ಅಪರಾಧ ಪ್ರಕರಣಗಳ ನಿಯಂತ್ರಣ, ಕಟ್ಟುನಿಟ್ಟಿನ ಸಂಚಾರಿ ನಿಯಮಗಳ ಜಾರಿಗೆ ಟೊಂಕ ಕಟ್ಟಿರುವ ಪೊಲೀಸರು ನಗರದ ವಿವಿಧೆಡೆ ನಿತ್ಯ ಫೂಟ್ ಪ್ಯಾಟ್ರೋಲಿಂಗ್(ಪಥ ಸಂಚಲನ) ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ.
ಬುಧವಾರ ರಾತ್ರಿ ನಗರ ಹಾಗೂ ಗ್ರಾಮಾಂತರ ಠಾಣೆ ಪೊಲೀಸರು ಜಂಟಿಯಾಗಿ ಡಿವೈಎಸ್ಪಿ ಪಿ.ರವಿ ಅವರ ನೇತೃತ್ವದಲ್ಲಿ ಫೂಟ್ ಪ್ಯಾಟ್ರೋಲಿಂಗ್ ನಡೆಸಿದರು.
ನಗರದ ನೆಲದಾಂಜನೇಯ ಸ್ವಾಮಿ ದೇವಾಲಯದಿಂದ ಆರಂಭವಾದ ಪಥ ಸಂಚಲನವು ಬಸ್ ನಿಲ್ದಾಣ, ವಿವೇಕಾನಂದ ರಸ್ತೆ, ಚೌಕದ ಮೂಲಕ ಮುಗವಾಳಪ್ಪ ವೃತ್ತ, ಶಾಂತಿನಗರ, ಜಾಲಪ್ಪ ಕಾಲೇಜುವರೆಗೂ ಸಾಗಿತು.
ಬಸ್ ನಿಲ್ದಾಣದಲ್ಲಿ ಅಡ್ಡಾದಿಡ್ಡಿ ನಿಲ್ಲಿಸಿದ್ದ ಬಸ್,ಆಟೊ, ಇತರೆ ವಾಹನ ಚಾಲಕರಿಗೆ ಸಂಚಾರಿ ನಿಯಮ ಪಾಲನೆ ಮಾಡುವಂತೆ ತಿಳಿಹೇಳಿದರು. ಬೀದಿ ಬದಿ ವ್ಯಾಪಾರಿಗಳು ರಸ್ತೆಗೆ ಬಂದು ವ್ಯಾಪಾರ ಮಾಡದಂತೆ ಎಚ್ಚರಿಕೆ ನೀಡಿದರು. ಎಲ್ಲೆಂದರಲ್ಲಿ ನಿಲ್ಲಿಸಿ ಪ್ರಯಾಣಿಕರನ್ನು ಹತ್ತಿಸಿಕೊಳ್ಳುತ್ತಿದ್ದ ಆಟೊ ಚಾಲಕರು, ದಾರಿಯಲ್ಲಿ ಬೇಕಾಬಿಟ್ಟಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಚಾಲಕರಿಗೆ ವಾರ್ನಿಂಗ್ ನೀಡಿದರು.
ಜಾಲಪ್ಪ ಕಾಲೇಜು ಬಳಿ ಪೊಲೀಸರು ಅಂಗಡಿಗಳಿಗೆ ದಿಢೀರ್ ಭೇಟಿ ನೀಡಿ ತಪಾಸಣೆ ಕೈಗೊಂಡರು. 100ಮೀ ವ್ಯಾಪ್ತಿಯಲ್ಲಿ ಗುಟ್ಕಾ, ಸಿಗರೇಟು ಮಾರಾಟ ಮಾಡುತ್ತಿದ್ದ ಅಂಗಡಿಗಳಿಂದ ತಂಬಾಕು ವಸ್ತುಗಳನ್ನು ವಶಪಡಿಸಿಕೊಂಡರು. ಜೊತೆಗೆ ಇನ್ನು ಮುಂದೆ ತಂಬಾಕು ಪದಾರ್ಥಗಳನ್ನು ಮಾರಾಟ ಮಾಡದಂತೆ ಎಚ್ಚರಿಕೆ ನೀಡಿದರು. ಈ ವೇಳೆ ಸ್ಥಳೀಯರು ಪೊಲೀಸರಿಗೆ ದೂರಿನ ಸುರಿಮಳೆಗೈದರು.
ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…
ಎಲ್-ನಿನೋ ಪರಿಣಾಮದಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಕೊರತೆ, ತಾಪಮಾನದ ಏರಿಕೆ ಹಾಗೂ ಒಣ ಹವಾಮಾನ ಹೆಚ್ಚಾಗುವ ಸಾಧ್ಯತೆ ಇರುವ…
ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…
ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…