ನಗರದಲ್ಲಿ ಸಪ್ತಮಾತೃಕೆ ಮಾರಿಯಮ್ಮ ದೇವಿಯ ಅದ್ಧೂರಿ ಕರಗ ಮಹೋತ್ಸವ: ಕರಗ ಮಹೋತ್ಸವ ವೀಕ್ಷಿಸಿ ಧನ್ಯತೆ ಮೆರೆದ ಭಕ್ತಾಧಿಗಳು

ನಗರದ ಐತಿಹಾಸಿಕ ಸುಪ್ರಸಿದ್ಧ ಶ್ರೀ ಸಪ್ತಮಾತೃಕೆ ಮಾರಿಯಮ್ಮ ದೇವಿಯ ಕರಗ ಮಹೋತ್ಸವವನ್ನ ಭಕ್ತಿಭಾವದಿಂದ ನಡೆಸಲಾಯಿತು.

ಶುಕ್ರವಾರ ಕರಗ ಮಹೋತ್ಸವ ಹಿನ್ನೆಲೆ ನಗರದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಬೆಳಿಗ್ಗೆಯಿಂದಲೇ ಭಕ್ತರು ದೇವಿಗೆ ವಿಶೇಷ ಪೂಜೆ, ಕೈಂಕರ್ಯದಲ್ಲಿ ತೊಡಗಿದ್ದರು. ದೇವಿಯ ದೇವಾಲಯದಲ್ಲಿ ವಿಶೇಷ ವಿದ್ಯುತ್ ದೀಪಾಲಂಕಾರ, ಹೋಮ ಹವನ, ಪೂಜಾ ಕಾರ್ಯಕ್ರಮ ನಡೆಸಲಾಯಿತು.

ನಗರದ ಹಳೇ ಬಸ್ ನಿಲ್ದಾಣ ಬಳಿಯ ಸಿದ್ದಲಿಂಗಯ್ಯ ವೃತ್ತದಲ್ಲಿ ಏರ್ಪಡಿಸಿದ್ದ ಕರಗ ನೃತ್ಯ ಪ್ರದರ್ಶನವನ್ನು ಕಣ್ತುಂಬಿಕೊಂಡ ಭಕ್ತಮಹಾಶಯರು. ಕರಗ ನೃತ್ಯ ಪ್ರದರ್ಶನವನ್ನು ಮೊಬೈಲ್ ನಲ್ಲಿ ಸೆರೆ ಹಿಡಿದು ಸಂಭ್ರಮಿಸಿದ ಜನಸ್ತೋಮ.

ವೇದಿಕೆ ನೃತ್ಯ‌ ಪ್ರದರ್ಶನ ನಂತರ ನಗರದ ಪ್ರಮುಖ ಬೀದಿಗಳಲ್ಲಿ ಕರಗ ಮೆರವಣಿಗೆ ನಡೆಸಲಾಯಿತು. ಕರಗ ತಮ್ಮ ಮನೆಗಳು, ಬೀದಿಗಳ‌ ಬಳಿ ಬಂದಾಗ ಶ್ರದ್ಧಾಭಕ್ತಿಯಿಂದ ಪೂಜೆ ಸಲ್ಲಿಸಿ, ತಮ್ಮ ಹರಕೆ ಹೊತ್ತು ದೇವಿಗೆ ನಮಿಸಿದ ಭಕ್ತರು. ಕರಗ ಸಾಗುವ ವೇಳೆ ಭಕ್ತರು ಮಲ್ಲಿಗೆಯ ಹೂಮಳೆಯ ಸುರಿಸಿ ಭಕ್ತಿಯಲ್ಲಿ ಮಿಂದೆದ್ದರು.

Ramesh Babu

Journalist

Recent Posts

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

6 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

7 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

1 day ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

1 day ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

1 day ago

ಡಿವೈಡರ್ ದಾಟಿ ಆಲ್ಟೋ ಕಾರಿಗೆ ಡಿಕ್ಕಿ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…

1 day ago