ನಗರದಲ್ಲಿ ಪೊಲೀಸರಿಂದ ಫೂಟ್ ಪೆಟ್ರೋಲಿಂಗ್

ಅಪರಾಧ ಪ್ರಕರಣಗಳ ನಿಯಂತ್ರಣ, ಕಟ್ಟುನಿಟ್ಟಿನ ಸಂಚಾರಿ ನಿಯಮಗಳ ಜಾರಿಗೆ ಟೊಂಕ‌ ಕಟ್ಟಿರುವ ಪೊಲೀಸರು ನಗರದ ವಿವಿಧೆಡೆ ನಿತ್ಯ ಫೂಟ್ ಪ್ಯಾಟ್ರೋಲಿಂಗ್(ಪಥ ಸಂಚಲನ) ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ.

ಬುಧವಾರ ರಾತ್ರಿ ನಗರ ಹಾಗೂ ಗ್ರಾಮಾಂತರ ಠಾಣೆ ಪೊಲೀಸರು ಜಂಟಿಯಾಗಿ ಡಿವೈಎಸ್ಪಿ ಪಿ.ರವಿ ಅವರ ನೇತೃತ್ವದಲ್ಲಿ ಫೂಟ್ ಪ್ಯಾಟ್ರೋಲಿಂಗ್ ನಡೆಸಿದರು.

ನಗರದ ನೆಲದಾಂಜನೇಯ ಸ್ವಾಮಿ ದೇವಾಲಯದಿಂದ ಆರಂಭವಾದ ಪಥ ಸಂಚಲನವು ಬಸ್ ನಿಲ್ದಾಣ, ವಿವೇಕಾನಂದ ರಸ್ತೆ, ಚೌಕದ ಮೂಲಕ ಮುಗವಾಳಪ್ಪ ವೃತ್ತ, ಶಾಂತಿನಗರ, ಜಾಲಪ್ಪ ಕಾಲೇಜುವರೆಗೂ ಸಾಗಿತು.

ಬಸ್ ನಿಲ್ದಾಣದಲ್ಲಿ ಅಡ್ಡಾದಿಡ್ಡಿ ನಿಲ್ಲಿಸಿದ್ದ ಬಸ್,ಆಟೊ, ಇತರೆ ವಾಹನ ಚಾಲಕರಿಗೆ ಸಂಚಾರಿ ನಿಯಮ ಪಾಲನೆ ಮಾಡುವಂತೆ ತಿಳಿಹೇಳಿದರು. ಬೀದಿ ಬದಿ ವ್ಯಾಪಾರಿಗಳು ರಸ್ತೆಗೆ ಬಂದು ವ್ಯಾಪಾರ ಮಾಡದಂತೆ ಎಚ್ಚರಿಕೆ ನೀಡಿದರು. ಎಲ್ಲೆಂದರಲ್ಲಿ ನಿಲ್ಲಿಸಿ ಪ್ರಯಾಣಿಕರನ್ನು ಹತ್ತಿಸಿಕೊಳ್ಳುತ್ತಿದ್ದ ಆಟೊ ಚಾಲಕರು, ದಾರಿಯಲ್ಲಿ ಬೇಕಾಬಿಟ್ಟಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಚಾಲಕರಿಗೆ ವಾರ್ನಿಂಗ್ ನೀಡಿದರು.

ಡಿವೈಎಸ್ಪಿ ಪಿ. ರವಿ, ಗ್ರಾಮಾಂತರ ಪೊಲೀಸ್ ಠಾಣೆ ಇನ್ ಸ್ಪೆಕ್ಟರ್ ಡಿ.ಎಂ. ಮುನಿಕೃಷ್ಣ, ನಗರ ಠಾಣೆ ಪೊಲೀಸ್ ಇನ್ ಸ್ಪೆಕ್ಟರ್ ಎ.ಅಮರೇಶ ಗೌಡ ಅವರು ದಾರಿಯುದ್ದಕ್ಕೂ ಜನರಿಗೆ ಅರಿವು ಮೂಡಿಸುತ್ತಾ ಸಾಗಿದರು.

ಅಂಗಡಿಗಳಲ್ಲಿ ತಪಾಸಣೆ

ಜಾಲಪ್ಪ ಕಾಲೇಜು ಬಳಿ ಪೊಲೀಸರು ಅಂಗಡಿಗಳಿಗೆ ದಿಢೀರ್ ಭೇಟಿ ನೀಡಿ ತಪಾಸಣೆ ಕೈಗೊಂಡರು. 100ಮೀ ವ್ಯಾಪ್ತಿಯಲ್ಲಿ ಗುಟ್ಕಾ, ಸಿಗರೇಟು ಮಾರಾಟ ಮಾಡುತ್ತಿದ್ದ ಅಂಗಡಿಗಳಿಂದ ತಂಬಾಕು ವಸ್ತುಗಳನ್ನು ವಶಪಡಿಸಿಕೊಂಡರು. ಜೊತೆಗೆ ಇನ್ನು ಮುಂದೆ ತಂಬಾಕು ಪದಾರ್ಥಗಳನ್ನು ಮಾರಾಟ ಮಾಡದಂತೆ ಎಚ್ಚರಿಕೆ ನೀಡಿದರು. ಈ ವೇಳೆ ಸ್ಥಳೀಯರು ಪೊಲೀಸರಿಗೆ ದೂರಿನ ಸುರಿಮಳೆಗೈದರು.

ಕಾಲೇಜು ಬಿಡುವ ಹೊತ್ತಿಗೆ (ಸಂಜೆ 4ಗಂಟೆ) ಪುಂಡರು ವ್ಹೀಲಿಂಗ್ ಮಾಡುತ್ತಾರೆ. ಹೆಣ್ಣು ಮಕ್ಕಳನ್ನು ಚುಡಾಯಿಸುವುದು ಹೆಚ್ಚಾಗಿದೆ. ನಿತ್ಯ ಆ ಸಮಯದಲ್ಲಿ ಪೊಲೀಸರನ್ನು ಮಫ್ತಿಯಲ್ಲಿ‌ ನಿಯೋಜಿಸಬೇಕು ಎಂದು ಮನವಿ ಮಾಡಿದರು. ಇದಲ್ಲದೇ ಕಾಲೇಜು ಮುಂದಿನ ರಸ್ತೆಯ ಹಂಪ್ ಗಳಿಗೆ ಬ್ಲಿಂಕಿಂಗ್ ಲೈಟ್ಸ್ ಅಳವಡಿಸುವಂತೆಯೂ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಡಿವೈಎಸ್ಪಿ ರವಿ ಅವರು, ಕಾಲೇಜು ಆಡಳಿತ ಮಂಡಳಿಯವರು ತಕ್ಷಣವೇ ರಸ್ತೆಯ ಹಂಪ್ ಗಳಿಗೆ ರೇಡಿಯಂ ಅಥವಾ ಬ್ಲಿಂಕಿಂಗ್ ಲೈಟ್ಸ್ ಅಳವಡಿಸಬೇಕು. ಪೊಲೀಸ್ ಸಿಬ್ಬಂದಿ ಇನ್ನು‌ಮುಂದೆ ಗಸ್ತು ಆರಂಭಿಸಲಿದ್ದಾರೆ. ಸ್ಥಳೀಯರು ಯಾವುದೇ ಸಮಸ್ಯೆ ಇದ್ದಲ್ಲಿ‌ ಪೊಲೀಸ್ ಸಹಾಯವಾಣಿ 112 ಗೆ ಕರೆ ಮಾಡಿ ತಿಳಿಸಬಹುದು. ದೂರು ನೀಡಿದವರ ಹೆಸರನ್ನು ಗೌಪ್ಯವಾಗಿ ಇಡಲಾಗುವುದು ಎಂದು ಹೇಳಿದರು.

Ramesh Babu

Journalist

Recent Posts

ಯುಗಾದಿ ಸಮಯದಲ್ಲಿ ಮತ್ತೆ ಚಿಗುರಿದ ಪ್ರೀತಿ: ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದವರು ಕಟೆಕಟೆಯಲ್ಲಿ ಒಂದಾದರು: ಒಂದಾದ ದಂಪತಿಗೆ ಪ್ರೀತಿಯ ಪಾಠ ಹೇಳಿದ ನ್ಯಾಯಾಧೀಶರು

ಸಣ್ಣಪುಟ್ಟ ಜಗಳಗಳಿಂದ ಕೋರ್ಟಿನ ಮೆಟ್ಟಿಲೇರಿ ದೂರಾವಾಗಲು ನಿರ್ಧರಿಸಿದ್ದ ನಾಲ್ವರು ದಂಪತಿಗಳನ್ನು ಶನಿವಾರ ನಡೆದ ಲೋಕಾಅದಾಲತ್ ನಲ್ಲಿ ನ್ಯಾಯಾಧೀಶರುಗಳು ಹೇಳಿದ ಬುದ್ಧಿಮಾತಿನಿಂದ…

1 hour ago

ವಾರದೊಳಗೆ ಸಹಜ ಸ್ಥಿತಿಗೆ ಗ್ಯಾಸ್ ಸಿಲಿಂಡರ್ ಪೂರೈಕೆ- ಆಹಾರ ಸಚಿವ ಕೆ.ಎಚ್ ಮುನಿಯಪ್ಪ

ಕೊಲ್ಲಿ ದೇಶಗಳಲ್ಲಿ ಯುದ್ಧದ ಪರಿಸ್ಥಿತಿ ಹಿನ್ನೆಲೆಯಲ್ಲಿ ಉಂಟಾದ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಗಳ ಪೂರೈಕೆ…

2 hours ago

“ಗೃಹಬಳಕೆ ಸಿಲಿಂಡರ್ ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನು ಕ್ರಮ”

ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಆಹಾರ ಸಚಿವರು ಸೂಚಿಸಿದ್ದು, ಅದರಂತೆ ಗೃಹ ಬಳಕೆ…

2 hours ago

ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ: ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಏನಂದ್ರು ಗೊತ್ತಾ….?

ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಹಿನ್ನೆಲೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯೆ. ಈ ಸಮಸ್ಯೆ ಇನ್ನು ಒಂದು ವಾರಗಳ ಕಾಲ…

4 hours ago

ಅಬಕಾರಿ ಡಿಸಿ ಮನೆ ಮೇಲೆ ಲೋಕಾಯುಕ್ತ ದಾಳಿ ಪ್ರಕರಣ : ಅಕ್ರಮ ಆಸ್ತಿ ಕಂಡು ಬೆಚ್ಚಿದ ಅಧಿಕಾರಿಗಳು.!

ಉಡುಪಿ : ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ನಡೆದ ಲೋಕಾಯುಕ್ತ ದಾಳಿಯ ಭಾಗವಾಗಿ ಉಡುಪಿ ಜಿಲ್ಲಾ ಅಬಕಾರಿ ಡಿಸಿ ಶ್ರೀನಿವಾಸ್ ಟಿ.ಎಂ…

7 hours ago

ಮದುವೆ ವಿಷಯ ಮುಚ್ಚಿಟ್ಟು ಮೋಸ! ಲಿವ್-ಇನ್ ಗೆಳತಿಯನ್ನು ವೈಯರ್‌ನಿಂದ ಕೊಂದ ವಿವಾಹಿತ.!

ಬೆಂಗಳೂರು: ಸಿಲಿಕಾನ್ ಸಿಟಿಯ ವರ್ತೂರಿನಲ್ಲಿ ಭಯಾನಕ ಕೊಲೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪ್ರೀತಿಯ ಹೆಸರಿನಲ್ಲಿ ಮದುವೆಯ ಸತ್ಯವನ್ನು ಮುಚ್ಚಿಟ್ಟು, ಲಿವ್-ಇನ್…

7 hours ago