ಕೋರ್ಟ್, ತಾಲ್ಲೂಕು ಕಚೇರಿಗೆ ಬರುವ ಸಾರ್ವಜನಿಕರನ್ನೇ ಟಾರ್ಗೆಟ್ ಮಾಡಿರುವ ಬೈಕ್ ಕಳ್ಳರು ಸದ್ದಿಲ್ಲದೆ ದಿನಕ್ಕೊಂದು ಬೈಕ್ ಕಳ್ಳತನ ಮಾಡುತ್ತಿದ್ದಾರೆ. ಜುಲೈ 27ರಂದು ನಗರದ ಕೋರ್ಟ್ ಮುಂಭಾಗ ನಿಲ್ಲಿಸಿದ್ದ ಬೈಕ್ ಕಳವು ಆಗಿದೆ. ಕೋರ್ಟ್ ಕೆಲಸದ ಮೇರೆಗೆ ವಕೀಲರನ್ನು ಕಾಣಲು ಗೋಪಾಲ ಎಂಬುವರು ಆಕ್ಟೀವ್ ಹೋಂಡಾ ಬೈಕ್ ನಲ್ಲಿ ಕೋರ್ಟ್ ಬಳಿ ಬಂದಿದ್ದು, ಮೋಟಾರ್ ಬೈಕ್ ನ್ನು ಬೆಳಗ್ಗೆ 11 ಗಂಟೆ ಸಮಯದಲ್ಲಿ ಕೋರ್ಟ್ ಮುಂಭಾಗದಲ್ಲಿ ನಿಲ್ಲಿಸಿ ಕೋರ್ಟ್ ಒಳಗಡೆ ಹೋಗಿದ್ದಾರೆ. ಕೆಲಸ ಮುಗಿಸಿ ವಾಪಸ್ ಬರುವಷ್ಟರಲ್ಲಿ ಅಂದರೆ 12.50 ಗಂಟೆಗೆ ಬಂದು ನೋಡಿದಾಗ ದ್ವಿಚಕ್ರ ವಾಹನ ನಾಪತ್ತೆ ಆಗಿದೆ.
ಅದೇ ರೀತಿ ಮರುದಿನ ಜುಲೈ 28 ರಂದು ತಾಲೂಕು ಕಚೇರಿ ಬಳಿಯ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿದ್ದ ಹೀರೊ ಹೋಂಡಾ ಸ್ಪ್ಲೆಂಡರ್ ಪ್ಲಸ್ ಬೈಕ್ ನ್ನು ನಕಲಿ ಕೀ ಬಳಸಿ ಕದ್ದೊಯ್ದಿದ್ದಾರೆ. ಮಂಜುನಾಥ.ಬಿ ಎಂಬುವರು ಸರ್ವೇಯರ್ ಆಗಿ ಕೆಲಸ ಮಾಡುತ್ತಾರೆ. ಎಂದಿನಂತೆ ಬೆಳಗ್ಗೆ 10 ಗಂಟೆಯಲ್ಲಿ ಪಾರ್ಕಿಂಗ್ ಸ್ಥಳದಲ್ಲಿ ಬೈಕ್ ಪಾರ್ಕ್ ಮಾಡಿ ಕೆಲಸಕ್ಕೆ ಹೋಗಿದ್ದಾರೆ. ನಂತರ ಸಂಜೆ 4:45ಕ್ಕೆ ಕೆಲಸ ಮುಗಿದ ಬಳಿ ಬೆಳಗ್ಗೆ ನಿಲ್ಲಿಸಿದ್ದ ಜಾಗದಲ್ಲಿ ಬೈಕ್ ನಾಪತ್ತೆ ಆಗಿದೆ.
ಬೈಕ್ ಕಳವು ಪ್ರಕರಣಗಳು ಪದೇ ಪದೇ ಮರುಕಳಿಸುತ್ತಿರುವುದರಿಂದ ಬೈಕ್ ಸವಾರರು ಬೆಚ್ಚಿಬಿದ್ದಿದ್ದಾರೆ.
ಜನ ಗಿಜಿಗುಡುವ, ಸಾರ್ವಜನಿಕ ಸ್ಥಳಗಳಲ್ಲಿ ಪಾರ್ಕ್ ಮಾಡಿರೋ ಬೈಕ್ ಗಳನ್ನು ಹಾಡಹಗಲೇ ಕಳವು ಮಾಡುತ್ತಿರುವ ಖದೀಮರ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳಬೇಕಿದೆ. ನಗರದ ಪ್ರಮುಖ ಕಚೇರಿ, ವೃತ್ತ, ರಸ್ತೆ, ಸೇರಿದಂತೆ ವಿವಿಧೆಡೆ ಸಿಸಿಟಿವಿ ಅಳವಡಿಸಿ ಇಂತಹ ಕಳ್ಳತನ ಪ್ರಕರಣಗಳನ್ನು ಪತ್ತೆಹಚ್ಚಿ, ಕಳ್ಳರ ಹಾವಳಿಯನ್ನು ತಡೆಗಟ್ಟಬೇಕು ಎಂದು ಸಂಬಂಧಿಸಿದ ಇಲಾಖೆಗೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…