ದೊಡ್ಡಬಳ್ಳಾಪುರದಲ್ಲಿ ವಿಶ್ವಹಿಂದೂ ಪರಿಷತ್, ಬಜರಂಗದಳದ ವತಿಯಿಂದ ಭಾನುವಾರ ಸಂಜೆ ನಡೆದ ಬಹತ್ ಶೋಭಾಯಾತ್ರೆಯಲ್ಲಿ ಶ್ರೀರಾಮ, ಶಿವ, ಆಂಜನೇಯ ಬೃಹತ್ ಪ್ರತಿಮೆಗಳ ಮೆರವಣಿಗೆ ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿತು.
ಭಾರತ ಮಾತೆ, ಶ್ರೀರಾಮ, ಹನುಮ, ಶಿವ, ಭುವನೇಶ್ವರಿ, ಡಾ.ಬಿ.ಆರ್.ಅಂಬೇಡ್ಕರ್, ಶಿವಾಜಿ ಪ್ರತಿಮೆಗಳೊಂದಿಗೆ ವಿವಿಧ ಕಲಾತಂಡಗಳು ಶೋಭಾಯಾತ್ರೆಯ ಮೆರವಣಿಗೆಯಲ್ಲಿ ಭಾಗವಹಿಸಿದ್ದವು.
ಶ್ರೀರಾಮನ ಚಿತ್ರವುಳ್ಳ ಕೇಸರಿ ಧ್ವಜ ಹಿಡಿದು ‘ಜೈ ಶ್ರೀರಾಮ್’ ಘೋಷಣೆಯೊಂದಿಗೆ ಸಾವಿರಾರು ಜನ ಭಾಗವಹಿಸಿದ್ದರು. ಶೋಭಾ ಯಾತ್ರೆ ಸಾಗುವ ರಸ್ತೆಯ ಎರಡೂ ಬದಿಯಲ್ಲೂ ಜನರು ಸಾಲುಗಟ್ಟಿ ನಿಂತು ಬೃಹ್ ಮೆರವಣಿಗೆ ವೀಕ್ಷಣೆ ಮಾಡಿದರು.
ಶೋಭಾ ಯಾತ್ರೆಯಲ್ಲಿ ಸಾವಿರಾರು ಯುವಕರು ಶ್ರೀರಾಮನ ಭಕ್ತಿಗೀತೆಗಳಿಗೆ ಹೆಜ್ಜೆ ಹಾಕಿ ಸಂಭ್ರಮಿಸಿದರೆ, ಯುವತಿಯರು ತಮಟೆ ನಾದಕ್ಕೆ ಕುಣಿಯುತ್ತಿದ್ದ ದೃಶ್ಯಗಳು ಸಾಮಾನ್ಯವಾಗಿದ್ದವು.
ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು, ಈ ಕಾರ್ಯಕ್ರಮಕ್ಕೆ ಮುಖ್ಯ…
ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಇಂದಿನಿಂದ ಫೆ.22ರವರೆಗೆ "ದೊಡ್ಡಬಳ್ಳಾಪುರ…
ಕೋಲಾರ: ರೈತರು ಕಂಪನಿಯೊಂದಿಗೆ (ಇಂಟಿಗ್ರೇಟೆಡ್) ಒಪ್ಪಂದ ಮಾಡಿಕೊಂಡು ಕೋಳಿ ಸಾಕುವ ಪದ್ದತಿಯಿಂದಾಗಿ ಕಾರ್ಪೊರೇಟ್ ಸಂಸ್ಥೆಗಳಿಂದ ನಿರಂತರವಾಗಿ ಶೋಷಣೆ ನಡೆಯುತ್ತಿದೆ ಸರ್ಕಾರವು…
ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಬಾಣಂತಿ ಹಾಗೂ ಹಸುಗೂಸು ಸಾ*ವಾಗಿದೆ, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ.…
ಬಾಗಲಕೋಟೆಯಲ್ಲಿ ನಡೆದ ಕಲ್ಲುತೂರಾಟ ಘಟನೆಯು ಸಮಾಜದ ಶಾಂತಿ, ಸೌಹಾರ್ದತೆಗೆ ಮಾರಕ. ಇದನ್ನು ನಾನು ಮತ್ತು ನಮ್ಮ ಸರ್ಕಾರ ಬಲವಾಗಿ ಖಂಡಿಸುತ್ತದೆ.…
ಪ್ರತಿಭಟನೆ - ಮುಷ್ಕರ - ಮುತ್ತಿಗೆ - ಚಳವಳಿ - ಬಂದ್ - ಸತ್ಯಾಗ್ರಹ - ಹರತಾಳ - ಅಮರಣಾಂತ…