ಅಪರಾಧ ಪ್ರಕರಣಗಳ ನಿಯಂತ್ರಣ, ಕಟ್ಟುನಿಟ್ಟಿನ ಸಂಚಾರಿ ನಿಯಮಗಳ ಜಾರಿಗೆ ಟೊಂಕ ಕಟ್ಟಿರುವ ಪೊಲೀಸರು ನಗರದ ವಿವಿಧೆಡೆ ನಿತ್ಯ ಫೂಟ್ ಪ್ಯಾಟ್ರೋಲಿಂಗ್(ಪಥ ಸಂಚಲನ) ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ.
ಬುಧವಾರ ರಾತ್ರಿ ನಗರ ಹಾಗೂ ಗ್ರಾಮಾಂತರ ಠಾಣೆ ಪೊಲೀಸರು ಜಂಟಿಯಾಗಿ ಡಿವೈಎಸ್ಪಿ ಪಿ.ರವಿ ಅವರ ನೇತೃತ್ವದಲ್ಲಿ ಫೂಟ್ ಪ್ಯಾಟ್ರೋಲಿಂಗ್ ನಡೆಸಿದರು.
ನಗರದ ನೆಲದಾಂಜನೇಯ ಸ್ವಾಮಿ ದೇವಾಲಯದಿಂದ ಆರಂಭವಾದ ಪಥ ಸಂಚಲನವು ಬಸ್ ನಿಲ್ದಾಣ, ವಿವೇಕಾನಂದ ರಸ್ತೆ, ಚೌಕದ ಮೂಲಕ ಮುಗವಾಳಪ್ಪ ವೃತ್ತ, ಶಾಂತಿನಗರ, ಜಾಲಪ್ಪ ಕಾಲೇಜುವರೆಗೂ ಸಾಗಿತು.
ಬಸ್ ನಿಲ್ದಾಣದಲ್ಲಿ ಅಡ್ಡಾದಿಡ್ಡಿ ನಿಲ್ಲಿಸಿದ್ದ ಬಸ್,ಆಟೊ, ಇತರೆ ವಾಹನ ಚಾಲಕರಿಗೆ ಸಂಚಾರಿ ನಿಯಮ ಪಾಲನೆ ಮಾಡುವಂತೆ ತಿಳಿಹೇಳಿದರು. ಬೀದಿ ಬದಿ ವ್ಯಾಪಾರಿಗಳು ರಸ್ತೆಗೆ ಬಂದು ವ್ಯಾಪಾರ ಮಾಡದಂತೆ ಎಚ್ಚರಿಕೆ ನೀಡಿದರು. ಎಲ್ಲೆಂದರಲ್ಲಿ ನಿಲ್ಲಿಸಿ ಪ್ರಯಾಣಿಕರನ್ನು ಹತ್ತಿಸಿಕೊಳ್ಳುತ್ತಿದ್ದ ಆಟೊ ಚಾಲಕರು, ದಾರಿಯಲ್ಲಿ ಬೇಕಾಬಿಟ್ಟಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಚಾಲಕರಿಗೆ ವಾರ್ನಿಂಗ್ ನೀಡಿದರು.
ಜಾಲಪ್ಪ ಕಾಲೇಜು ಬಳಿ ಪೊಲೀಸರು ಅಂಗಡಿಗಳಿಗೆ ದಿಢೀರ್ ಭೇಟಿ ನೀಡಿ ತಪಾಸಣೆ ಕೈಗೊಂಡರು. 100ಮೀ ವ್ಯಾಪ್ತಿಯಲ್ಲಿ ಗುಟ್ಕಾ, ಸಿಗರೇಟು ಮಾರಾಟ ಮಾಡುತ್ತಿದ್ದ ಅಂಗಡಿಗಳಿಂದ ತಂಬಾಕು ವಸ್ತುಗಳನ್ನು ವಶಪಡಿಸಿಕೊಂಡರು. ಜೊತೆಗೆ ಇನ್ನು ಮುಂದೆ ತಂಬಾಕು ಪದಾರ್ಥಗಳನ್ನು ಮಾರಾಟ ಮಾಡದಂತೆ ಎಚ್ಚರಿಕೆ ನೀಡಿದರು. ಈ ವೇಳೆ ಸ್ಥಳೀಯರು ಪೊಲೀಸರಿಗೆ ದೂರಿನ ಸುರಿಮಳೆಗೈದರು.
ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…
ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…
ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…
ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…