ದೊಡ್ಡಬಳ್ಳಾಪುರ ತಾಲ್ಲೂಕಿನ ಅಂಚೆ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯಿಂದ ನಗರದ ಪ್ರಮುಖ ರಸ್ತೆಗಳಲ್ಲಿ ಹರ್ ಘರ್ ತಿರಂಗ್ ಅಭಿಯಾನ ನಡೆಸಲಾಯಿತು.
76ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ನಡೆಯುತ್ತಿರುವ ಅಭಿಯಾನದಲ್ಲಿ ಭಾಗವಹಿಸಿ ಮಾತನಾಡಿದ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ನಮ್ಮ ರಾಷ್ಟ್ರ ಧ್ವಜಕ್ಕೆ ಪ್ರತಿಯೊಬ್ಬರೂ ಗೌರವ ಸಲ್ಲಿಸಬೇಕಾಗಿದೆ. ರಾಷ್ಟ್ರಧ್ವಜದ ಹಿರಿಮೆಯನ್ನು ಅರಿಯುವುದರೊಂದಿಗೆ ರಾಷ್ಟ್ರಧ್ವಜದ ಬಗ್ಗೆ ಸರಿಯಾದ ತಿಳುವಳಿಕೆಯನ್ನು ಹೊಂದಬೇಕಾಗಿದೆ. ರಾಷ್ಟ್ರದ ಹೆಮ್ಮೆಯ ಪ್ರತೀಕವಾದ ರಾಷ್ಟ್ರಧ್ವಜವನ್ನು ಸ್ವಾತಂತ್ರ್ಯ ದಿನಾಚರಣೆಯಂದು ಪ್ರತಿಯೊಂದು ಮನೆಯ ಮೇಲೆ ಹಾರಿಸುವ ಮೂಲಕ ಸಂಭ್ರಮಿಸಬೇಕಾಗಿದೆ ಎಂದರು.
ರಾಷ್ಟ್ರಧ್ವಜದ ಸಂಹಿತೆಯಂತೆ ಧ್ವಜಾರೋಹಣ ಮತ್ತು ಅವರೋಹಣ ಕ್ರಮವನ್ನು ಪಾಲಿಸಬೇಕು. ವಿದ್ಯಾರ್ಥಿಗಳು ಪ್ಲಾಸ್ಟಿಕ್ ಧ್ವಜಗಳನ್ನು ಬಳಸಬಾರದು ಎಂದರು.
ದೊಡ್ಡಬಳ್ಳಾಪುರ ಉಪವಿಭಾಗದ ಅಂಚೆ ನಿರೀಕ್ಷಕರಾದ ಹರಿಪ್ರಕಾಶ್ ಮಾತನಾಡಿ, ಪ್ರತಿ ವರ್ಷವು ಅಂಚೆ ಇಲಾಖೆಯ ವತಿಯಿಂದ ಹರ್ ಘರ್ ತಿರಂಗ್ ಅಭಿಯಾನವನ್ನು ನಡೆಸಲಾಗುತ್ತಿದೆ. ರಾಷ್ಟ್ರೀಯ ಭಾವೈಕ್ಯತೆ ಮತ್ತು ರಾಷ್ಟ್ರಪ್ರೇಮವನ್ನು ಮೂಡಿಸುವ ಉದ್ದೇಶಕ್ಕಾಗಿ ಕೇಂದ್ರ ಸರ್ಕಾರ ಹರ್ ಘರ್ ತಿರಂಗ್ ಅಭಿಯಾನ ಪ್ರಾರಂಭಿಸಿದೆ ಎಂದರು.
ಈ ಅಭಿಯಾನದ ಮೂಲಕ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ರಾಷ್ಟ್ರಧ್ವಜವನ್ನು ಪ್ರತಿಯೊಬ್ಬರ ಮನೆಯ ಮೇಲೆ ಹಾರಿಸುವಂತೆ ಮನವಿ ಮಾಡಿಕೊಳ್ಳಲಾಗುತ್ತಿದೆ. ಪ್ರತಿ ವರ್ಷದಂತೆ ಈ ವರ್ಷವು ಸಾರ್ವಜನಿಕರು ಹರ್ ಘರ್ ತಿರಂಗ್ ಅಭಿಯಾನಕ್ಕೆ ಉತ್ತಮ ಪ್ರೋತ್ಸಾಹ ಮತ್ತು ಸಹಕಾರ ನೀಡುತ್ತಿದ್ದಾರೆ ಎಂದರು.
ಅಭಿಯಾನದಲ್ಲಿ ದೊಡ್ಡಬಳ್ಳಾಪುರ ಅಂಚೆ ಕಾರ್ಯಾಲಯದ ಮುಖ್ಯಸ್ಥರಾದ ಬಸವರಾಜು, ಅಧಿಕಾರಿಗಳಾದ ಆರ್.ಕೃಷ್ಣಮೂರ್ತಿ, ಎಚ್.ಮುನಿಸಂಜೀವಯ್ಯ, ಡಿ.ಸಿ.ಮೋಹನ್ ಕುಮಾರ್, ನಿರ್ಮಲಬಾಯಿ, ವಸಂತಬಾಯಿ ಹಾಗೂ ಸಿಬ್ಬಂದಿಯವರು ಭಾಗವಹಿಸಿದ್ದರು.
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…
ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…
ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…
ಯಲಹಂಕ ತಾಲೂಕಿನ ಜಾಲ ಹೋಬಳಿಯ ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಎ.ಸಿ. ಗೋವಿಂದಪ್ಪ ಅವಿರೋಧವಾಗಿ…