಿ ಶ್ರಮಿಸಲಾಗುತ್ತಿದೆ ಎಂದರು.
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…