ನಗರದಲ್ಲಿ ಸಪ್ತಮಾತೃಕೆ ಮಾರಿಯಮ್ಮ ದೇವಿಯ ಅದ್ಧೂರಿ ಕರಗ ಮಹೋತ್ಸವ: ಕರಗ ಮಹೋತ್ಸವ ವೀಕ್ಷಿಸಿ ಧನ್ಯತೆ ಮೆರೆದ ಭಕ್ತಾಧಿಗಳು

ನಗರದ ಐತಿಹಾಸಿಕ ಸುಪ್ರಸಿದ್ಧ ಶ್ರೀ ಸಪ್ತಮಾತೃಕೆ ಮಾರಿಯಮ್ಮ ದೇವಿಯ ಕರಗ ಮಹೋತ್ಸವವನ್ನ ಭಕ್ತಿಭಾವದಿಂದ ನಡೆಸಲಾಯಿತು.

ಶುಕ್ರವಾರ ಕರಗ ಮಹೋತ್ಸವ ಹಿನ್ನೆಲೆ ನಗರದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಬೆಳಿಗ್ಗೆಯಿಂದಲೇ ಭಕ್ತರು ದೇವಿಗೆ ವಿಶೇಷ ಪೂಜೆ, ಕೈಂಕರ್ಯದಲ್ಲಿ ತೊಡಗಿದ್ದರು. ದೇವಿಯ ದೇವಾಲಯದಲ್ಲಿ ವಿಶೇಷ ವಿದ್ಯುತ್ ದೀಪಾಲಂಕಾರ, ಹೋಮ ಹವನ, ಪೂಜಾ ಕಾರ್ಯಕ್ರಮ ನಡೆಸಲಾಯಿತು.

ನಗರದ ಹಳೇ ಬಸ್ ನಿಲ್ದಾಣ ಬಳಿಯ ಸಿದ್ದಲಿಂಗಯ್ಯ ವೃತ್ತದಲ್ಲಿ ಏರ್ಪಡಿಸಿದ್ದ ಕರಗ ನೃತ್ಯ ಪ್ರದರ್ಶನವನ್ನು ಕಣ್ತುಂಬಿಕೊಂಡ ಭಕ್ತಮಹಾಶಯರು. ಕರಗ ನೃತ್ಯ ಪ್ರದರ್ಶನವನ್ನು ಮೊಬೈಲ್ ನಲ್ಲಿ ಸೆರೆ ಹಿಡಿದು ಸಂಭ್ರಮಿಸಿದ ಜನಸ್ತೋಮ.

ವೇದಿಕೆ ನೃತ್ಯ‌ ಪ್ರದರ್ಶನ ನಂತರ ನಗರದ ಪ್ರಮುಖ ಬೀದಿಗಳಲ್ಲಿ ಕರಗ ಮೆರವಣಿಗೆ ನಡೆಸಲಾಯಿತು. ಕರಗ ತಮ್ಮ ಮನೆಗಳು, ಬೀದಿಗಳ‌ ಬಳಿ ಬಂದಾಗ ಶ್ರದ್ಧಾಭಕ್ತಿಯಿಂದ ಪೂಜೆ ಸಲ್ಲಿಸಿ, ತಮ್ಮ ಹರಕೆ ಹೊತ್ತು ದೇವಿಗೆ ನಮಿಸಿದ ಭಕ್ತರು. ಕರಗ ಸಾಗುವ ವೇಳೆ ಭಕ್ತರು ಮಲ್ಲಿಗೆಯ ಹೂಮಳೆಯ ಸುರಿಸಿ ಭಕ್ತಿಯಲ್ಲಿ ಮಿಂದೆದ್ದರು.

Ramesh Babu

Journalist

Recent Posts

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

6 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

2 days ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

2 days ago