ನಗರದಲ್ಲಿ ನರ್ಸರಿ ಅಭಿವೃದ್ಧಿ ಪಡಿಸುವ ಕುರಿತು ಕಾರ್ಯಾಗಾರ

ಪ್ರತಿಯೊಬ್ಬರಿಗೂ ಸಕಾಲದಲ್ಲಿ ನರ್ಸರಿ ಗಿಡಗಳು  ದೊರಕಬೇಕೆನ್ನುವ ಉದ್ದೇಶದಿಂದ ಸರ್ಕಾರ ನರ್ಸರಿಯನ್ನು ಅಭಿವೃದ್ಧಿಪಡಿಸುವಲ್ಲಿ ಸ್ವಸಾಹಾಯ ಸಂಘಗಳಿಗೆ  ಉತ್ತೇಜನ ನೀಡುತ್ತಿದೆ ಎಂದು  ಜಿ.ಪಂ ಉಪಕಾರ್ಯದರ್ಶಿ ಟಿ.ಕೆ  ರಮೇಶ್ ಹೇಳಿದರು.

ದೊಡ್ಡಬಳ್ಳಾಪುರ ತಾಲೂಕಿನ ತೋಟಗಾರಿಕ ಕ್ಷೇತ್ರದಲ್ಲಿ  ಜಿಲ್ಲಾ ಪಂಚಾಯತ್ ಹಾಗೂ ತೋಟಗಾರಿಕೆ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಸ್ವ ಸಹಾಯ ಮಹಿಳಾ ಸಂಘದಿಂದ  ಮಂಗಳವಾರ ನರ್ಸರಿ ಅಭಿವೃದ್ಧಿಪಡಿಸುವ ಕುರಿತು ಕಾರ್ಯಾಗಾರವನ್ನು ನಡೆಸಲಾಯಿತು.

ಈ ವೇಳೆ ಮಾತನಾಡಿದ ಅವರು, ವಿವಿಧ ಇಲಾಖೆಗಳ ಸಹಾಯದೊಂದಿಗೆ ಅಧಿಕಾರಿಗಳ ಸಮ್ಮುಖದಲ್ಲಿ  ತರಬೇತಿ ಕಾರ್ಯಕ್ರಮ ನಡೆಸುತ್ತಿರುವುದು ಅರ್ಥಪೂರ್ಣವಾಗಿದೆ. ಸರಕಾರ  ಬೇಡಿಕೆಗೆ ಅನುಗುಣವಾಗಿ ನರ್ಸರಿ ಸಸಿಗಳನ್ನು ಪ್ರತಿಮನೆಗೂ ತಲುಪಿಸಲು ಸಾಧ್ಯವಾಗುತಿಲ್ಲ ಆದ್ದರಿಂದ ಸ್ವಸಹಾಯ ಸಂಘಗಳ ಮೂಲಕ ತರಬೇತಿ ನೀಡಿ  ನರ್ಸರಿಗಳನ್ನು ಉತ್ತೇಜಿಸಿ ಎಲ್ಲಿರಿಗೂ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಈ ಕಾರ್ಯಗಾರ ಹಮ್ಮಿಕೊಳ್ಳಲಾಗಿದೆ. ಈಗಾಗಲೇ ಜಿಲ್ಲೆಯಾದ್ಯಾಂತ 12 ಸ್ವಸಹಾಯ ಸಂಘಗಳನ್ನು ಗುರುತಿಸಿದ್ದು  ನರ್ಸರಿ ಅಭಿವೃದ್ದಿಗಾಗಿ ಶ್ರಮಿಸಲಾಗುತ್ತಿದೆ ಎಂದರು.

ಈ ವೇಳೆ ಕಾರ್ಯಾಗಾರದಲ್ಲಿ ಜೆ.ಗುಣವಂತ, ತೋಟಗಾರಿಕೆ ಉಪನಿರ್ದೇಶಕರು,ಉಪ ನಿರ್ದೇಶಕರು ರೇಷ್ಮೆ ಇಲಾಖೆ, ಉಪ ಅರಣ್ಯ ಸಂರಕ್ಷಣಾಧಿಕಾರಿಗಳು,ಕಾರ್ಯನಿರ್ವಾಹಕ ಅಧಿಕಾರಿಗಳಾದ ಎನ್, ಮುನಿರಾಜು, ಮಧು, ಮಂಜುನಾಥ್ ರವರು ಉಪಸ್ಥಿತರಿದ್ದರು.ಕೆ.ವಿ.ಕೆ.ಯ ವಿಜ್ಞಾನಿಗಳಾದ ಡಾ.ಜಗದೀಶ್, ಬಿ.ಚುಂಚಯ್ಯ ಹಿ.ಸ.ತೋ.ನಿ ಹಾಗೂ ಹರ್ಷವರ್ಧನ್ ,ಉಪನಿರ್ದೇಶಕರು ವಿಷಯವಾರು ತರಬೇತಿ ನೀಡಿದರು. ಈ ಕಾರ್ಯಾಗಾರದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ನರ್ಸರಿ ಅಭಿವೃದ್ಧಿ ಪಡಿಸುವ ಸ್ವಸಹಾಯ ಸಂಘಗಳ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಭಾಗವಹಿಸಿದ್ದರು.

Ramesh Babu

Journalist

Recent Posts

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

24 minutes ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

5 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

9 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

10 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

11 hours ago

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

21 hours ago