ನಗರದಲ್ಲಿ ಹರ್ ಘರ್ ತಿರಂಗ ಅಭಿಯಾನ: ರಾಷ್ಟ್ರ ಧ್ವಜಕ್ಕೆ ಗೌರವ

ದೊಡ್ಡಬಳ್ಳಾಪುರ ತಾಲ್ಲೂಕಿನ ಅಂಚೆ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯಿಂದ ನಗರದ  ಪ್ರಮುಖ ರಸ್ತೆಗಳಲ್ಲಿ ಹರ್ ಘರ್ ತಿರಂಗ್ ಅಭಿಯಾನ ನಡೆಸಲಾಯಿತು.

76ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ನಡೆಯುತ್ತಿರುವ ಅಭಿಯಾನದಲ್ಲಿ ಭಾಗವಹಿಸಿ ಮಾತನಾಡಿದ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ನಮ್ಮ ರಾಷ್ಟ್ರ ಧ್ವಜಕ್ಕೆ ಪ್ರತಿಯೊಬ್ಬರೂ ಗೌರವ ಸಲ್ಲಿಸಬೇಕಾಗಿದೆ. ರಾಷ್ಟ್ರಧ್ವಜದ ಹಿರಿಮೆಯನ್ನು  ಅರಿಯುವುದರೊಂದಿಗೆ ರಾಷ್ಟ್ರಧ್ವಜದ ಬಗ್ಗೆ ಸರಿಯಾದ ತಿಳುವಳಿಕೆಯನ್ನು ಹೊಂದಬೇಕಾಗಿದೆ. ರಾಷ್ಟ್ರದ ಹೆಮ್ಮೆಯ ಪ್ರತೀಕವಾದ ರಾಷ್ಟ್ರಧ್ವಜವನ್ನು ಸ್ವಾತಂತ್ರ್ಯ ದಿನಾಚರಣೆಯಂದು ಪ್ರತಿಯೊಂದು ಮನೆಯ ಮೇಲೆ ಹಾರಿಸುವ ಮೂಲಕ ಸಂಭ್ರಮಿಸಬೇಕಾಗಿದೆ ಎಂದರು.

ರಾಷ್ಟ್ರಧ್ವಜದ ಸಂಹಿತೆಯಂತೆ  ಧ್ವಜಾರೋಹಣ ಮತ್ತು ಅವರೋಹಣ ಕ್ರಮವನ್ನು ಪಾಲಿಸಬೇಕು.      ವಿದ್ಯಾರ್ಥಿಗಳು ಪ್ಲಾಸ್ಟಿಕ್ ಧ್ವಜಗಳನ್ನು ಬಳಸಬಾರದು ಎಂದರು.

ದೊಡ್ಡಬಳ್ಳಾಪುರ ಉಪವಿಭಾಗದ ಅಂಚೆ ನಿರೀಕ್ಷಕರಾದ ಹರಿಪ್ರಕಾಶ್ ಮಾತನಾಡಿ,  ಪ್ರತಿ ವರ್ಷವು ಅಂಚೆ ಇಲಾಖೆಯ ವತಿಯಿಂದ ಹರ್ ಘರ್ ತಿರಂಗ್ ಅಭಿಯಾನವನ್ನು ನಡೆಸಲಾಗುತ್ತಿದೆ. ರಾಷ್ಟ್ರೀಯ ಭಾವೈಕ್ಯತೆ ಮತ್ತು ರಾಷ್ಟ್ರಪ್ರೇಮವನ್ನು ಮೂಡಿಸುವ ಉದ್ದೇಶಕ್ಕಾಗಿ ಕೇಂದ್ರ ಸರ್ಕಾರ ಹರ್ ಘರ್ ತಿರಂಗ್ ಅಭಿಯಾನ ಪ್ರಾರಂಭಿಸಿದೆ ಎಂದರು.

ಈ ಅಭಿಯಾನದ ಮೂಲಕ ದೊಡ್ಡಬಳ್ಳಾಪುರ  ತಾಲ್ಲೂಕಿನಲ್ಲಿ   ರಾಷ್ಟ್ರಧ್ವಜವನ್ನು ಪ್ರತಿಯೊಬ್ಬರ ಮನೆಯ ಮೇಲೆ  ಹಾರಿಸುವಂತೆ  ಮನವಿ ಮಾಡಿಕೊಳ್ಳಲಾಗುತ್ತಿದೆ.   ಪ್ರತಿ ವರ್ಷದಂತೆ ಈ ವರ್ಷವು ಸಾರ್ವಜನಿಕರು ಹರ್ ಘರ್ ತಿರಂಗ್ ಅಭಿಯಾನಕ್ಕೆ ಉತ್ತಮ ಪ್ರೋತ್ಸಾಹ  ಮತ್ತು ಸಹಕಾರ ನೀಡುತ್ತಿದ್ದಾರೆ ಎಂದರು.

ಅಭಿಯಾನದಲ್ಲಿ ದೊಡ್ಡಬಳ್ಳಾಪುರ ಅಂಚೆ ಕಾರ್ಯಾಲಯದ ಮುಖ್ಯಸ್ಥರಾದ ಬಸವರಾಜು, ಅಧಿಕಾರಿಗಳಾದ ಆರ್.ಕೃಷ್ಣಮೂರ್ತಿ, ಎಚ್.ಮುನಿಸಂಜೀವಯ್ಯ, ಡಿ.ಸಿ.ಮೋಹನ್ ಕುಮಾರ್, ನಿರ್ಮಲಬಾಯಿ, ವಸಂತಬಾಯಿ ಹಾಗೂ ಸಿಬ್ಬಂದಿಯವರು ಭಾಗವಹಿಸಿದ್ದರು.

Ramesh Babu

Journalist

Recent Posts

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

13 hours ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

13 hours ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

14 hours ago

ಸಿಎಂ ಆದ ಬಳಿಕ ಜನತೆಗೆ ಕೃತಜ್ಞತೆ ಸಲ್ಲಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…

15 hours ago

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…

18 hours ago

ರಾಜ್ಯದ 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…

18 hours ago