ಅಪರಾಧ ಪ್ರಕರಣಗಳ ನಿಯಂತ್ರಣ, ಕಟ್ಟುನಿಟ್ಟಿನ ಸಂಚಾರಿ ನಿಯಮಗಳ ಜಾರಿಗೆ ಟೊಂಕ ಕಟ್ಟಿರುವ ಪೊಲೀಸರು ನಗರದ ವಿವಿಧೆಡೆ ನಿತ್ಯ ಫೂಟ್ ಪ್ಯಾಟ್ರೋಲಿಂಗ್(ಪಥ ಸಂಚಲನ) ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ.
ಬುಧವಾರ ರಾತ್ರಿ ನಗರ ಹಾಗೂ ಗ್ರಾಮಾಂತರ ಠಾಣೆ ಪೊಲೀಸರು ಜಂಟಿಯಾಗಿ ಡಿವೈಎಸ್ಪಿ ಪಿ.ರವಿ ಅವರ ನೇತೃತ್ವದಲ್ಲಿ ಫೂಟ್ ಪ್ಯಾಟ್ರೋಲಿಂಗ್ ನಡೆಸಿದರು.
ನಗರದ ನೆಲದಾಂಜನೇಯ ಸ್ವಾಮಿ ದೇವಾಲಯದಿಂದ ಆರಂಭವಾದ ಪಥ ಸಂಚಲನವು ಬಸ್ ನಿಲ್ದಾಣ, ವಿವೇಕಾನಂದ ರಸ್ತೆ, ಚೌಕದ ಮೂಲಕ ಮುಗವಾಳಪ್ಪ ವೃತ್ತ, ಶಾಂತಿನಗರ, ಜಾಲಪ್ಪ ಕಾಲೇಜುವರೆಗೂ ಸಾಗಿತು.
ಬಸ್ ನಿಲ್ದಾಣದಲ್ಲಿ ಅಡ್ಡಾದಿಡ್ಡಿ ನಿಲ್ಲಿಸಿದ್ದ ಬಸ್,ಆಟೊ, ಇತರೆ ವಾಹನ ಚಾಲಕರಿಗೆ ಸಂಚಾರಿ ನಿಯಮ ಪಾಲನೆ ಮಾಡುವಂತೆ ತಿಳಿಹೇಳಿದರು. ಬೀದಿ ಬದಿ ವ್ಯಾಪಾರಿಗಳು ರಸ್ತೆಗೆ ಬಂದು ವ್ಯಾಪಾರ ಮಾಡದಂತೆ ಎಚ್ಚರಿಕೆ ನೀಡಿದರು. ಎಲ್ಲೆಂದರಲ್ಲಿ ನಿಲ್ಲಿಸಿ ಪ್ರಯಾಣಿಕರನ್ನು ಹತ್ತಿಸಿಕೊಳ್ಳುತ್ತಿದ್ದ ಆಟೊ ಚಾಲಕರು, ದಾರಿಯಲ್ಲಿ ಬೇಕಾಬಿಟ್ಟಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಚಾಲಕರಿಗೆ ವಾರ್ನಿಂಗ್ ನೀಡಿದರು.
ಜಾಲಪ್ಪ ಕಾಲೇಜು ಬಳಿ ಪೊಲೀಸರು ಅಂಗಡಿಗಳಿಗೆ ದಿಢೀರ್ ಭೇಟಿ ನೀಡಿ ತಪಾಸಣೆ ಕೈಗೊಂಡರು. 100ಮೀ ವ್ಯಾಪ್ತಿಯಲ್ಲಿ ಗುಟ್ಕಾ, ಸಿಗರೇಟು ಮಾರಾಟ ಮಾಡುತ್ತಿದ್ದ ಅಂಗಡಿಗಳಿಂದ ತಂಬಾಕು ವಸ್ತುಗಳನ್ನು ವಶಪಡಿಸಿಕೊಂಡರು. ಜೊತೆಗೆ ಇನ್ನು ಮುಂದೆ ತಂಬಾಕು ಪದಾರ್ಥಗಳನ್ನು ಮಾರಾಟ ಮಾಡದಂತೆ ಎಚ್ಚರಿಕೆ ನೀಡಿದರು. ಈ ವೇಳೆ ಸ್ಥಳೀಯರು ಪೊಲೀಸರಿಗೆ ದೂರಿನ ಸುರಿಮಳೆಗೈದರು.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…