ನಗರದಲ್ಲಿ ಮುಂದುವರಿದ ಮಳೆ: ತಗ್ಗು ಪ್ರದೇಶದಲ್ಲಿನ‌ ಮನೆಗಳಿಗೆ ನುಗ್ಗಿದ ಮಳೆ ನೀರಿನ ಜೊತೆ ಚರಂಡಿ ನೀರು: ನಿವಾಸಿಗಳ ವನವಾಸ

ನಗರದಲ್ಲಿ ಮುಂದುವರಿದ ಮಳೆ. ಮಂಗಳವಾರ ಸುರಿದ ಭಾರಿ ಮಳೆ‌ಯಿಂದಾಗಿ ತಾಲ್ಲೂಕಿನ ಹಲವು ಕಡೆ ಅವಾಂತರ ಸೃಷ್ಟಿ ಮಾಡಿದೆ. ಭಾರೀ ಮಳೆಯಿಂದಾಗಿ ನಗರದ ರೈಲ್ವೆ ನಿಲ್ದಾಣ ಸಮೀಪದ ತಗ್ಗು ಪ್ರದೇಶದಲ್ಲಿನ ಮನೆಗಳಿಗೆ ಮಳೆ ನೀರಿನ ಜೊತೆಗೆ ಚರಂಡಿ ನೀರು ನುಗ್ಗಿ ಜನರು ಪರದಾಡುವಂತೆ ಮಾಡಿದೆ.

ಮಳೆ ಬಂದರೆ ನೀರು ಸರಾಗವಾಗಿ ಹರಿದು ಹೋಗಲು ಯಾವುದೇ ವ್ಯವಸ್ಥೆ ಮಾಡದೆ ನಗರಸಭೆ ನಿರ್ಲಕ್ಷ್ಯ ಧೋರಣೆ ಮಾಡಲಾಗುತ್ತಿದೆ. ಹಲವಾರು ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ಈ ವಿಚಾರವಾಗಿ ಗಮನ ಸೆಳೆದರೂ ಸಹ ಯಾವುದೇ ಪ್ರಯೋಜನವಾಗಲಿಲ್ಲ. ಇಲ್ಲಿನ ಮನೆಗಳಿಗೆ ಮಳೆ ನೀರು ನುಗ್ಗಿ ನಾಗರೀಕರು ನರಕಯಾತನೆ ಅನುಭವಿಸುತ್ತಿದ್ದಾರೆ. ಇದಕ್ಕೆ ಸಂಬಂಧಪಟ್ಟ ಜನಪ್ರತಿನಿಧಿಗಳಾಗಲಿ ಅಧಿಕಾರಿಗಳಾಗಲಿ ಸ್ಪಂದಿಸುತ್ತಿಲ್ಲ ಎಂದು ಮಂಜುನಾಥರೆಡ್ಡಿ ಆರೋಪಿಸಿದ್ದಾರೆ.

ತಾಲೂಕಿನ ಮಜರಹೊಸಹಳ್ಳಿ ಗ್ರಾಂ ಪಂ. ವ್ಯಾಪ್ತಿಯ ತಿಪ್ಪಾಪುರದ ದಲಿತರ ಕಾಲೋನಿಗೆ ನೀರು ನುಗ್ಗಿ ಅವಂತಾರ ಸೃಷ್ಟಿಸಿದೆ. ಅತಿಯಾದ ಮಳೆ ಸುರಿದ ಕಾರಣ ಚರಂಡಿಯ ಕೊಳಚೆ‌ ನೀರು ರಸ್ತೆಯ ಮೇಲೆ ಹರಿದು ಕೆಲವು ಮನೆಗಳಿಗೂ ನುಗ್ಗಿದೆ, ಇದರಿಂದ ಜನರು ಓಡಾಡಲು ಪರದಾಡುವಂತಾಗಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅಭಿಶೇಕ್, ಪ್ರತಿಬಾರಿ ಮಳೆ ಬಂದಾಗಲೂ ಚರಂಡಿ ನೀರು ರಸ್ತೆಗೆ ನುಗ್ಗುತ್ತದೆ ಮನೆಗಳಿಗೂ ನುಗ್ಗುತ್ತದೆ, ಚರಂಡಿ ನೀರಿನ ಗಬ್ಬು ವಾಸನೆಯನ್ನು ಸಹಿಸಿಕೊಳ್ಳಲು ಸಾದ್ಯವಿಲ್ಲ, ಸೊಳ್ಳೆಗಳ ಹಾವಳಿ ಬೇರೆ ಮಳೆಯಿಂದಾಗಿ ಡೆಂಗ್ಯೂ, ಮಲೇರಿಯಾ ಮುಂತಾದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇದೆ. ಚರಂಡಿ ಸರಿಪಡಿಸುವಂತೆ ಹಲವು ಬಾರಿ ಮನವಿ ಮಾಡಿದರೂ ಅಧಿಕಾರಿಗಳು, ಸದಸ್ಯರು ಗಮನ ಹರಿಸಿಲ್ಲ, ದಲಿತರ ಕಾಲೋನಿ ಎಂದು ತಾತ್ಸಾರದಿಂದ ಕಾಣುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಇನ್ನಾದರೂ ಅಧಿಕಾರಿಗಳು ಎಚ್ಚೆತ್ತು ಅವ್ಯವಸ್ಥೆಗಳನ್ನು ಸರಿಪಡಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Ramesh Babu

Journalist

Recent Posts

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

5 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

5 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

20 hours ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago

ದೇವಾಲಯಗಳ ಹುಂಡಿ ಭದ್ರತೆಗೆ ಸಿಸಿಟಿವಿ ಕಣ್ಗಾವಲು- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…

2 days ago