ನಗರದಲ್ಲಿ ಮುಂದುವರಿದ ಮಳೆ: ತಗ್ಗು ಪ್ರದೇಶದಲ್ಲಿನ‌ ಮನೆಗಳಿಗೆ ನುಗ್ಗಿದ ಮಳೆ ನೀರಿನ ಜೊತೆ ಚರಂಡಿ ನೀರು: ನಿವಾಸಿಗಳ ವನವಾಸ

ನಗರದಲ್ಲಿ ಮುಂದುವರಿದ ಮಳೆ. ಮಂಗಳವಾರ ಸುರಿದ ಭಾರಿ ಮಳೆ‌ಯಿಂದಾಗಿ ತಾಲ್ಲೂಕಿನ ಹಲವು ಕಡೆ ಅವಾಂತರ ಸೃಷ್ಟಿ ಮಾಡಿದೆ. ಭಾರೀ ಮಳೆಯಿಂದಾಗಿ ನಗರದ ರೈಲ್ವೆ ನಿಲ್ದಾಣ ಸಮೀಪದ ತಗ್ಗು ಪ್ರದೇಶದಲ್ಲಿನ ಮನೆಗಳಿಗೆ ಮಳೆ ನೀರಿನ ಜೊತೆಗೆ ಚರಂಡಿ ನೀರು ನುಗ್ಗಿ ಜನರು ಪರದಾಡುವಂತೆ ಮಾಡಿದೆ.

ಮಳೆ ಬಂದರೆ ನೀರು ಸರಾಗವಾಗಿ ಹರಿದು ಹೋಗಲು ಯಾವುದೇ ವ್ಯವಸ್ಥೆ ಮಾಡದೆ ನಗರಸಭೆ ನಿರ್ಲಕ್ಷ್ಯ ಧೋರಣೆ ಮಾಡಲಾಗುತ್ತಿದೆ. ಹಲವಾರು ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ಈ ವಿಚಾರವಾಗಿ ಗಮನ ಸೆಳೆದರೂ ಸಹ ಯಾವುದೇ ಪ್ರಯೋಜನವಾಗಲಿಲ್ಲ. ಇಲ್ಲಿನ ಮನೆಗಳಿಗೆ ಮಳೆ ನೀರು ನುಗ್ಗಿ ನಾಗರೀಕರು ನರಕಯಾತನೆ ಅನುಭವಿಸುತ್ತಿದ್ದಾರೆ. ಇದಕ್ಕೆ ಸಂಬಂಧಪಟ್ಟ ಜನಪ್ರತಿನಿಧಿಗಳಾಗಲಿ ಅಧಿಕಾರಿಗಳಾಗಲಿ ಸ್ಪಂದಿಸುತ್ತಿಲ್ಲ ಎಂದು ಮಂಜುನಾಥರೆಡ್ಡಿ ಆರೋಪಿಸಿದ್ದಾರೆ.

ತಾಲೂಕಿನ ಮಜರಹೊಸಹಳ್ಳಿ ಗ್ರಾಂ ಪಂ. ವ್ಯಾಪ್ತಿಯ ತಿಪ್ಪಾಪುರದ ದಲಿತರ ಕಾಲೋನಿಗೆ ನೀರು ನುಗ್ಗಿ ಅವಂತಾರ ಸೃಷ್ಟಿಸಿದೆ. ಅತಿಯಾದ ಮಳೆ ಸುರಿದ ಕಾರಣ ಚರಂಡಿಯ ಕೊಳಚೆ‌ ನೀರು ರಸ್ತೆಯ ಮೇಲೆ ಹರಿದು ಕೆಲವು ಮನೆಗಳಿಗೂ ನುಗ್ಗಿದೆ, ಇದರಿಂದ ಜನರು ಓಡಾಡಲು ಪರದಾಡುವಂತಾಗಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅಭಿಶೇಕ್, ಪ್ರತಿಬಾರಿ ಮಳೆ ಬಂದಾಗಲೂ ಚರಂಡಿ ನೀರು ರಸ್ತೆಗೆ ನುಗ್ಗುತ್ತದೆ ಮನೆಗಳಿಗೂ ನುಗ್ಗುತ್ತದೆ, ಚರಂಡಿ ನೀರಿನ ಗಬ್ಬು ವಾಸನೆಯನ್ನು ಸಹಿಸಿಕೊಳ್ಳಲು ಸಾದ್ಯವಿಲ್ಲ, ಸೊಳ್ಳೆಗಳ ಹಾವಳಿ ಬೇರೆ ಮಳೆಯಿಂದಾಗಿ ಡೆಂಗ್ಯೂ, ಮಲೇರಿಯಾ ಮುಂತಾದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇದೆ. ಚರಂಡಿ ಸರಿಪಡಿಸುವಂತೆ ಹಲವು ಬಾರಿ ಮನವಿ ಮಾಡಿದರೂ ಅಧಿಕಾರಿಗಳು, ಸದಸ್ಯರು ಗಮನ ಹರಿಸಿಲ್ಲ, ದಲಿತರ ಕಾಲೋನಿ ಎಂದು ತಾತ್ಸಾರದಿಂದ ಕಾಣುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಇನ್ನಾದರೂ ಅಧಿಕಾರಿಗಳು ಎಚ್ಚೆತ್ತು ಅವ್ಯವಸ್ಥೆಗಳನ್ನು ಸರಿಪಡಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Ramesh Babu

Journalist

Recent Posts

ಕೇಬಲ್ ಕಾರ್ಖಾನೆಗೆ ಬೆಂಕಿ: ಧಗಧಗ ಉರಿಯುತ್ತಿರುವ ಕಾರ್ಖಾನೆ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…

1 hour ago

ಮೆಳೇಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಳ್ಳತನ: ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟ ಕದ್ದೊಯ್ದ ಐನಾತಿಗಳು

ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…

4 hours ago

ಮಾರಮ್ಮ ದೇವಿಯ ಮೂರು ಚಿನ್ನದ ತಾಳಿ, ನಾಲ್ಕು ಗುಂಡುಗಳನ್ನ ಕದ್ದ ಖದೀಮರು

ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ‌ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…

5 hours ago

T20 World Cup: ವಿಶ್ವ ವಿಜೇತ ಟೀಂ ಇಂಡಿಯಾಗೆ ದಾಖಲೆಯ ಮೂರನೇ T20 ವಿಶ್ವಕಪ್ ಕಿರೀಟ

ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ಸ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಅದ್ಭುತವಾದ…

16 hours ago

2026-27ನೇ ಸಾಲಿನ ರಾಜ್ಯ ಬಜೆಟ್: ಬಜೆಟ್ ಬಗ್ಗೆ ಶಾಸಕ ಧೀರಜ್ ಮುನಿರಾಜ್ ಏನಂದ್ರು ಗೊತ್ತಾ….? ಅವರ ಪ್ರತಿಕ್ರಿಯೆ ಇಲ್ಲಿದೆ ನೋಡಿ….

ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಎಲ್ಲಾ ಬಜೆಟ್ ಗಳ ಪೈಕಿ 2026-27ರ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ. ಈ ಬಜೆಟ್ ನಲ್ಲಿ ಹೊಸ…

1 day ago

ವಸತಿ ಶಾಲಾ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್‌, ಚಾಕುವಿನಿಂದ ದಾಳಿ: ಒಬ್ಬ ವಿದ್ಯಾರ್ಥಿ ಸಾವು: 8 ಮಂದಿಗೆ ಗಾಯ

ಬಳ್ಳಾರಿ ನಗರದ "ಗುರುಕುಲ ವಸತಿ ಶಾಲೆ"ಯಲ್ಲಿ ಶನಿವಾರ ರಾತ್ರಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್‌, ಚಾಕುವಿನಿಂದ…

1 day ago