ನಗರದಲ್ಲಿ ನಿಲ್ಲದ ಬೈಕ್ ಕಳ್ಳರ ಹಾವಳಿ: ಕೋರ್ಟ್, ತಾಲೂಕು ಕಚೇರಿ ಸರ್ಕಲ್ ಗಳೇ ಕಳ್ಳರ ಹಾಟ್ ಸ್ಪಾಟ್. ಕೋರ್ಟ್, ಕಚೇರಿಗೆ ಬರುವ ಸಾರ್ವಜನಿಕರಲ್ಲಿ ಆತಂಕ

ಕೋರ್ಟ್, ತಾಲ್ಲೂಕು ಕಚೇರಿಗೆ ಬರುವ ಸಾರ್ವಜನಿಕರನ್ನೇ ಟಾರ್ಗೆಟ್ ಮಾಡಿರುವ ಬೈಕ್ ಕಳ್ಳರು ಸದ್ದಿಲ್ಲದೆ ದಿನಕ್ಕೊಂದು ಬೈಕ್ ಕಳ್ಳತನ ಮಾಡುತ್ತಿದ್ದಾರೆ. ಜುಲೈ 27ರಂದು ನಗರದ ಕೋರ್ಟ್ ಮುಂಭಾಗ ನಿಲ್ಲಿಸಿದ್ದ ಬೈಕ್ ಕಳವು ಆಗಿದೆ. ಕೋರ್ಟ್ ಕೆಲಸದ ಮೇರೆಗೆ ವಕೀಲರನ್ನು ಕಾಣಲು ಗೋಪಾಲ ಎಂಬುವರು ಆಕ್ಟೀವ್ ಹೋಂಡಾ ಬೈಕ್ ನಲ್ಲಿ ಕೋರ್ಟ್ ಬಳಿ ಬಂದಿದ್ದು, ಮೋಟಾರ್ ಬೈಕ್ ನ್ನು ಬೆಳಗ್ಗೆ 11 ಗಂಟೆ ಸಮಯದಲ್ಲಿ ಕೋರ್ಟ್ ಮುಂಭಾಗದಲ್ಲಿ ನಿಲ್ಲಿಸಿ ಕೋರ್ಟ್ ಒಳಗಡೆ ಹೋಗಿದ್ದಾರೆ. ಕೆಲಸ ಮುಗಿಸಿ ವಾಪಸ್ ಬರುವಷ್ಟರಲ್ಲಿ ಅಂದರೆ 12.50 ಗಂಟೆಗೆ ಬಂದು ನೋಡಿದಾಗ ದ್ವಿಚಕ್ರ ವಾಹನ ನಾಪತ್ತೆ ಆಗಿದೆ.

ಅದೇ ರೀತಿ ಮರುದಿನ ಜುಲೈ 28 ರಂದು ತಾಲೂಕು ಕಚೇರಿ ಬಳಿಯ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿದ್ದ ಹೀರೊ ಹೋಂಡಾ ಸ್ಪ್ಲೆಂಡರ್ ಪ್ಲಸ್ ಬೈಕ್ ನ್ನು ನಕಲಿ ಕೀ ಬಳಸಿ ಕದ್ದೊಯ್ದಿದ್ದಾರೆ. ಮಂಜುನಾಥ.ಬಿ ಎಂಬುವರು ಸರ್ವೇಯರ್ ಆಗಿ ಕೆಲಸ ಮಾಡುತ್ತಾರೆ. ಎಂದಿನಂತೆ ಬೆಳಗ್ಗೆ 10 ಗಂಟೆಯಲ್ಲಿ ಪಾರ್ಕಿಂಗ್ ಸ್ಥಳದಲ್ಲಿ ಬೈಕ್ ಪಾರ್ಕ್ ಮಾಡಿ ಕೆಲಸಕ್ಕೆ ಹೋಗಿದ್ದಾರೆ. ನಂತರ ಸಂಜೆ 4:45ಕ್ಕೆ ಕೆಲಸ ಮುಗಿದ ಬಳಿ ಬೆಳಗ್ಗೆ ನಿಲ್ಲಿಸಿದ್ದ ಜಾಗದಲ್ಲಿ ಬೈಕ್ ನಾಪತ್ತೆ ಆಗಿದೆ.

ಈ ಎರಡು ಪ್ರಕರಣಗಳು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್ ಕಳವು ಪ್ರಕರಣಗಳು ಪದೇ ಪದೇ ಮರುಕಳಿಸುತ್ತಿರುವುದರಿಂದ ಬೈಕ್ ಸವಾರರು ಬೆಚ್ಚಿಬಿದ್ದಿದ್ದಾರೆ.

ಜನ ಗಿಜಿಗುಡುವ, ಸಾರ್ವಜನಿಕ ಸ್ಥಳಗಳಲ್ಲಿ ಪಾರ್ಕ್ ಮಾಡಿರೋ ಬೈಕ್ ಗಳನ್ನು ಹಾಡಹಗಲೇ ಕಳವು ಮಾಡುತ್ತಿರುವ‌ ಖದೀಮರ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳಬೇಕಿದೆ. ನಗರದ ಪ್ರಮುಖ ಕಚೇರಿ, ವೃತ್ತ, ರಸ್ತೆ, ಸೇರಿದಂತೆ ವಿವಿಧೆಡೆ ಸಿಸಿಟಿವಿ ಅಳವಡಿಸಿ ಇಂತಹ ಕಳ್ಳತನ ಪ್ರಕರಣಗಳನ್ನು ಪತ್ತೆಹಚ್ಚಿ, ಕಳ್ಳರ ಹಾವಳಿಯನ್ನು ತಡೆಗಟ್ಟಬೇಕು ಎಂದು ಸಂಬಂಧಿಸಿದ ಇಲಾಖೆಗೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

Ramesh Babu

Journalist

Recent Posts

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

11 minutes ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

5 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

7 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

10 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

1 day ago

ಕೃಷಿ ಹೊಂಡಗಳಲ್ಲಿ ಅನಾಹುತ ತಡೆಗೆ ಜಾಗೃತಿ ಸಭೆ: ಸುರಕ್ಷತೆಗೆ ಕಟ್ಟುನಿಟ್ಟಿನ ಸೂಚನೆ

ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…

1 day ago