ದೊಡ್ಡಬಳ್ಳಾಪುರ: ಮುಸ್ಲಿಂ ಸಮುದಾಯದಿಂದ ಪವಿತ್ರ ಈದ್ ಮಿಲಾದ್ ನ್ನು ಸೋಮವಾರ ತಾಲ್ಲೂಕಿನಾದ್ಯಂತ ಸಂಭ್ರಮದಿಂದ ಆಚರಿಸಲಾಯಿತು.
ಶಾಂತಿದೂತ ಮಾನವತಾವಾದಿ ವಿಶ್ವ ಪ್ರವಾದಿ ಮಹಮದ್ ಪೈಗಂಬರ್ ಜನ್ಮ ದಿನಾಚರಣೆ ಅಂಗವಾಗಿ ನಡೆದ ಈದ್ ಮಿಲಾದ್ ಆಚರಣೆಯಲ್ಲಿ ಮುಸ್ಲಿಂ ಬಾಂಧವರು ಪರಸ್ಪರ ಈದ್ ಶುಭಾಶಯಗಳನ್ನು ಕೋರುವ ಮೂಲಕ ಸಂಭ್ರಮಿಸಿದರು. ಮಸೀದಿಗಳಲ್ಲಿ ಮೌಲೀದ್ ಹಾಗೂ ಕುರಾನ್ ಪಾರಾಯಣ ಆಚರಣೆ ನಡೆಯಿತು.
ಮಸೀದಿಗಳ ಸಮೀಪದ ರಸ್ತೆಯುದ್ದಕ್ಕೂ ಹಸಿರುಮಯ ಬ್ಯಾನರ್,ಬಾವುಟಗಳು ರಾರಾಜಿಸುತ್ತಿದ್ದವು. ಮಸೀದಿಗಳಲ್ಲಿ ಅನ್ನಸಂತರ್ಪಣೆ ನಡೆಯಿತು.
ಮಧ್ಯಾಹ್ನ ನಗರದ ಇಸ್ಲಾಂಪುರ ಜಾಮಿಯಾ ದರ್ಗಾದಿಂದ ಪೈಗಂಬರ್ ಮೆಕ್ಕಾದ ಸ್ಥಬ್ದ ಚಿತ್ರಗಳು, ಪ್ರವಾದಿ ಮಹಮದ್ ಪೈಗಂಬರ್ ಅವರ ಮಾನವೀಯ ಸಂದೇಶಗಳನ್ನು ಸಾರುವ ಬಿತ್ತಿಪತ್ರಗಳು, ಮೌಲೀದ್ ಪಾರಾಯಣದೊಂದಿಗೆ ನಗರದ ಪ್ರಮುಖ ಬೀದಿಗಳಲ್ಲಿ ನಡೆದ ಮೆರವಣಿಗೆಯಲ್ಲಿ ನೂರಾರು ಜನ ಭಾಗವಹಿಸಿದ್ದರು.
ಮೆರವಣಿಗೆ ಸಾಗುವ ರಸ್ತೆಯುದ್ದಕ್ಕೂ ಬಿಗಿ ಪೊಲೀಸ್ ಬಂದೋಬಸ್ತ್ ಹಾಕಲಾಗಿತ್ತು.
ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…
ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…
ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…
ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…
ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…