ದೊಡ್ಡಬಳ್ಳಾಪುರ: ಮುಸ್ಲಿಂ ಸಮುದಾಯದಿಂದ ಪವಿತ್ರ ಈದ್ ಮಿಲಾದ್ ನ್ನು ಸೋಮವಾರ ತಾಲ್ಲೂಕಿನಾದ್ಯಂತ ಸಂಭ್ರಮದಿಂದ ಆಚರಿಸಲಾಯಿತು.
ಶಾಂತಿದೂತ ಮಾನವತಾವಾದಿ ವಿಶ್ವ ಪ್ರವಾದಿ ಮಹಮದ್ ಪೈಗಂಬರ್ ಜನ್ಮ ದಿನಾಚರಣೆ ಅಂಗವಾಗಿ ನಡೆದ ಈದ್ ಮಿಲಾದ್ ಆಚರಣೆಯಲ್ಲಿ ಮುಸ್ಲಿಂ ಬಾಂಧವರು ಪರಸ್ಪರ ಈದ್ ಶುಭಾಶಯಗಳನ್ನು ಕೋರುವ ಮೂಲಕ ಸಂಭ್ರಮಿಸಿದರು. ಮಸೀದಿಗಳಲ್ಲಿ ಮೌಲೀದ್ ಹಾಗೂ ಕುರಾನ್ ಪಾರಾಯಣ ಆಚರಣೆ ನಡೆಯಿತು.
ಮಸೀದಿಗಳ ಸಮೀಪದ ರಸ್ತೆಯುದ್ದಕ್ಕೂ ಹಸಿರುಮಯ ಬ್ಯಾನರ್,ಬಾವುಟಗಳು ರಾರಾಜಿಸುತ್ತಿದ್ದವು. ಮಸೀದಿಗಳಲ್ಲಿ ಅನ್ನಸಂತರ್ಪಣೆ ನಡೆಯಿತು.
ಮಧ್ಯಾಹ್ನ ನಗರದ ಇಸ್ಲಾಂಪುರ ಜಾಮಿಯಾ ದರ್ಗಾದಿಂದ ಪೈಗಂಬರ್ ಮೆಕ್ಕಾದ ಸ್ಥಬ್ದ ಚಿತ್ರಗಳು, ಪ್ರವಾದಿ ಮಹಮದ್ ಪೈಗಂಬರ್ ಅವರ ಮಾನವೀಯ ಸಂದೇಶಗಳನ್ನು ಸಾರುವ ಬಿತ್ತಿಪತ್ರಗಳು, ಮೌಲೀದ್ ಪಾರಾಯಣದೊಂದಿಗೆ ನಗರದ ಪ್ರಮುಖ ಬೀದಿಗಳಲ್ಲಿ ನಡೆದ ಮೆರವಣಿಗೆಯಲ್ಲಿ ನೂರಾರು ಜನ ಭಾಗವಹಿಸಿದ್ದರು.
ಮೆರವಣಿಗೆ ಸಾಗುವ ರಸ್ತೆಯುದ್ದಕ್ಕೂ ಬಿಗಿ ಪೊಲೀಸ್ ಬಂದೋಬಸ್ತ್ ಹಾಕಲಾಗಿತ್ತು.
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…