ನಗರದಲ್ಲಿ ವಿಶ್ವಹಿಂದೂ ಪರಿಷತ್,‌ ಬಜರಂಗದಳದ ವತಿಯಿಂದ ಬೃಹತ್ ಶೋಭಾಯಾತ್ರೆ:‌ ನಗರವೆಲ್ಲಾ ಕೇಸರಿಮಯ: ಬಿಗಿ ಪೊಲೀಸ್ ಬಂದೋಬಸ್ತ್

ದೊಡ್ಡಬಳ್ಳಾಪುರದಲ್ಲಿ ವಿಶ್ವಹಿಂದೂ ಪರಿಷತ್, ಬಜರಂಗದಳದ ವತಿಯಿಂದ ಭಾನುವಾರ ಸಂಜೆ ನಡೆದ ಬಹತ್ ಶೋಭಾಯಾತ್ರೆಯಲ್ಲಿ ಶ್ರೀರಾಮ, ಶಿವ, ಆಂಜನೇಯ ಬೃಹತ್ ಪ್ರತಿಮೆಗಳ ಮೆರವಣಿಗೆ ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿತು.

ಭಾರತ ಮಾತೆ, ಶ್ರೀರಾಮ, ಹನುಮ, ಶಿವ, ಭುವನೇಶ್ವರಿ, ಡಾ.ಬಿ.ಆರ್.ಅಂಬೇಡ್ಕರ್, ಶಿವಾಜಿ ಪ್ರತಿಮೆಗಳೊಂದಿಗೆ ವಿವಿಧ ಕಲಾತಂಡಗಳು ಶೋಭಾಯಾತ್ರೆಯ ಮೆರವಣಿಗೆಯಲ್ಲಿ ಭಾಗವಹಿಸಿದ್ದವು.

ಶ್ರೀರಾಮನ ಚಿತ್ರವುಳ್ಳ ಕೇಸರಿ ಧ್ವಜ ಹಿಡಿದು ‘ಜೈ ಶ್ರೀರಾಮ್’ ಘೋಷಣೆಯೊಂದಿಗೆ ಸಾವಿರಾರು ಜನ ಭಾಗವಹಿಸಿದ್ದರು. ಶೋಭಾ ಯಾತ್ರೆ ಸಾಗುವ ರಸ್ತೆಯ ಎರಡೂ ಬದಿಯಲ್ಲೂ ಜನರು ಸಾಲುಗಟ್ಟಿ ನಿಂತು ಬೃಹ್ ಮೆರವಣಿಗೆ ವೀಕ್ಷಣೆ ಮಾಡಿದರು.

ಶೋಭಾ ಯಾತ್ರೆಯಲ್ಲಿ ಸಾವಿರಾರು ಯುವಕರು ಶ್ರೀರಾಮನ ಭಕ್ತಿಗೀತೆಗಳಿಗೆ ಹೆಜ್ಜೆ ಹಾಕಿ ಸಂಭ್ರಮಿಸಿದರೆ, ಯುವತಿಯರು ತಮಟೆ ನಾದಕ್ಕೆ ಕುಣಿಯುತ್ತಿದ್ದ ದೃಶ್ಯಗಳು ಸಾಮಾನ್ಯವಾಗಿದ್ದವು.

ಶೋಭಾಯಾತ್ರೆ ಸಂದರ್ಭದಲ್ಲಿ ಯಾವುದೇ ಗಲಾಟೆಗಳು ನಡೆಯದಂತೆ ಜಿಲ್ಲಾ ಪೊಲೀಸ್ ಹೆಚ್ಚುವರಿ ವರಿಷ್ಠಾಧಿಕಾರಿ ನಾಗರಾಜ್, ಡಿವೈಎಸ್ಪಿ ರವಿ, ನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಅಮರೇಶಗೌಡ, ಗ್ರಾಮಾಂತರ ಪೊಲೀಸ್ ಠಾಣೆಯ ಸಾಧಿಕ್ ಪಾಷಾ, ಮಹಿಳಾ ಪೊಲೀಸ್ ಠಾಣೆಯ ಎಂ.ಬಿ.ನವೀನ್ ಕುಮಾರ್, ಹೊಸಹಳ್ಳಿ ಪೊಲೀಸ್ ಠಾಣೆ ರಾವ್ ಗಣೇಶ್ ಜನಾರ್ಧನ್ ಸೇರಿದಂತೆ ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿತ್ತು.

Ramesh Babu

Journalist

Recent Posts

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

3 hours ago

ಡಿವೈಡರ್ ದಾಟಿ ಆಲ್ಟೋ ಕಾರಿಗೆ ಡಿಕ್ಕಿ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…

3 hours ago

15 ನೇ ಸೆಪ್ಟೆಂಬರ್ 2026, ವಿಶ್ವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವದ ದಿನ…

  ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ.‌ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…

6 hours ago

ಗಣೇಶ ಹಬ್ಬದ ಸಂಭ್ರಮದ ನಡುವೆ ಮಸಣವಾದ ಮನೆ: ಅಗ್ನಿ ದುರಂತಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ

ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…

8 hours ago

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

20 hours ago

ಗಜಮುಖನ ಆರಾಧನೆಯಲ್ಲಿ ಮಿಂದೆದ್ದ ದೊಡ್ಡಬಳ್ಳಾಪುರ: ಬೆಸ್ತರಪೇಟೆಯಲ್ಲಿ 14 ಅಡಿ ಎತ್ತರದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ: 7ನೇ ವರ್ಷದ ಗಣೇಶೋತ್ಸವಕ್ಕೆ ಅದ್ಧೂರಿ ಮೆರುಗು

ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…

20 hours ago