ದೊಡ್ಡಬಳ್ಳಾಪುರ ತಾಲ್ಲೂಕಿನ ಅಂಚೆ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯಿಂದ ನಗರದ ಪ್ರಮುಖ ರಸ್ತೆಗಳಲ್ಲಿ ಹರ್ ಘರ್ ತಿರಂಗ್ ಅಭಿಯಾನ ನಡೆಸಲಾಯಿತು.
76ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ನಡೆಯುತ್ತಿರುವ ಅಭಿಯಾನದಲ್ಲಿ ಭಾಗವಹಿಸಿ ಮಾತನಾಡಿದ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ನಮ್ಮ ರಾಷ್ಟ್ರ ಧ್ವಜಕ್ಕೆ ಪ್ರತಿಯೊಬ್ಬರೂ ಗೌರವ ಸಲ್ಲಿಸಬೇಕಾಗಿದೆ. ರಾಷ್ಟ್ರಧ್ವಜದ ಹಿರಿಮೆಯನ್ನು ಅರಿಯುವುದರೊಂದಿಗೆ ರಾಷ್ಟ್ರಧ್ವಜದ ಬಗ್ಗೆ ಸರಿಯಾದ ತಿಳುವಳಿಕೆಯನ್ನು ಹೊಂದಬೇಕಾಗಿದೆ. ರಾಷ್ಟ್ರದ ಹೆಮ್ಮೆಯ ಪ್ರತೀಕವಾದ ರಾಷ್ಟ್ರಧ್ವಜವನ್ನು ಸ್ವಾತಂತ್ರ್ಯ ದಿನಾಚರಣೆಯಂದು ಪ್ರತಿಯೊಂದು ಮನೆಯ ಮೇಲೆ ಹಾರಿಸುವ ಮೂಲಕ ಸಂಭ್ರಮಿಸಬೇಕಾಗಿದೆ ಎಂದರು.
ರಾಷ್ಟ್ರಧ್ವಜದ ಸಂಹಿತೆಯಂತೆ ಧ್ವಜಾರೋಹಣ ಮತ್ತು ಅವರೋಹಣ ಕ್ರಮವನ್ನು ಪಾಲಿಸಬೇಕು. ವಿದ್ಯಾರ್ಥಿಗಳು ಪ್ಲಾಸ್ಟಿಕ್ ಧ್ವಜಗಳನ್ನು ಬಳಸಬಾರದು ಎಂದರು.
ದೊಡ್ಡಬಳ್ಳಾಪುರ ಉಪವಿಭಾಗದ ಅಂಚೆ ನಿರೀಕ್ಷಕರಾದ ಹರಿಪ್ರಕಾಶ್ ಮಾತನಾಡಿ, ಪ್ರತಿ ವರ್ಷವು ಅಂಚೆ ಇಲಾಖೆಯ ವತಿಯಿಂದ ಹರ್ ಘರ್ ತಿರಂಗ್ ಅಭಿಯಾನವನ್ನು ನಡೆಸಲಾಗುತ್ತಿದೆ. ರಾಷ್ಟ್ರೀಯ ಭಾವೈಕ್ಯತೆ ಮತ್ತು ರಾಷ್ಟ್ರಪ್ರೇಮವನ್ನು ಮೂಡಿಸುವ ಉದ್ದೇಶಕ್ಕಾಗಿ ಕೇಂದ್ರ ಸರ್ಕಾರ ಹರ್ ಘರ್ ತಿರಂಗ್ ಅಭಿಯಾನ ಪ್ರಾರಂಭಿಸಿದೆ ಎಂದರು.
ಈ ಅಭಿಯಾನದ ಮೂಲಕ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ರಾಷ್ಟ್ರಧ್ವಜವನ್ನು ಪ್ರತಿಯೊಬ್ಬರ ಮನೆಯ ಮೇಲೆ ಹಾರಿಸುವಂತೆ ಮನವಿ ಮಾಡಿಕೊಳ್ಳಲಾಗುತ್ತಿದೆ. ಪ್ರತಿ ವರ್ಷದಂತೆ ಈ ವರ್ಷವು ಸಾರ್ವಜನಿಕರು ಹರ್ ಘರ್ ತಿರಂಗ್ ಅಭಿಯಾನಕ್ಕೆ ಉತ್ತಮ ಪ್ರೋತ್ಸಾಹ ಮತ್ತು ಸಹಕಾರ ನೀಡುತ್ತಿದ್ದಾರೆ ಎಂದರು.
ಅಭಿಯಾನದಲ್ಲಿ ದೊಡ್ಡಬಳ್ಳಾಪುರ ಅಂಚೆ ಕಾರ್ಯಾಲಯದ ಮುಖ್ಯಸ್ಥರಾದ ಬಸವರಾಜು, ಅಧಿಕಾರಿಗಳಾದ ಆರ್.ಕೃಷ್ಣಮೂರ್ತಿ, ಎಚ್.ಮುನಿಸಂಜೀವಯ್ಯ, ಡಿ.ಸಿ.ಮೋಹನ್ ಕುಮಾರ್, ನಿರ್ಮಲಬಾಯಿ, ವಸಂತಬಾಯಿ ಹಾಗೂ ಸಿಬ್ಬಂದಿಯವರು ಭಾಗವಹಿಸಿದ್ದರು.
ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು…
ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…
ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…
ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…
ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭರತ್ ಹೆಗ್ಗಡೆ, ಲೋಕಾಯುಕ್ತ ಬಲೆಗೆ…
ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್ ಓಕ್ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…