ನಗರದಲ್ಲಿ ಪೊಲೀಸರಿಂದ ಫೂಟ್ ಪೆಟ್ರೋಲಿಂಗ್

ಅಪರಾಧ ಪ್ರಕರಣಗಳ ನಿಯಂತ್ರಣ, ಕಟ್ಟುನಿಟ್ಟಿನ ಸಂಚಾರಿ ನಿಯಮಗಳ ಜಾರಿಗೆ ಟೊಂಕ‌ ಕಟ್ಟಿರುವ ಪೊಲೀಸರು ನಗರದ ವಿವಿಧೆಡೆ ನಿತ್ಯ ಫೂಟ್ ಪ್ಯಾಟ್ರೋಲಿಂಗ್(ಪಥ ಸಂಚಲನ) ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ.

ಬುಧವಾರ ರಾತ್ರಿ ನಗರ ಹಾಗೂ ಗ್ರಾಮಾಂತರ ಠಾಣೆ ಪೊಲೀಸರು ಜಂಟಿಯಾಗಿ ಡಿವೈಎಸ್ಪಿ ಪಿ.ರವಿ ಅವರ ನೇತೃತ್ವದಲ್ಲಿ ಫೂಟ್ ಪ್ಯಾಟ್ರೋಲಿಂಗ್ ನಡೆಸಿದರು.

ನಗರದ ನೆಲದಾಂಜನೇಯ ಸ್ವಾಮಿ ದೇವಾಲಯದಿಂದ ಆರಂಭವಾದ ಪಥ ಸಂಚಲನವು ಬಸ್ ನಿಲ್ದಾಣ, ವಿವೇಕಾನಂದ ರಸ್ತೆ, ಚೌಕದ ಮೂಲಕ ಮುಗವಾಳಪ್ಪ ವೃತ್ತ, ಶಾಂತಿನಗರ, ಜಾಲಪ್ಪ ಕಾಲೇಜುವರೆಗೂ ಸಾಗಿತು.

ಬಸ್ ನಿಲ್ದಾಣದಲ್ಲಿ ಅಡ್ಡಾದಿಡ್ಡಿ ನಿಲ್ಲಿಸಿದ್ದ ಬಸ್,ಆಟೊ, ಇತರೆ ವಾಹನ ಚಾಲಕರಿಗೆ ಸಂಚಾರಿ ನಿಯಮ ಪಾಲನೆ ಮಾಡುವಂತೆ ತಿಳಿಹೇಳಿದರು. ಬೀದಿ ಬದಿ ವ್ಯಾಪಾರಿಗಳು ರಸ್ತೆಗೆ ಬಂದು ವ್ಯಾಪಾರ ಮಾಡದಂತೆ ಎಚ್ಚರಿಕೆ ನೀಡಿದರು. ಎಲ್ಲೆಂದರಲ್ಲಿ ನಿಲ್ಲಿಸಿ ಪ್ರಯಾಣಿಕರನ್ನು ಹತ್ತಿಸಿಕೊಳ್ಳುತ್ತಿದ್ದ ಆಟೊ ಚಾಲಕರು, ದಾರಿಯಲ್ಲಿ ಬೇಕಾಬಿಟ್ಟಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಚಾಲಕರಿಗೆ ವಾರ್ನಿಂಗ್ ನೀಡಿದರು.

ಡಿವೈಎಸ್ಪಿ ಪಿ. ರವಿ, ಗ್ರಾಮಾಂತರ ಪೊಲೀಸ್ ಠಾಣೆ ಇನ್ ಸ್ಪೆಕ್ಟರ್ ಡಿ.ಎಂ. ಮುನಿಕೃಷ್ಣ, ನಗರ ಠಾಣೆ ಪೊಲೀಸ್ ಇನ್ ಸ್ಪೆಕ್ಟರ್ ಎ.ಅಮರೇಶ ಗೌಡ ಅವರು ದಾರಿಯುದ್ದಕ್ಕೂ ಜನರಿಗೆ ಅರಿವು ಮೂಡಿಸುತ್ತಾ ಸಾಗಿದರು.

ಅಂಗಡಿಗಳಲ್ಲಿ ತಪಾಸಣೆ

ಜಾಲಪ್ಪ ಕಾಲೇಜು ಬಳಿ ಪೊಲೀಸರು ಅಂಗಡಿಗಳಿಗೆ ದಿಢೀರ್ ಭೇಟಿ ನೀಡಿ ತಪಾಸಣೆ ಕೈಗೊಂಡರು. 100ಮೀ ವ್ಯಾಪ್ತಿಯಲ್ಲಿ ಗುಟ್ಕಾ, ಸಿಗರೇಟು ಮಾರಾಟ ಮಾಡುತ್ತಿದ್ದ ಅಂಗಡಿಗಳಿಂದ ತಂಬಾಕು ವಸ್ತುಗಳನ್ನು ವಶಪಡಿಸಿಕೊಂಡರು. ಜೊತೆಗೆ ಇನ್ನು ಮುಂದೆ ತಂಬಾಕು ಪದಾರ್ಥಗಳನ್ನು ಮಾರಾಟ ಮಾಡದಂತೆ ಎಚ್ಚರಿಕೆ ನೀಡಿದರು. ಈ ವೇಳೆ ಸ್ಥಳೀಯರು ಪೊಲೀಸರಿಗೆ ದೂರಿನ ಸುರಿಮಳೆಗೈದರು.

ಕಾಲೇಜು ಬಿಡುವ ಹೊತ್ತಿಗೆ (ಸಂಜೆ 4ಗಂಟೆ) ಪುಂಡರು ವ್ಹೀಲಿಂಗ್ ಮಾಡುತ್ತಾರೆ. ಹೆಣ್ಣು ಮಕ್ಕಳನ್ನು ಚುಡಾಯಿಸುವುದು ಹೆಚ್ಚಾಗಿದೆ. ನಿತ್ಯ ಆ ಸಮಯದಲ್ಲಿ ಪೊಲೀಸರನ್ನು ಮಫ್ತಿಯಲ್ಲಿ‌ ನಿಯೋಜಿಸಬೇಕು ಎಂದು ಮನವಿ ಮಾಡಿದರು. ಇದಲ್ಲದೇ ಕಾಲೇಜು ಮುಂದಿನ ರಸ್ತೆಯ ಹಂಪ್ ಗಳಿಗೆ ಬ್ಲಿಂಕಿಂಗ್ ಲೈಟ್ಸ್ ಅಳವಡಿಸುವಂತೆಯೂ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಡಿವೈಎಸ್ಪಿ ರವಿ ಅವರು, ಕಾಲೇಜು ಆಡಳಿತ ಮಂಡಳಿಯವರು ತಕ್ಷಣವೇ ರಸ್ತೆಯ ಹಂಪ್ ಗಳಿಗೆ ರೇಡಿಯಂ ಅಥವಾ ಬ್ಲಿಂಕಿಂಗ್ ಲೈಟ್ಸ್ ಅಳವಡಿಸಬೇಕು. ಪೊಲೀಸ್ ಸಿಬ್ಬಂದಿ ಇನ್ನು‌ಮುಂದೆ ಗಸ್ತು ಆರಂಭಿಸಲಿದ್ದಾರೆ. ಸ್ಥಳೀಯರು ಯಾವುದೇ ಸಮಸ್ಯೆ ಇದ್ದಲ್ಲಿ‌ ಪೊಲೀಸ್ ಸಹಾಯವಾಣಿ 112 ಗೆ ಕರೆ ಮಾಡಿ ತಿಳಿಸಬಹುದು. ದೂರು ನೀಡಿದವರ ಹೆಸರನ್ನು ಗೌಪ್ಯವಾಗಿ ಇಡಲಾಗುವುದು ಎಂದು ಹೇಳಿದರು.

Ramesh Babu

Journalist

Recent Posts

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

5 hours ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

16 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

1 day ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

1 day ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

2 days ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

2 days ago