ಅಪರಾಧ ಪ್ರಕರಣಗಳ ನಿಯಂತ್ರಣ, ಕಟ್ಟುನಿಟ್ಟಿನ ಸಂಚಾರಿ ನಿಯಮಗಳ ಜಾರಿಗೆ ಟೊಂಕ ಕಟ್ಟಿರುವ ಪೊಲೀಸರು ನಗರದ ವಿವಿಧೆಡೆ ನಿತ್ಯ ಫೂಟ್ ಪ್ಯಾಟ್ರೋಲಿಂಗ್(ಪಥ ಸಂಚಲನ) ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ.
ಬುಧವಾರ ರಾತ್ರಿ ನಗರ ಹಾಗೂ ಗ್ರಾಮಾಂತರ ಠಾಣೆ ಪೊಲೀಸರು ಜಂಟಿಯಾಗಿ ಡಿವೈಎಸ್ಪಿ ಪಿ.ರವಿ ಅವರ ನೇತೃತ್ವದಲ್ಲಿ ಫೂಟ್ ಪ್ಯಾಟ್ರೋಲಿಂಗ್ ನಡೆಸಿದರು.
ನಗರದ ನೆಲದಾಂಜನೇಯ ಸ್ವಾಮಿ ದೇವಾಲಯದಿಂದ ಆರಂಭವಾದ ಪಥ ಸಂಚಲನವು ಬಸ್ ನಿಲ್ದಾಣ, ವಿವೇಕಾನಂದ ರಸ್ತೆ, ಚೌಕದ ಮೂಲಕ ಮುಗವಾಳಪ್ಪ ವೃತ್ತ, ಶಾಂತಿನಗರ, ಜಾಲಪ್ಪ ಕಾಲೇಜುವರೆಗೂ ಸಾಗಿತು.
ಬಸ್ ನಿಲ್ದಾಣದಲ್ಲಿ ಅಡ್ಡಾದಿಡ್ಡಿ ನಿಲ್ಲಿಸಿದ್ದ ಬಸ್,ಆಟೊ, ಇತರೆ ವಾಹನ ಚಾಲಕರಿಗೆ ಸಂಚಾರಿ ನಿಯಮ ಪಾಲನೆ ಮಾಡುವಂತೆ ತಿಳಿಹೇಳಿದರು. ಬೀದಿ ಬದಿ ವ್ಯಾಪಾರಿಗಳು ರಸ್ತೆಗೆ ಬಂದು ವ್ಯಾಪಾರ ಮಾಡದಂತೆ ಎಚ್ಚರಿಕೆ ನೀಡಿದರು. ಎಲ್ಲೆಂದರಲ್ಲಿ ನಿಲ್ಲಿಸಿ ಪ್ರಯಾಣಿಕರನ್ನು ಹತ್ತಿಸಿಕೊಳ್ಳುತ್ತಿದ್ದ ಆಟೊ ಚಾಲಕರು, ದಾರಿಯಲ್ಲಿ ಬೇಕಾಬಿಟ್ಟಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಚಾಲಕರಿಗೆ ವಾರ್ನಿಂಗ್ ನೀಡಿದರು.
ಜಾಲಪ್ಪ ಕಾಲೇಜು ಬಳಿ ಪೊಲೀಸರು ಅಂಗಡಿಗಳಿಗೆ ದಿಢೀರ್ ಭೇಟಿ ನೀಡಿ ತಪಾಸಣೆ ಕೈಗೊಂಡರು. 100ಮೀ ವ್ಯಾಪ್ತಿಯಲ್ಲಿ ಗುಟ್ಕಾ, ಸಿಗರೇಟು ಮಾರಾಟ ಮಾಡುತ್ತಿದ್ದ ಅಂಗಡಿಗಳಿಂದ ತಂಬಾಕು ವಸ್ತುಗಳನ್ನು ವಶಪಡಿಸಿಕೊಂಡರು. ಜೊತೆಗೆ ಇನ್ನು ಮುಂದೆ ತಂಬಾಕು ಪದಾರ್ಥಗಳನ್ನು ಮಾರಾಟ ಮಾಡದಂತೆ ಎಚ್ಚರಿಕೆ ನೀಡಿದರು. ಈ ವೇಳೆ ಸ್ಥಳೀಯರು ಪೊಲೀಸರಿಗೆ ದೂರಿನ ಸುರಿಮಳೆಗೈದರು.
ಸಣ್ಣಪುಟ್ಟ ಜಗಳಗಳಿಂದ ಕೋರ್ಟಿನ ಮೆಟ್ಟಿಲೇರಿ ದೂರಾವಾಗಲು ನಿರ್ಧರಿಸಿದ್ದ ನಾಲ್ವರು ದಂಪತಿಗಳನ್ನು ಶನಿವಾರ ನಡೆದ ಲೋಕಾಅದಾಲತ್ ನಲ್ಲಿ ನ್ಯಾಯಾಧೀಶರುಗಳು ಹೇಳಿದ ಬುದ್ಧಿಮಾತಿನಿಂದ…
ಕೊಲ್ಲಿ ದೇಶಗಳಲ್ಲಿ ಯುದ್ಧದ ಪರಿಸ್ಥಿತಿ ಹಿನ್ನೆಲೆಯಲ್ಲಿ ಉಂಟಾದ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಗಳ ಪೂರೈಕೆ…
ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಆಹಾರ ಸಚಿವರು ಸೂಚಿಸಿದ್ದು, ಅದರಂತೆ ಗೃಹ ಬಳಕೆ…
ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಹಿನ್ನೆಲೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯೆ. ಈ ಸಮಸ್ಯೆ ಇನ್ನು ಒಂದು ವಾರಗಳ ಕಾಲ…
ಉಡುಪಿ : ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ನಡೆದ ಲೋಕಾಯುಕ್ತ ದಾಳಿಯ ಭಾಗವಾಗಿ ಉಡುಪಿ ಜಿಲ್ಲಾ ಅಬಕಾರಿ ಡಿಸಿ ಶ್ರೀನಿವಾಸ್ ಟಿ.ಎಂ…
ಬೆಂಗಳೂರು: ಸಿಲಿಕಾನ್ ಸಿಟಿಯ ವರ್ತೂರಿನಲ್ಲಿ ಭಯಾನಕ ಕೊಲೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪ್ರೀತಿಯ ಹೆಸರಿನಲ್ಲಿ ಮದುವೆಯ ಸತ್ಯವನ್ನು ಮುಚ್ಚಿಟ್ಟು, ಲಿವ್-ಇನ್…