ದೊಡ್ಡಬಳ್ಳಾಪುರ ತಾಲ್ಲೂಕಿನ ಅಂಚೆ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯಿಂದ ನಗರದ ಪ್ರಮುಖ ರಸ್ತೆಗಳಲ್ಲಿ ಹರ್ ಘರ್ ತಿರಂಗ್ ಅಭಿಯಾನ ನಡೆಸಲಾಯಿತು.
76ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ನಡೆಯುತ್ತಿರುವ ಅಭಿಯಾನದಲ್ಲಿ ಭಾಗವಹಿಸಿ ಮಾತನಾಡಿದ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ನಮ್ಮ ರಾಷ್ಟ್ರ ಧ್ವಜಕ್ಕೆ ಪ್ರತಿಯೊಬ್ಬರೂ ಗೌರವ ಸಲ್ಲಿಸಬೇಕಾಗಿದೆ. ರಾಷ್ಟ್ರಧ್ವಜದ ಹಿರಿಮೆಯನ್ನು ಅರಿಯುವುದರೊಂದಿಗೆ ರಾಷ್ಟ್ರಧ್ವಜದ ಬಗ್ಗೆ ಸರಿಯಾದ ತಿಳುವಳಿಕೆಯನ್ನು ಹೊಂದಬೇಕಾಗಿದೆ. ರಾಷ್ಟ್ರದ ಹೆಮ್ಮೆಯ ಪ್ರತೀಕವಾದ ರಾಷ್ಟ್ರಧ್ವಜವನ್ನು ಸ್ವಾತಂತ್ರ್ಯ ದಿನಾಚರಣೆಯಂದು ಪ್ರತಿಯೊಂದು ಮನೆಯ ಮೇಲೆ ಹಾರಿಸುವ ಮೂಲಕ ಸಂಭ್ರಮಿಸಬೇಕಾಗಿದೆ ಎಂದರು.
ರಾಷ್ಟ್ರಧ್ವಜದ ಸಂಹಿತೆಯಂತೆ ಧ್ವಜಾರೋಹಣ ಮತ್ತು ಅವರೋಹಣ ಕ್ರಮವನ್ನು ಪಾಲಿಸಬೇಕು. ವಿದ್ಯಾರ್ಥಿಗಳು ಪ್ಲಾಸ್ಟಿಕ್ ಧ್ವಜಗಳನ್ನು ಬಳಸಬಾರದು ಎಂದರು.
ದೊಡ್ಡಬಳ್ಳಾಪುರ ಉಪವಿಭಾಗದ ಅಂಚೆ ನಿರೀಕ್ಷಕರಾದ ಹರಿಪ್ರಕಾಶ್ ಮಾತನಾಡಿ, ಪ್ರತಿ ವರ್ಷವು ಅಂಚೆ ಇಲಾಖೆಯ ವತಿಯಿಂದ ಹರ್ ಘರ್ ತಿರಂಗ್ ಅಭಿಯಾನವನ್ನು ನಡೆಸಲಾಗುತ್ತಿದೆ. ರಾಷ್ಟ್ರೀಯ ಭಾವೈಕ್ಯತೆ ಮತ್ತು ರಾಷ್ಟ್ರಪ್ರೇಮವನ್ನು ಮೂಡಿಸುವ ಉದ್ದೇಶಕ್ಕಾಗಿ ಕೇಂದ್ರ ಸರ್ಕಾರ ಹರ್ ಘರ್ ತಿರಂಗ್ ಅಭಿಯಾನ ಪ್ರಾರಂಭಿಸಿದೆ ಎಂದರು.
ಈ ಅಭಿಯಾನದ ಮೂಲಕ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ರಾಷ್ಟ್ರಧ್ವಜವನ್ನು ಪ್ರತಿಯೊಬ್ಬರ ಮನೆಯ ಮೇಲೆ ಹಾರಿಸುವಂತೆ ಮನವಿ ಮಾಡಿಕೊಳ್ಳಲಾಗುತ್ತಿದೆ. ಪ್ರತಿ ವರ್ಷದಂತೆ ಈ ವರ್ಷವು ಸಾರ್ವಜನಿಕರು ಹರ್ ಘರ್ ತಿರಂಗ್ ಅಭಿಯಾನಕ್ಕೆ ಉತ್ತಮ ಪ್ರೋತ್ಸಾಹ ಮತ್ತು ಸಹಕಾರ ನೀಡುತ್ತಿದ್ದಾರೆ ಎಂದರು.
ಅಭಿಯಾನದಲ್ಲಿ ದೊಡ್ಡಬಳ್ಳಾಪುರ ಅಂಚೆ ಕಾರ್ಯಾಲಯದ ಮುಖ್ಯಸ್ಥರಾದ ಬಸವರಾಜು, ಅಧಿಕಾರಿಗಳಾದ ಆರ್.ಕೃಷ್ಣಮೂರ್ತಿ, ಎಚ್.ಮುನಿಸಂಜೀವಯ್ಯ, ಡಿ.ಸಿ.ಮೋಹನ್ ಕುಮಾರ್, ನಿರ್ಮಲಬಾಯಿ, ವಸಂತಬಾಯಿ ಹಾಗೂ ಸಿಬ್ಬಂದಿಯವರು ಭಾಗವಹಿಸಿದ್ದರು.
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…