ನಗರದಲ್ಲಿ ಪೊಲೀಸರಿಂದ ಫೂಟ್ ಪೆಟ್ರೋಲಿಂಗ್

ಅಪರಾಧ ಪ್ರಕರಣಗಳ ನಿಯಂತ್ರಣ, ಕಟ್ಟುನಿಟ್ಟಿನ ಸಂಚಾರಿ ನಿಯಮಗಳ ಜಾರಿಗೆ ಟೊಂಕ‌ ಕಟ್ಟಿರುವ ಪೊಲೀಸರು ನಗರದ ವಿವಿಧೆಡೆ ನಿತ್ಯ ಫೂಟ್ ಪ್ಯಾಟ್ರೋಲಿಂಗ್(ಪಥ ಸಂಚಲನ) ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ.

ಬುಧವಾರ ರಾತ್ರಿ ನಗರ ಹಾಗೂ ಗ್ರಾಮಾಂತರ ಠಾಣೆ ಪೊಲೀಸರು ಜಂಟಿಯಾಗಿ ಡಿವೈಎಸ್ಪಿ ಪಿ.ರವಿ ಅವರ ನೇತೃತ್ವದಲ್ಲಿ ಫೂಟ್ ಪ್ಯಾಟ್ರೋಲಿಂಗ್ ನಡೆಸಿದರು.

ನಗರದ ನೆಲದಾಂಜನೇಯ ಸ್ವಾಮಿ ದೇವಾಲಯದಿಂದ ಆರಂಭವಾದ ಪಥ ಸಂಚಲನವು ಬಸ್ ನಿಲ್ದಾಣ, ವಿವೇಕಾನಂದ ರಸ್ತೆ, ಚೌಕದ ಮೂಲಕ ಮುಗವಾಳಪ್ಪ ವೃತ್ತ, ಶಾಂತಿನಗರ, ಜಾಲಪ್ಪ ಕಾಲೇಜುವರೆಗೂ ಸಾಗಿತು.

ಬಸ್ ನಿಲ್ದಾಣದಲ್ಲಿ ಅಡ್ಡಾದಿಡ್ಡಿ ನಿಲ್ಲಿಸಿದ್ದ ಬಸ್,ಆಟೊ, ಇತರೆ ವಾಹನ ಚಾಲಕರಿಗೆ ಸಂಚಾರಿ ನಿಯಮ ಪಾಲನೆ ಮಾಡುವಂತೆ ತಿಳಿಹೇಳಿದರು. ಬೀದಿ ಬದಿ ವ್ಯಾಪಾರಿಗಳು ರಸ್ತೆಗೆ ಬಂದು ವ್ಯಾಪಾರ ಮಾಡದಂತೆ ಎಚ್ಚರಿಕೆ ನೀಡಿದರು. ಎಲ್ಲೆಂದರಲ್ಲಿ ನಿಲ್ಲಿಸಿ ಪ್ರಯಾಣಿಕರನ್ನು ಹತ್ತಿಸಿಕೊಳ್ಳುತ್ತಿದ್ದ ಆಟೊ ಚಾಲಕರು, ದಾರಿಯಲ್ಲಿ ಬೇಕಾಬಿಟ್ಟಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಚಾಲಕರಿಗೆ ವಾರ್ನಿಂಗ್ ನೀಡಿದರು.

ಡಿವೈಎಸ್ಪಿ ಪಿ. ರವಿ, ಗ್ರಾಮಾಂತರ ಪೊಲೀಸ್ ಠಾಣೆ ಇನ್ ಸ್ಪೆಕ್ಟರ್ ಡಿ.ಎಂ. ಮುನಿಕೃಷ್ಣ, ನಗರ ಠಾಣೆ ಪೊಲೀಸ್ ಇನ್ ಸ್ಪೆಕ್ಟರ್ ಎ.ಅಮರೇಶ ಗೌಡ ಅವರು ದಾರಿಯುದ್ದಕ್ಕೂ ಜನರಿಗೆ ಅರಿವು ಮೂಡಿಸುತ್ತಾ ಸಾಗಿದರು.

ಅಂಗಡಿಗಳಲ್ಲಿ ತಪಾಸಣೆ

ಜಾಲಪ್ಪ ಕಾಲೇಜು ಬಳಿ ಪೊಲೀಸರು ಅಂಗಡಿಗಳಿಗೆ ದಿಢೀರ್ ಭೇಟಿ ನೀಡಿ ತಪಾಸಣೆ ಕೈಗೊಂಡರು. 100ಮೀ ವ್ಯಾಪ್ತಿಯಲ್ಲಿ ಗುಟ್ಕಾ, ಸಿಗರೇಟು ಮಾರಾಟ ಮಾಡುತ್ತಿದ್ದ ಅಂಗಡಿಗಳಿಂದ ತಂಬಾಕು ವಸ್ತುಗಳನ್ನು ವಶಪಡಿಸಿಕೊಂಡರು. ಜೊತೆಗೆ ಇನ್ನು ಮುಂದೆ ತಂಬಾಕು ಪದಾರ್ಥಗಳನ್ನು ಮಾರಾಟ ಮಾಡದಂತೆ ಎಚ್ಚರಿಕೆ ನೀಡಿದರು. ಈ ವೇಳೆ ಸ್ಥಳೀಯರು ಪೊಲೀಸರಿಗೆ ದೂರಿನ ಸುರಿಮಳೆಗೈದರು.

ಕಾಲೇಜು ಬಿಡುವ ಹೊತ್ತಿಗೆ (ಸಂಜೆ 4ಗಂಟೆ) ಪುಂಡರು ವ್ಹೀಲಿಂಗ್ ಮಾಡುತ್ತಾರೆ. ಹೆಣ್ಣು ಮಕ್ಕಳನ್ನು ಚುಡಾಯಿಸುವುದು ಹೆಚ್ಚಾಗಿದೆ. ನಿತ್ಯ ಆ ಸಮಯದಲ್ಲಿ ಪೊಲೀಸರನ್ನು ಮಫ್ತಿಯಲ್ಲಿ‌ ನಿಯೋಜಿಸಬೇಕು ಎಂದು ಮನವಿ ಮಾಡಿದರು. ಇದಲ್ಲದೇ ಕಾಲೇಜು ಮುಂದಿನ ರಸ್ತೆಯ ಹಂಪ್ ಗಳಿಗೆ ಬ್ಲಿಂಕಿಂಗ್ ಲೈಟ್ಸ್ ಅಳವಡಿಸುವಂತೆಯೂ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಡಿವೈಎಸ್ಪಿ ರವಿ ಅವರು, ಕಾಲೇಜು ಆಡಳಿತ ಮಂಡಳಿಯವರು ತಕ್ಷಣವೇ ರಸ್ತೆಯ ಹಂಪ್ ಗಳಿಗೆ ರೇಡಿಯಂ ಅಥವಾ ಬ್ಲಿಂಕಿಂಗ್ ಲೈಟ್ಸ್ ಅಳವಡಿಸಬೇಕು. ಪೊಲೀಸ್ ಸಿಬ್ಬಂದಿ ಇನ್ನು‌ಮುಂದೆ ಗಸ್ತು ಆರಂಭಿಸಲಿದ್ದಾರೆ. ಸ್ಥಳೀಯರು ಯಾವುದೇ ಸಮಸ್ಯೆ ಇದ್ದಲ್ಲಿ‌ ಪೊಲೀಸ್ ಸಹಾಯವಾಣಿ 112 ಗೆ ಕರೆ ಮಾಡಿ ತಿಳಿಸಬಹುದು. ದೂರು ನೀಡಿದವರ ಹೆಸರನ್ನು ಗೌಪ್ಯವಾಗಿ ಇಡಲಾಗುವುದು ಎಂದು ಹೇಳಿದರು.

Ramesh Babu

Journalist

Recent Posts

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

4 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

19 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

1 day ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

1 day ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

1 day ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

2 days ago