ಕೋರ್ಟ್, ತಾಲ್ಲೂಕು ಕಚೇರಿಗೆ ಬರುವ ಸಾರ್ವಜನಿಕರನ್ನೇ ಟಾರ್ಗೆಟ್ ಮಾಡಿರುವ ಬೈಕ್ ಕಳ್ಳರು ಸದ್ದಿಲ್ಲದೆ ದಿನಕ್ಕೊಂದು ಬೈಕ್ ಕಳ್ಳತನ ಮಾಡುತ್ತಿದ್ದಾರೆ. ಜುಲೈ 27ರಂದು ನಗರದ ಕೋರ್ಟ್ ಮುಂಭಾಗ ನಿಲ್ಲಿಸಿದ್ದ ಬೈಕ್ ಕಳವು ಆಗಿದೆ. ಕೋರ್ಟ್ ಕೆಲಸದ ಮೇರೆಗೆ ವಕೀಲರನ್ನು ಕಾಣಲು ಗೋಪಾಲ ಎಂಬುವರು ಆಕ್ಟೀವ್ ಹೋಂಡಾ ಬೈಕ್ ನಲ್ಲಿ ಕೋರ್ಟ್ ಬಳಿ ಬಂದಿದ್ದು, ಮೋಟಾರ್ ಬೈಕ್ ನ್ನು ಬೆಳಗ್ಗೆ 11 ಗಂಟೆ ಸಮಯದಲ್ಲಿ ಕೋರ್ಟ್ ಮುಂಭಾಗದಲ್ಲಿ ನಿಲ್ಲಿಸಿ ಕೋರ್ಟ್ ಒಳಗಡೆ ಹೋಗಿದ್ದಾರೆ. ಕೆಲಸ ಮುಗಿಸಿ ವಾಪಸ್ ಬರುವಷ್ಟರಲ್ಲಿ ಅಂದರೆ 12.50 ಗಂಟೆಗೆ ಬಂದು ನೋಡಿದಾಗ ದ್ವಿಚಕ್ರ ವಾಹನ ನಾಪತ್ತೆ ಆಗಿದೆ.
ಅದೇ ರೀತಿ ಮರುದಿನ ಜುಲೈ 28 ರಂದು ತಾಲೂಕು ಕಚೇರಿ ಬಳಿಯ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿದ್ದ ಹೀರೊ ಹೋಂಡಾ ಸ್ಪ್ಲೆಂಡರ್ ಪ್ಲಸ್ ಬೈಕ್ ನ್ನು ನಕಲಿ ಕೀ ಬಳಸಿ ಕದ್ದೊಯ್ದಿದ್ದಾರೆ. ಮಂಜುನಾಥ.ಬಿ ಎಂಬುವರು ಸರ್ವೇಯರ್ ಆಗಿ ಕೆಲಸ ಮಾಡುತ್ತಾರೆ. ಎಂದಿನಂತೆ ಬೆಳಗ್ಗೆ 10 ಗಂಟೆಯಲ್ಲಿ ಪಾರ್ಕಿಂಗ್ ಸ್ಥಳದಲ್ಲಿ ಬೈಕ್ ಪಾರ್ಕ್ ಮಾಡಿ ಕೆಲಸಕ್ಕೆ ಹೋಗಿದ್ದಾರೆ. ನಂತರ ಸಂಜೆ 4:45ಕ್ಕೆ ಕೆಲಸ ಮುಗಿದ ಬಳಿ ಬೆಳಗ್ಗೆ ನಿಲ್ಲಿಸಿದ್ದ ಜಾಗದಲ್ಲಿ ಬೈಕ್ ನಾಪತ್ತೆ ಆಗಿದೆ.
ಬೈಕ್ ಕಳವು ಪ್ರಕರಣಗಳು ಪದೇ ಪದೇ ಮರುಕಳಿಸುತ್ತಿರುವುದರಿಂದ ಬೈಕ್ ಸವಾರರು ಬೆಚ್ಚಿಬಿದ್ದಿದ್ದಾರೆ.
ಜನ ಗಿಜಿಗುಡುವ, ಸಾರ್ವಜನಿಕ ಸ್ಥಳಗಳಲ್ಲಿ ಪಾರ್ಕ್ ಮಾಡಿರೋ ಬೈಕ್ ಗಳನ್ನು ಹಾಡಹಗಲೇ ಕಳವು ಮಾಡುತ್ತಿರುವ ಖದೀಮರ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳಬೇಕಿದೆ. ನಗರದ ಪ್ರಮುಖ ಕಚೇರಿ, ವೃತ್ತ, ರಸ್ತೆ, ಸೇರಿದಂತೆ ವಿವಿಧೆಡೆ ಸಿಸಿಟಿವಿ ಅಳವಡಿಸಿ ಇಂತಹ ಕಳ್ಳತನ ಪ್ರಕರಣಗಳನ್ನು ಪತ್ತೆಹಚ್ಚಿ, ಕಳ್ಳರ ಹಾವಳಿಯನ್ನು ತಡೆಗಟ್ಟಬೇಕು ಎಂದು ಸಂಬಂಧಿಸಿದ ಇಲಾಖೆಗೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…