ಬೆಂಗಳೂರು: ಇದೇ ನವೆಂಬರ್ 30 ರಿಂದ ಡಿಸೆಂಬರ್ 15ರ ವರೆಗೆ “ಬೆಂಗಳೂರು ಹಬ್ಬ”ವನ್ನು ವಿಜೃಂಭಣೆಯಿಂದ ಆಚರಿಸಲು ಸಕಲ ಸಿದ್ಧತೆ ನಡೆಯುತ್ತಿದೆ.
ಬೆಂಗಳೂರಿನ ಶ್ರೀಮಂತ ಕಲೆ, ಸಾಹಿತ್ಯ ಸಂಸ್ಕೃತಿಯನ್ನು ಪ್ರತಿಬಿಂಬಿಸಲು ಅನ್ಬಾಕ್ಸಿಂಗ್ ಬೆಂಗಳೂರು ಫೌಂಡೇಷನ್, ರಾಜ್ಯ ಸರಕಾರದ ಸಹಭಾಗಿತ್ವದಲ್ಲಿ “ಬೆಂಗಳೂರು ಹಬ್ಬ” ಎರಡನೇ ಆವೃತ್ತಿಯನ್ನು ಅದ್ಧೂರಿಯಿಂದ ಆಚರಿಸಲು ಸಜ್ಜಾಗಿದೆ.
ನವೆಂಬರ್ 30ರಂದು ಅದ್ಧೂರಿಯಾಗಿ ಚಾಲನೆ ಪಡೆಯಲಿರುವ ಬೆಂಗಳೂರು ಹಬ್ಬ 16 ದಿನಗಳ ಕಾಲ ನಡೆಯಲಿದ್ದು, ನಮ್ಮ ನಾಡು, ನುಡಿ, ಕಲೆ, ಸಾಹಿತ್ಯ, ಸಂಸ್ಕೃತಿ, ನಾಟಕ, ಸಂಗೀತ, ನೃತ್ಯ, ಚಿತ್ರಕಲೆ, ವಿವಿಧ ರೀತಿಯ ಮಳಿಗೆಗಳ ಆಯೋಜನೆ ಸೇರಿದಂತೆ ಸಾರ್ವಜನಿಕರನ್ನು ಮನಸೂರೆಗೊಳಿಸುವ 500ಕ್ಕೂ ಅಧಿಕ ಕಾರ್ಯಕ್ರಮಗಳನ್ನು ನಗರದ 40ಕ್ಕೂ ಹೆಚ್ಚು ಸ್ಥಳದಲ್ಲಿ ಆಯೋಜಿಸಲಾಗಿದೆ. ಪ್ರಮುಖವಾಗಿ ನಗರದ ಫ್ರೀಡಂ ಪಾರ್ಕ್, ಬೆಂಗಳೂರು ಇಂಟರ್ನ್ಯಾಷನಲ್ ಸೆಂಟರ್ (BIC), ಮಲ್ಲೇಶ್ವರದ ಪಂಚವಟಿ, ಕಾಮರಾಜ್ ರಸ್ತೆಯ ಸಭಾ ಮತ್ತು NGMA ನಂತಹ ಜನಪ್ರಿಯ ಸ್ಥಳಗಳಲ್ಲಿ ಕಾರ್ಯಕ್ರಮಗಳು ಜರುಗಲಿವೆ.
*ಕಾರ್ಯಕ್ರಮಗಳ ವಿವರ:*
ನವೆಂಬರ್ ೩೦ ರಿಂದ ಪ್ರತಿದಿನ ೧೦ಕ್ಕೂ ಅಧಿಕ ಕಾರ್ಯಕ್ರಮಗಳು ವಿವಿಧ ಸ್ಥಳಗಳಲ್ಲಿ ನಡೆಯಲಿದೆ. ಗೋಡೆ ಚಿತ್ರ, ಕಲಾ ಪ್ರದರ್ಶನ, ಬೆಂಗಳೂರು ಸಮಸ್ಯೆ ಬಗೆಹರಿಸುವ “ಬೆಂಗಳೂರು ಚಾಲೆಂಜ್”, 38 ಪ್ರತಿಭಾವಂತ ಕಲಾವಿದರನ್ನು ಒಳಗೊಂಡ ಬೃಹತ್ ಜಾನಪದ ಸಂಗೀತ ಕಾರ್ಯಕ್ರಮ, ಬೊಂಬೆಯಾಟ, ನಾಟಕ ಪ್ರದರ್ಶನ ಹೀಗೆ ಅನೇಕ ಕಾರ್ಯಕ್ರಮ ನಡೆಯಲಿದೆ. ಪ್ರತಿದಿನದ ಕಾರ್ಯಕ್ರಮಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು https://blrhubba.in ವೆಬ್ಸೈಟ್ನಲ್ಲಿ ಪಡೆಯಬಹುದಾಗಿದ್ದು, ಈ ವೆಬ್ಸೈಟ್ ಮೂಲಕವೇ ನಿಮ್ಮ ಹಾಜರಾತಿಯನ್ನು ಸಹ ಕಾಯ್ದಿರಿಸಬಹುದು, ನೇರವಾಗಿಯೂ ಸಹ ಕಾರ್ಯಕ್ರಮಕ್ಕೆ ತೆರಳಬಹುದು. ಬಹುತೇಕ ಕಾರ್ಯಕ್ರಮಗಳಿಗೆ ಮುಕ್ತ ಅವಕಾಶವಿರಲಿದ್ದು, ನಿಮ್ಮ ನೆಚ್ಚಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ನೀವೂ ಸಹ ಬೆಂಗಳೂರು ಹಬ್ಬದ ಅನುಭವ ಪಡೆಯಬಹುದು.
ಬೆಂಗಳೂರು ಹಬ್ಬದ ಮತ್ತೊಂದು ವಿಶೇಷವೆಂದರೆ, ಸಾಹಿತ್ಯ ಲೋಕದ ದಿಗ್ಗಜರಾದ ಕವಿ ಕುವೆಂಪು ಅವರ 120 ನೇ ಜನ್ಮ ವಾರ್ಷಿಕೋತ್ಸವದ ಭಾಗವಾಗಿ “ಗಲಗಲ ಗದ್ದಲ” ಕಾರ್ಯಕ್ರಮವನ್ನು ಅಯೋಜಿಸಲಾಗಿದ್ದು, ಈ ವೇಳೆ ಪ್ರಸಿದ್ಧ ಸಾಹಿತಿಗಳು ಭಾಗವಹಿಸಲಿದ್ದಾರೆ.
ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಮಾತನಾಡಿ, “ಬಿಎಲ್ಆರ್ ಹಬ್ಬವು ನಮ್ಮ ರಾಜ್ಯದ ಶ್ರೀಮಂತ ಸಂಸ್ಕೃತಿ ಮತ್ತು ಸೃಜನಶೀಲತೆಯ ಸಾರವನ್ನು ಒಟ್ಟುಗೂಡಿಸಲು ನಡೆಸುತ್ತಿರುವ ಪ್ರಮುಖ ಆಚರಣೆಯಾಗಿದೆ. ಈ ಕಾರ್ಯಕ್ರಮವು ಕರ್ನಾಟಕಕ್ಕೆ ತನ್ನ ಪರಂಪರೆ, ಕಲೆ ಮತ್ತು ನಾವೀನ್ಯತೆಯನ್ನು ಜಗತ್ತಿಗೆ ಪ್ರದರ್ಶಿಸಲು ಒಂದು ಅನನ್ಯ ವೇದಿಕೆಯಾಗಿ ಕಾರ್ಯನಿರ್ವಹಿಸಲಿದ್ದು, ಹೊಸದನ್ನು ಅಳವಡಿಸಿಕೊಳ್ಳುವಾಗ ನಮ್ಮ ಶ್ರೀಮಂತ ಸಂಪ್ರದಾಯಗಳಲ್ಲಿ ಹೆಮ್ಮೆಯನ್ನು ಬೆಳೆಸುತ್ತದೆ. BLR ಹಬ್ಬಾ ನಮ್ಮ ಸಮುದಾಯದೊಳಗೆ ಆಳವಾದ ಸಂಪರ್ಕಗಳನ್ನು ಪ್ರೇರೇಪಿಸುತ್ತದೆ ಮತ್ತು ಭಾಗವಹಿಸುವ ಎಲ್ಲರ ಕಲ್ಪನೆಯನ್ನು ಪ್ರಚೋದಿಸಲಿದೆ ಎಂದರು.
ಬಿಎಲ್ಆರ್ ಹಬ್ಬ ಮುಖ್ಯ ಸಂಚಾಲಕ ರವಿಚಂದರ್ ವಿ. ಮಾತನಾಡಿ, ಬಿಎಲ್ಆರ್ ಹಬ್ಬವು ನಗರದ ಸಂಸ್ಕೃತಿ, ಸೃಜನಶೀಲತೆ ಮತ್ತು ಸಮುದಾಯದ ಪ್ರಜ್ಞೆಯ ಆಚರಣೆಯಾಗಿದೆ. ಈ ಹಬ್ಬವು ಎಲ್ಲಾ ವರ್ಗದ ಜನರನ್ನು ಒಟ್ಟುಗೂಡಿಸಿ, ಕಲೆ, ಸಂಪ್ರದಾಯ ಮತ್ತು ನಾವೀನ್ಯತೆಯಲ್ಲಿ ಬೆಂಗಳೂರಿನ ವೈಶಿಷ್ಟಯವನ್ನು ಜಗತ್ತಿಗೆ ಸಾರಲಿದೆ. ಹೀಗಾಗಿ ಪ್ರತಿಯೊಬ್ಬರು ನಮ್ಮೂರ ಹಬ್ಬದಲ್ಲಿ ಭಾಗವಹಿಸಬೇಕು ಎಂದು ಆಹ್ವಾನಿಸಿದರು.
ಅನ್ಬಾಕ್ಸಿಂಗ್ ಬಿಎಲ್ಆರ್ನ ಸಿಇಒ ಮತ್ತು ಸಹ-ಸಂಸ್ಥಾಪಕಿ ಮಾಲಿನಿ ಗೋಯಲ್ ಮಾತನಾಡಿ, “ಬಿಎಲ್ಆರ್ ಹಬ್ಬ ಬೆಂಗಳೂರಿನ ನಿಜವಾದ ಸಾರವನ್ನು, ಅದರ ವೈವಿಧ್ಯತೆ, ಸೃಜನಶೀಲತೆ ಯನ್ನು ಆಚರಿಸುವ ಆಂದೋಲನವಾಗಿದೆ. ನಮ್ಮ ನಗರ ಕೇವಲ ಉದ್ಯೋಗಕ್ಕಷ್ಟೇ ಸೀಮಿತವಾಗದೇ ಇಲ್ಲಿನ ವಿಶಿಷ್ಟ ಸಂಸ್ಕೃತಿ, ಕಲೆಯನ್ನು ಉಳಿಸುವುದು ನಮ್ಮ ಧ್ಯೇಯವಾಗಿದೆ ಎಂದು ಹೇಳಿದರು. ಈ ಹಬ್ಬವನ್ನು ಗೋ ನೇಟಿವ್, ಝೆರೋಧಾ, ಮಣಿಪಾಲ್ ಫೌಂಡೇಶನ್ ಮತ್ತು ಪ್ರೆಸ್ಟೀಜ್ ಗ್ರೂಪ್ ಇತರರ ಸಹಕಾರದೊಂದಿಗೆ ಆಚರಿಸಲಾಗುತ್ತಿದೆ ಎಂದು ಹೇಳಿದರು.
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…