ಅಪರಾಧ ಪ್ರಕರಣಗಳ ನಿಯಂತ್ರಣ, ಕಟ್ಟುನಿಟ್ಟಿನ ಸಂಚಾರಿ ನಿಯಮಗಳ ಜಾರಿಗೆ ಟೊಂಕ ಕಟ್ಟಿರುವ ಪೊಲೀಸರು ನಗರದ ವಿವಿಧೆಡೆ ನಿತ್ಯ ಫೂಟ್ ಪ್ಯಾಟ್ರೋಲಿಂಗ್(ಪಥ ಸಂಚಲನ) ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ.
ಬುಧವಾರ ರಾತ್ರಿ ನಗರ ಹಾಗೂ ಗ್ರಾಮಾಂತರ ಠಾಣೆ ಪೊಲೀಸರು ಜಂಟಿಯಾಗಿ ಡಿವೈಎಸ್ಪಿ ಪಿ.ರವಿ ಅವರ ನೇತೃತ್ವದಲ್ಲಿ ಫೂಟ್ ಪ್ಯಾಟ್ರೋಲಿಂಗ್ ನಡೆಸಿದರು.
ನಗರದ ನೆಲದಾಂಜನೇಯ ಸ್ವಾಮಿ ದೇವಾಲಯದಿಂದ ಆರಂಭವಾದ ಪಥ ಸಂಚಲನವು ಬಸ್ ನಿಲ್ದಾಣ, ವಿವೇಕಾನಂದ ರಸ್ತೆ, ಚೌಕದ ಮೂಲಕ ಮುಗವಾಳಪ್ಪ ವೃತ್ತ, ಶಾಂತಿನಗರ, ಜಾಲಪ್ಪ ಕಾಲೇಜುವರೆಗೂ ಸಾಗಿತು.
ಬಸ್ ನಿಲ್ದಾಣದಲ್ಲಿ ಅಡ್ಡಾದಿಡ್ಡಿ ನಿಲ್ಲಿಸಿದ್ದ ಬಸ್,ಆಟೊ, ಇತರೆ ವಾಹನ ಚಾಲಕರಿಗೆ ಸಂಚಾರಿ ನಿಯಮ ಪಾಲನೆ ಮಾಡುವಂತೆ ತಿಳಿಹೇಳಿದರು. ಬೀದಿ ಬದಿ ವ್ಯಾಪಾರಿಗಳು ರಸ್ತೆಗೆ ಬಂದು ವ್ಯಾಪಾರ ಮಾಡದಂತೆ ಎಚ್ಚರಿಕೆ ನೀಡಿದರು. ಎಲ್ಲೆಂದರಲ್ಲಿ ನಿಲ್ಲಿಸಿ ಪ್ರಯಾಣಿಕರನ್ನು ಹತ್ತಿಸಿಕೊಳ್ಳುತ್ತಿದ್ದ ಆಟೊ ಚಾಲಕರು, ದಾರಿಯಲ್ಲಿ ಬೇಕಾಬಿಟ್ಟಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಚಾಲಕರಿಗೆ ವಾರ್ನಿಂಗ್ ನೀಡಿದರು.
ಜಾಲಪ್ಪ ಕಾಲೇಜು ಬಳಿ ಪೊಲೀಸರು ಅಂಗಡಿಗಳಿಗೆ ದಿಢೀರ್ ಭೇಟಿ ನೀಡಿ ತಪಾಸಣೆ ಕೈಗೊಂಡರು. 100ಮೀ ವ್ಯಾಪ್ತಿಯಲ್ಲಿ ಗುಟ್ಕಾ, ಸಿಗರೇಟು ಮಾರಾಟ ಮಾಡುತ್ತಿದ್ದ ಅಂಗಡಿಗಳಿಂದ ತಂಬಾಕು ವಸ್ತುಗಳನ್ನು ವಶಪಡಿಸಿಕೊಂಡರು. ಜೊತೆಗೆ ಇನ್ನು ಮುಂದೆ ತಂಬಾಕು ಪದಾರ್ಥಗಳನ್ನು ಮಾರಾಟ ಮಾಡದಂತೆ ಎಚ್ಚರಿಕೆ ನೀಡಿದರು. ಈ ವೇಳೆ ಸ್ಥಳೀಯರು ಪೊಲೀಸರಿಗೆ ದೂರಿನ ಸುರಿಮಳೆಗೈದರು.
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…
ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…