ನಗರದಲ್ಲಿ ಸಡಗರದಿಂದ ನಡೆದ ಈದ್ ಮಿಲಾದ್ ಆಚರಣೆ:ಪರಸ್ಪರ ಈದ್ ಶುಭಾಶಯಗಳನ್ನು ಕೋರಿದ ಮುಸ್ಲಿಂ ಬಾಂಧವರು

ದೊಡ್ಡಬಳ್ಳಾಪುರ: ಮುಸ್ಲಿಂ ಸಮುದಾಯದಿಂದ ಪವಿತ್ರ ಈದ್ ಮಿಲಾದ್ ನ್ನು ಸೋಮವಾರ ತಾಲ್ಲೂಕಿನಾದ್ಯಂತ ಸಂಭ್ರಮದಿಂದ ಆಚರಿಸಲಾಯಿತು.

ಶಾಂತಿದೂತ ಮಾನವತಾವಾದಿ ವಿಶ್ವ ಪ್ರವಾದಿ ಮಹಮದ್ ಪೈಗಂಬರ್ ಜನ್ಮ ದಿನಾಚರಣೆ ಅಂಗವಾಗಿ ನಡೆದ ಈದ್ ಮಿಲಾದ್ ಆಚರಣೆಯಲ್ಲಿ ಮುಸ್ಲಿಂ ಬಾಂಧವರು ಪರಸ್ಪರ ಈದ್ ಶುಭಾಶಯಗಳನ್ನು ಕೋರುವ ಮೂಲಕ ಸಂಭ್ರಮಿಸಿದರು. ಮಸೀದಿಗಳಲ್ಲಿ ಮೌಲೀದ್ ಹಾಗೂ ಕುರಾನ್ ಪಾರಾಯಣ ಆಚರಣೆ ನಡೆಯಿತು.

ಮಸೀದಿಗಳ ಸಮೀಪದ ರಸ್ತೆಯುದ್ದಕ್ಕೂ ಹಸಿರುಮಯ ಬ್ಯಾನರ್,ಬಾವುಟಗಳು ರಾರಾಜಿಸುತ್ತಿದ್ದವು. ಮಸೀದಿಗಳಲ್ಲಿ ಅನ್ನಸಂತರ್ಪಣೆ ನಡೆಯಿತು.

ಮಧ್ಯಾಹ್ನ ನಗರದ ಇಸ್ಲಾಂಪುರ ಜಾಮಿಯಾ ದರ್ಗಾದಿಂದ ಪೈಗಂಬರ್ ಮೆಕ್ಕಾದ ಸ್ಥಬ್ದ ಚಿತ್ರಗಳು, ಪ್ರವಾದಿ ಮಹಮದ್ ಪೈಗಂಬರ್ ಅವರ ಮಾನವೀಯ ಸಂದೇಶಗಳನ್ನು ಸಾರುವ ಬಿತ್ತಿಪತ್ರಗಳು, ಮೌಲೀದ್ ಪಾರಾಯಣದೊಂದಿಗೆ ನಗರದ ಪ್ರಮುಖ ಬೀದಿಗಳಲ್ಲಿ ನಡೆದ ಮೆರವಣಿಗೆಯಲ್ಲಿ ನೂರಾರು ಜನ ಭಾಗವಹಿಸಿದ್ದರು.

ಮೆರವಣಿಗೆ ಸಾಗುವ ರಸ್ತೆಯುದ್ದಕ್ಕೂ ಬಿಗಿ ಪೊಲೀಸ್ ಬಂದೋಬಸ್ತ್ ಹಾಕಲಾಗಿತ್ತು.

Ramesh Babu

Journalist

Recent Posts

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

53 minutes ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

13 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

14 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

16 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

17 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

22 hours ago