ನಗರದಲ್ಲಿ ಮುಂದುವರಿದ ಮಳೆ: ತಗ್ಗು ಪ್ರದೇಶದಲ್ಲಿನ‌ ಮನೆಗಳಿಗೆ ನುಗ್ಗಿದ ಮಳೆ ನೀರಿನ ಜೊತೆ ಚರಂಡಿ ನೀರು: ನಿವಾಸಿಗಳ ವನವಾಸ

ನಗರದಲ್ಲಿ ಮುಂದುವರಿದ ಮಳೆ. ಮಂಗಳವಾರ ಸುರಿದ ಭಾರಿ ಮಳೆ‌ಯಿಂದಾಗಿ ತಾಲ್ಲೂಕಿನ ಹಲವು ಕಡೆ ಅವಾಂತರ ಸೃಷ್ಟಿ ಮಾಡಿದೆ. ಭಾರೀ ಮಳೆಯಿಂದಾಗಿ ನಗರದ ರೈಲ್ವೆ ನಿಲ್ದಾಣ ಸಮೀಪದ ತಗ್ಗು ಪ್ರದೇಶದಲ್ಲಿನ ಮನೆಗಳಿಗೆ ಮಳೆ ನೀರಿನ ಜೊತೆಗೆ ಚರಂಡಿ ನೀರು ನುಗ್ಗಿ ಜನರು ಪರದಾಡುವಂತೆ ಮಾಡಿದೆ.

ಮಳೆ ಬಂದರೆ ನೀರು ಸರಾಗವಾಗಿ ಹರಿದು ಹೋಗಲು ಯಾವುದೇ ವ್ಯವಸ್ಥೆ ಮಾಡದೆ ನಗರಸಭೆ ನಿರ್ಲಕ್ಷ್ಯ ಧೋರಣೆ ಮಾಡಲಾಗುತ್ತಿದೆ. ಹಲವಾರು ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ಈ ವಿಚಾರವಾಗಿ ಗಮನ ಸೆಳೆದರೂ ಸಹ ಯಾವುದೇ ಪ್ರಯೋಜನವಾಗಲಿಲ್ಲ. ಇಲ್ಲಿನ ಮನೆಗಳಿಗೆ ಮಳೆ ನೀರು ನುಗ್ಗಿ ನಾಗರೀಕರು ನರಕಯಾತನೆ ಅನುಭವಿಸುತ್ತಿದ್ದಾರೆ. ಇದಕ್ಕೆ ಸಂಬಂಧಪಟ್ಟ ಜನಪ್ರತಿನಿಧಿಗಳಾಗಲಿ ಅಧಿಕಾರಿಗಳಾಗಲಿ ಸ್ಪಂದಿಸುತ್ತಿಲ್ಲ ಎಂದು ಮಂಜುನಾಥರೆಡ್ಡಿ ಆರೋಪಿಸಿದ್ದಾರೆ.

ತಾಲೂಕಿನ ಮಜರಹೊಸಹಳ್ಳಿ ಗ್ರಾಂ ಪಂ. ವ್ಯಾಪ್ತಿಯ ತಿಪ್ಪಾಪುರದ ದಲಿತರ ಕಾಲೋನಿಗೆ ನೀರು ನುಗ್ಗಿ ಅವಂತಾರ ಸೃಷ್ಟಿಸಿದೆ. ಅತಿಯಾದ ಮಳೆ ಸುರಿದ ಕಾರಣ ಚರಂಡಿಯ ಕೊಳಚೆ‌ ನೀರು ರಸ್ತೆಯ ಮೇಲೆ ಹರಿದು ಕೆಲವು ಮನೆಗಳಿಗೂ ನುಗ್ಗಿದೆ, ಇದರಿಂದ ಜನರು ಓಡಾಡಲು ಪರದಾಡುವಂತಾಗಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅಭಿಶೇಕ್, ಪ್ರತಿಬಾರಿ ಮಳೆ ಬಂದಾಗಲೂ ಚರಂಡಿ ನೀರು ರಸ್ತೆಗೆ ನುಗ್ಗುತ್ತದೆ ಮನೆಗಳಿಗೂ ನುಗ್ಗುತ್ತದೆ, ಚರಂಡಿ ನೀರಿನ ಗಬ್ಬು ವಾಸನೆಯನ್ನು ಸಹಿಸಿಕೊಳ್ಳಲು ಸಾದ್ಯವಿಲ್ಲ, ಸೊಳ್ಳೆಗಳ ಹಾವಳಿ ಬೇರೆ ಮಳೆಯಿಂದಾಗಿ ಡೆಂಗ್ಯೂ, ಮಲೇರಿಯಾ ಮುಂತಾದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇದೆ. ಚರಂಡಿ ಸರಿಪಡಿಸುವಂತೆ ಹಲವು ಬಾರಿ ಮನವಿ ಮಾಡಿದರೂ ಅಧಿಕಾರಿಗಳು, ಸದಸ್ಯರು ಗಮನ ಹರಿಸಿಲ್ಲ, ದಲಿತರ ಕಾಲೋನಿ ಎಂದು ತಾತ್ಸಾರದಿಂದ ಕಾಣುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಇನ್ನಾದರೂ ಅಧಿಕಾರಿಗಳು ಎಚ್ಚೆತ್ತು ಅವ್ಯವಸ್ಥೆಗಳನ್ನು ಸರಿಪಡಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Ramesh Babu

Journalist

Recent Posts

ಕಾಲೇಜಿನಿಂದ ಸಹೋದರನನ್ನು ಮನೆಗೆ ಕರೆದುಕೊಂಡು ಬರುವಾಗ ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ನಲ್ಲಿದ್ದ ಅಣ್ಣ ಸಾವು, ತಮ್ಮನಿಗೆ ಗಾಯ

ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…

22 minutes ago

ಸರ್ಕಾರಿ ಆಸ್ಪತ್ರೆಯಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ರೌಂಡ್ಸ್​

ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…

2 hours ago

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

17 hours ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

18 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

1 day ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

1 day ago