Categories: Home

ನಗರದಲ್ಲಿ ನವೆಂಬರ್‌ 30 ರಿಂದ ಡಿಸೆಂಬರ್ 15ರ ವರೆಗೆ “ಬೆಂಗಳೂರು ಹಬ್ಬ” ಆಚರಣೆ

ಬೆಂಗಳೂರು: ಇದೇ ನವೆಂಬರ್‌ 30 ರಿಂದ ಡಿಸೆಂಬರ್ 15ರ ವರೆಗೆ “ಬೆಂಗಳೂರು ಹಬ್ಬ”ವನ್ನು ವಿಜೃಂಭಣೆಯಿಂದ ಆಚರಿಸಲು ಸಕಲ ಸಿದ್ಧತೆ ನಡೆಯುತ್ತಿದೆ.

ಬೆಂಗಳೂರಿನ ಶ್ರೀಮಂತ ಕಲೆ, ಸಾಹಿತ್ಯ ಸಂಸ್ಕೃತಿಯನ್ನು ಪ್ರತಿಬಿಂಬಿಸಲು ಅನ್‌ಬಾಕ್ಸಿಂಗ್‌ ಬೆಂಗಳೂರು ಫೌಂಡೇಷನ್‌, ರಾಜ್ಯ ಸರಕಾರದ ಸಹಭಾಗಿತ್ವದಲ್ಲಿ “ಬೆಂಗಳೂರು ಹಬ್ಬ” ಎರಡನೇ ಆವೃತ್ತಿಯನ್ನು ಅದ್ಧೂರಿಯಿಂದ ಆಚರಿಸಲು ಸಜ್ಜಾಗಿದೆ.

ನವೆಂಬರ್‌ 30ರಂದು ಅದ್ಧೂರಿಯಾಗಿ ಚಾಲನೆ ಪಡೆಯಲಿರುವ ಬೆಂಗಳೂರು ಹಬ್ಬ 16 ದಿನಗಳ ಕಾಲ ನಡೆಯಲಿದ್ದು, ನಮ್ಮ ನಾಡು, ನುಡಿ, ಕಲೆ, ಸಾಹಿತ್ಯ, ಸಂಸ್ಕೃತಿ, ನಾಟಕ, ಸಂಗೀತ, ನೃತ್ಯ, ಚಿತ್ರಕಲೆ, ವಿವಿಧ ರೀತಿಯ ಮಳಿಗೆಗಳ ಆಯೋಜನೆ ಸೇರಿದಂತೆ ಸಾರ್ವಜನಿಕರನ್ನು ಮನಸೂರೆಗೊಳಿಸುವ 500ಕ್ಕೂ ಅಧಿಕ ಕಾರ್ಯಕ್ರಮಗಳನ್ನು ನಗರದ 40ಕ್ಕೂ ಹೆಚ್ಚು ಸ್ಥಳದಲ್ಲಿ ಆಯೋಜಿಸಲಾಗಿದೆ. ಪ್ರಮುಖವಾಗಿ ನಗರದ ಫ್ರೀಡಂ ಪಾರ್ಕ್, ಬೆಂಗಳೂರು ಇಂಟರ್ನ್ಯಾಷನಲ್ ಸೆಂಟರ್ (BIC), ಮಲ್ಲೇಶ್ವರದ ಪಂಚವಟಿ, ಕಾಮರಾಜ್ ರಸ್ತೆಯ ಸಭಾ ಮತ್ತು NGMA ನಂತಹ ಜನಪ್ರಿಯ ಸ್ಥಳಗಳಲ್ಲಿ ಕಾರ್ಯಕ್ರಮಗಳು ಜರುಗಲಿವೆ.

*ಕಾರ್ಯಕ್ರಮಗಳ ವಿವರ:*

ನವೆಂಬರ್‌ ೩೦ ರಿಂದ ಪ್ರತಿದಿನ ೧೦ಕ್ಕೂ ಅಧಿಕ ಕಾರ್ಯಕ್ರಮಗಳು ವಿವಿಧ ಸ್ಥಳಗಳಲ್ಲಿ ನಡೆಯಲಿದೆ. ಗೋಡೆ ಚಿತ್ರ, ಕಲಾ ಪ್ರದರ್ಶನ, ಬೆಂಗಳೂರು ಸಮಸ್ಯೆ ಬಗೆಹರಿಸುವ “ಬೆಂಗಳೂರು ಚಾಲೆಂಜ್‌”, 38 ಪ್ರತಿಭಾವಂತ ಕಲಾವಿದರನ್ನು ಒಳಗೊಂಡ ಬೃಹತ್‌ ಜಾನಪದ ಸಂಗೀತ ಕಾರ್ಯಕ್ರಮ, ಬೊಂಬೆಯಾಟ, ನಾಟಕ ಪ್ರದರ್ಶನ ಹೀಗೆ ಅನೇಕ ಕಾರ್ಯಕ್ರಮ ನಡೆಯಲಿದೆ. ಪ್ರತಿದಿನದ ಕಾರ್ಯಕ್ರಮಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು https://blrhubba.in ವೆಬ್‌ಸೈಟ್‌ನಲ್ಲಿ ಪಡೆಯಬಹುದಾಗಿದ್ದು, ಈ ವೆಬ್‌ಸೈಟ್‌ ಮೂಲಕವೇ ನಿಮ್ಮ ಹಾಜರಾತಿಯನ್ನು ಸಹ ಕಾಯ್ದಿರಿಸಬಹುದು, ನೇರವಾಗಿಯೂ ಸಹ ಕಾರ್ಯಕ್ರಮಕ್ಕೆ ತೆರಳಬಹುದು. ಬಹುತೇಕ ಕಾರ್ಯಕ್ರಮಗಳಿಗೆ ಮುಕ್ತ ಅವಕಾಶವಿರಲಿದ್ದು, ನಿಮ್ಮ ನೆಚ್ಚಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ನೀವೂ ಸಹ ಬೆಂಗಳೂರು ಹಬ್ಬದ ಅನುಭವ ಪಡೆಯಬಹುದು.

ಕುವೆಂಪು ಅವರ 120 ನೇ ಜನ್ಮದಿನೋತ್ಸವ ಆಚರಣೆ

ಬೆಂಗಳೂರು ಹಬ್ಬದ ಮತ್ತೊಂದು ವಿಶೇಷವೆಂದರೆ, ಸಾಹಿತ್ಯ ಲೋಕದ ದಿಗ್ಗಜರಾದ ಕವಿ ಕುವೆಂಪು ಅವರ 120 ನೇ ಜನ್ಮ ವಾರ್ಷಿಕೋತ್ಸವದ ಭಾಗವಾಗಿ “ಗಲಗಲ ಗದ್ದಲ” ಕಾರ್ಯಕ್ರಮವನ್ನು ಅಯೋಜಿಸಲಾಗಿದ್ದು, ಈ ವೇಳೆ ಪ್ರಸಿದ್ಧ ಸಾಹಿತಿಗಳು ಭಾಗವಹಿಸಲಿದ್ದಾರೆ.

ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಮಾತನಾಡಿ, “ಬಿಎಲ್‌ಆರ್ ಹಬ್ಬವು ನಮ್ಮ ರಾಜ್ಯದ ಶ್ರೀಮಂತ ಸಂಸ್ಕೃತಿ ಮತ್ತು ಸೃಜನಶೀಲತೆಯ ಸಾರವನ್ನು ಒಟ್ಟುಗೂಡಿಸಲು ನಡೆಸುತ್ತಿರುವ ಪ್ರಮುಖ ಆಚರಣೆಯಾಗಿದೆ. ಈ ಕಾರ್ಯಕ್ರಮವು ಕರ್ನಾಟಕಕ್ಕೆ ತನ್ನ ಪರಂಪರೆ, ಕಲೆ ಮತ್ತು ನಾವೀನ್ಯತೆಯನ್ನು ಜಗತ್ತಿಗೆ ಪ್ರದರ್ಶಿಸಲು ಒಂದು ಅನನ್ಯ ವೇದಿಕೆಯಾಗಿ ಕಾರ್ಯನಿರ್ವಹಿಸಲಿದ್ದು, ಹೊಸದನ್ನು ಅಳವಡಿಸಿಕೊಳ್ಳುವಾಗ ನಮ್ಮ ಶ್ರೀಮಂತ ಸಂಪ್ರದಾಯಗಳಲ್ಲಿ ಹೆಮ್ಮೆಯನ್ನು ಬೆಳೆಸುತ್ತದೆ. BLR ಹಬ್ಬಾ ನಮ್ಮ ಸಮುದಾಯದೊಳಗೆ ಆಳವಾದ ಸಂಪರ್ಕಗಳನ್ನು ಪ್ರೇರೇಪಿಸುತ್ತದೆ ಮತ್ತು ಭಾಗವಹಿಸುವ ಎಲ್ಲರ ಕಲ್ಪನೆಯನ್ನು ಪ್ರಚೋದಿಸಲಿದೆ ಎಂದರು.

ಬಿಎಲ್‌ಆರ್ ಹಬ್ಬ ಮುಖ್ಯ ಸಂಚಾಲಕ ರವಿಚಂದರ್ ವಿ. ಮಾತನಾಡಿ, ಬಿಎಲ್‌ಆರ್ ಹಬ್ಬವು ನಗರದ ಸಂಸ್ಕೃತಿ, ಸೃಜನಶೀಲತೆ ಮತ್ತು ಸಮುದಾಯದ ಪ್ರಜ್ಞೆಯ ಆಚರಣೆಯಾಗಿದೆ. ಈ ಹಬ್ಬವು ಎಲ್ಲಾ ವರ್ಗದ ಜನರನ್ನು ಒಟ್ಟುಗೂಡಿಸಿ, ಕಲೆ, ಸಂಪ್ರದಾಯ ಮತ್ತು ನಾವೀನ್ಯತೆಯಲ್ಲಿ ಬೆಂಗಳೂರಿನ ವೈಶಿಷ್ಟಯವನ್ನು ಜಗತ್ತಿಗೆ ಸಾರಲಿದೆ. ಹೀಗಾಗಿ ಪ್ರತಿಯೊಬ್ಬರು ನಮ್ಮೂರ ಹಬ್ಬದಲ್ಲಿ ಭಾಗವಹಿಸಬೇಕು ಎಂದು ಆಹ್ವಾನಿಸಿದರು.

ಅನ್‌ಬಾಕ್ಸಿಂಗ್‌ ಬಿಎಲ್‌ಆರ್‌ನ ಸಿಇಒ ಮತ್ತು ಸಹ-ಸಂಸ್ಥಾಪಕಿ ಮಾಲಿನಿ ಗೋಯಲ್ ಮಾತನಾಡಿ, “ಬಿಎಲ್‌ಆರ್ ಹಬ್ಬ ಬೆಂಗಳೂರಿನ ನಿಜವಾದ ಸಾರವನ್ನು, ಅದರ ವೈವಿಧ್ಯತೆ, ಸೃಜನಶೀಲತೆ ಯನ್ನು ಆಚರಿಸುವ ಆಂದೋಲನವಾಗಿದೆ. ನಮ್ಮ ನಗರ ಕೇವಲ ಉದ್ಯೋಗಕ್ಕಷ್ಟೇ ಸೀಮಿತವಾಗದೇ ಇಲ್ಲಿನ ವಿಶಿಷ್ಟ ಸಂಸ್ಕೃತಿ, ಕಲೆಯನ್ನು ಉಳಿಸುವುದು ನಮ್ಮ ಧ್ಯೇಯವಾಗಿದೆ ಎಂದು ಹೇಳಿದರು. ಈ ಹಬ್ಬವನ್ನು ಗೋ ನೇಟಿವ್, ಝೆರೋಧಾ, ಮಣಿಪಾಲ್ ಫೌಂಡೇಶನ್ ಮತ್ತು ಪ್ರೆಸ್ಟೀಜ್ ಗ್ರೂಪ್ ಇತರರ ಸಹಕಾರದೊಂದಿಗೆ ಆಚರಿಸಲಾಗುತ್ತಿದೆ ಎಂದು ಹೇಳಿದರು.

Ramesh Babu

Journalist

Recent Posts

ಬಳ್ಳಾರಿ ಬ್ಯಾನರ್ ಗಲಾಟೆ ವಿಚಾರ: ನಿನ್ನೆಯಷ್ಟೇ ಬಳ್ಳಾರಿ ಎಸ್ಪಿಯಾಗಿ ಅಧಿಕಾರ ವಹಿಸಿಕೊಂಡಿದ್ದ ಪವನ್ ನೆಜ್ಜೂರ್ ಅಮಾನತು

ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾದ ಘಟನೆಗೆ ಸಂಬಂಧಿಸಿದಂತೆ ಬಳ್ಳಾರಿ ಜಿಲ್ಲಾ…

3 hours ago

ಹೆಲ್ಮೆಟ್ ಹಾಕದ ಬೈಕ್ ಸವಾರರಿಗೆ ದಂಡದ ಬಿಸಿ ಮುಟ್ಟಿಸಿದ ದೊಡ್ಡಬಳ್ಳಾಪುರ ನಗರ ಠಾಣಾ ಪೊಲೀಸರು

ಹೆಲ್ಮೆಟ್ ಧರಿಸದ ಕಾರಣದಿಂದಲೇ ಅಪಘಾತಗಳಲ್ಲಿ ಹೆಚ್ಚಿನ ಸಾವು, ನೋವುಗಳು ಸಂಭವಿಸುತ್ತಲೇ ಇವೆ. ಇತ್ತೀಚಿನ ದಿನಗಳಲ್ಲಿ ಯುವ ಸಮುದಾಯ ಸಂಚಾರ ನಿಯಮ…

4 hours ago

ಅಕ್ರಮ ವಲಸೆ ತಪ್ಪು…. ದಯವಿಟ್ಟು ಸಕ್ರಮ ಬದುಕು ನಮ್ಮದಾಗಲಿ…..

ಯಾವುದು ನ್ಯಾಯ...... ಅಕ್ರಮ ವಲಸಿಗರು, ಬುಲ್ಡೋಜರ್ ಸಂಸ್ಕೃತಿ, ಭ್ರಷ್ಟ ಆಡಳಿತ ವ್ಯವಸ್ಥೆ, ಕೆಟ್ಟ ರಾಜಕೀಯ, ತಲೆಬುಡವಿಲ್ಲದ ಗಾಳಿ ಸುದ್ದಿಗಳು, ವಿವೇಚನೆಯಿಲ್ಲದ…

13 hours ago

ಹೊಸ ವರ್ಷ ದಿನದಂದೇ ದೊಡ್ಡಬಳ್ಳಾಪುರದಲ್ಲಿ ಯುವಕನ ಕೊಲೆ…? ನ್ಯೂ ಇಯರ್ ಸೆಲೆಬ್ರೇಷನ್ ನೆಪದಲ್ಲಿ ರೂಮಿನಲ್ಲಿ ಎಣ್ಣೆ ಪಾರ್ಟಿ ಅರೆಂಜ್: ನ್ಯೂ ಇಯರ್ ಪಾರ್ಟಿ ಮಾಡೋಣ ಬಾ ಎಂದು ಫ್ರೆಂಡ್ನ ಕರೆಸಿಕೊಂಡು ಜೀವ ತೆಗೆದ್ನಾ ಆಸಾಮಿ….?

ಒರಿಸ್ಸಾದಿಂದ ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿಯಲ್ಲಿ ಕೆಲಸಕ್ಕೆಂದು ಬಂದು ಹೊಸ ವರ್ಷ ದಿನದಂದೇ ತನ್ನ ಸ್ನೇಹಿತನಿಂದಲೇ ಕೊಲೆಯಾದ್ನಾ ಯುವಕ....? 2025ರ ಡಿಸೆಂಬರ್ 31…

1 day ago

ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಯಲ್ಲಿ 300ಕ್ಕೂ ಹೆಚ್ಚು ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಪೂರ್ಣ- ನೇತ್ರ ತಜ್ಞ ಡಾ. ಅರುಣ್ ಹನುಮಂತರಾಯ

ದೊಡ್ಡಬಳ್ಳಾಪುರದ ಸರ್ಕಾರಿ ಆಸ್ಪತ್ರೆಯಲ್ಲಿ 2025ನೇ ಸಾಲಿನಲ್ಲಿ 300ಕ್ಕೂ ಹೆಚ್ಚು ಉಚಿತವಾಗಿ ಕಣ್ಣಿನ ಶಸ್ತ್ರಚಿಕಿತ್ಸೆಗಳನ್ನು ಪೂರ್ಣಗೊಳಿಸುವ ಮೂಲಕ, ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗಳಲ್ಲಿ…

1 day ago

800 ವರ್ಷಗಳ ಇತಿಹಾಸಯುಳ್ಳ ಆವತಿ ತಿಮ್ಮರಾಯಸ್ವಾಮಿ ಬೆಟ್ಟದಲ್ಲಿ ಭಕ್ತರ ದಂಡು

ಇಂದು ಹೊಸ ವರ್ಷ ಹಿನ್ನೆಲೆ 800 ವರ್ಷಗಳ ಇತಿಹಾಸಯುಳ್ಳ ಆವತಿ ತಿಮ್ಮರಾಯಸ್ವಾಮಿ ಬೆಟ್ಟದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ದೇವರ…

1 day ago