ನಗರದಲ್ಲಿ ನರ್ಸರಿ ಅಭಿವೃದ್ಧಿ ಪಡಿಸುವ ಕುರಿತು ಕಾರ್ಯಾಗಾರ

ಪ್ರತಿಯೊಬ್ಬರಿಗೂ ಸಕಾಲದಲ್ಲಿ ನರ್ಸರಿ ಗಿಡಗಳು  ದೊರಕಬೇಕೆನ್ನುವ ಉದ್ದೇಶದಿಂದ ಸರ್ಕಾರ ನರ್ಸರಿಯನ್ನು ಅಭಿವೃದ್ಧಿಪಡಿಸುವಲ್ಲಿ ಸ್ವಸಾಹಾಯ ಸಂಘಗಳಿಗೆ  ಉತ್ತೇಜನ ನೀಡುತ್ತಿದೆ ಎಂದು  ಜಿ.ಪಂ ಉಪಕಾರ್ಯದರ್ಶಿ ಟಿ.ಕೆ  ರಮೇಶ್ ಹೇಳಿದರು.

ದೊಡ್ಡಬಳ್ಳಾಪುರ ತಾಲೂಕಿನ ತೋಟಗಾರಿಕ ಕ್ಷೇತ್ರದಲ್ಲಿ  ಜಿಲ್ಲಾ ಪಂಚಾಯತ್ ಹಾಗೂ ತೋಟಗಾರಿಕೆ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಸ್ವ ಸಹಾಯ ಮಹಿಳಾ ಸಂಘದಿಂದ  ಮಂಗಳವಾರ ನರ್ಸರಿ ಅಭಿವೃದ್ಧಿಪಡಿಸುವ ಕುರಿತು ಕಾರ್ಯಾಗಾರವನ್ನು ನಡೆಸಲಾಯಿತು.

ಈ ವೇಳೆ ಮಾತನಾಡಿದ ಅವರು, ವಿವಿಧ ಇಲಾಖೆಗಳ ಸಹಾಯದೊಂದಿಗೆ ಅಧಿಕಾರಿಗಳ ಸಮ್ಮುಖದಲ್ಲಿ  ತರಬೇತಿ ಕಾರ್ಯಕ್ರಮ ನಡೆಸುತ್ತಿರುವುದು ಅರ್ಥಪೂರ್ಣವಾಗಿದೆ. ಸರಕಾರ  ಬೇಡಿಕೆಗೆ ಅನುಗುಣವಾಗಿ ನರ್ಸರಿ ಸಸಿಗಳನ್ನು ಪ್ರತಿಮನೆಗೂ ತಲುಪಿಸಲು ಸಾಧ್ಯವಾಗುತಿಲ್ಲ ಆದ್ದರಿಂದ ಸ್ವಸಹಾಯ ಸಂಘಗಳ ಮೂಲಕ ತರಬೇತಿ ನೀಡಿ  ನರ್ಸರಿಗಳನ್ನು ಉತ್ತೇಜಿಸಿ ಎಲ್ಲಿರಿಗೂ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಈ ಕಾರ್ಯಗಾರ ಹಮ್ಮಿಕೊಳ್ಳಲಾಗಿದೆ. ಈಗಾಗಲೇ ಜಿಲ್ಲೆಯಾದ್ಯಾಂತ 12 ಸ್ವಸಹಾಯ ಸಂಘಗಳನ್ನು ಗುರುತಿಸಿದ್ದು  ನರ್ಸರಿ ಅಭಿವೃದ್ದಿಗಾಗಿ ಶ್ರಮಿಸಲಾಗುತ್ತಿದೆ ಎಂದರು.

ಈ ವೇಳೆ ಕಾರ್ಯಾಗಾರದಲ್ಲಿ ಜೆ.ಗುಣವಂತ, ತೋಟಗಾರಿಕೆ ಉಪನಿರ್ದೇಶಕರು,ಉಪ ನಿರ್ದೇಶಕರು ರೇಷ್ಮೆ ಇಲಾಖೆ, ಉಪ ಅರಣ್ಯ ಸಂರಕ್ಷಣಾಧಿಕಾರಿಗಳು,ಕಾರ್ಯನಿರ್ವಾಹಕ ಅಧಿಕಾರಿಗಳಾದ ಎನ್, ಮುನಿರಾಜು, ಮಧು, ಮಂಜುನಾಥ್ ರವರು ಉಪಸ್ಥಿತರಿದ್ದರು.ಕೆ.ವಿ.ಕೆ.ಯ ವಿಜ್ಞಾನಿಗಳಾದ ಡಾ.ಜಗದೀಶ್, ಬಿ.ಚುಂಚಯ್ಯ ಹಿ.ಸ.ತೋ.ನಿ ಹಾಗೂ ಹರ್ಷವರ್ಧನ್ ,ಉಪನಿರ್ದೇಶಕರು ವಿಷಯವಾರು ತರಬೇತಿ ನೀಡಿದರು. ಈ ಕಾರ್ಯಾಗಾರದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ನರ್ಸರಿ ಅಭಿವೃದ್ಧಿ ಪಡಿಸುವ ಸ್ವಸಹಾಯ ಸಂಘಗಳ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಭಾಗವಹಿಸಿದ್ದರು.

Ramesh Babu

Journalist

Recent Posts

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

1 hour ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

2 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

3 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

4 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

11 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 days ago