ನಗರದಲ್ಲಿ ಹರ್ ಘರ್ ತಿರಂಗ ಅಭಿಯಾನ: ರಾಷ್ಟ್ರ ಧ್ವಜಕ್ಕೆ ಗೌರವ

ದೊಡ್ಡಬಳ್ಳಾಪುರ ತಾಲ್ಲೂಕಿನ ಅಂಚೆ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯಿಂದ ನಗರದ  ಪ್ರಮುಖ ರಸ್ತೆಗಳಲ್ಲಿ ಹರ್ ಘರ್ ತಿರಂಗ್ ಅಭಿಯಾನ ನಡೆಸಲಾಯಿತು.

76ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ನಡೆಯುತ್ತಿರುವ ಅಭಿಯಾನದಲ್ಲಿ ಭಾಗವಹಿಸಿ ಮಾತನಾಡಿದ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ನಮ್ಮ ರಾಷ್ಟ್ರ ಧ್ವಜಕ್ಕೆ ಪ್ರತಿಯೊಬ್ಬರೂ ಗೌರವ ಸಲ್ಲಿಸಬೇಕಾಗಿದೆ. ರಾಷ್ಟ್ರಧ್ವಜದ ಹಿರಿಮೆಯನ್ನು  ಅರಿಯುವುದರೊಂದಿಗೆ ರಾಷ್ಟ್ರಧ್ವಜದ ಬಗ್ಗೆ ಸರಿಯಾದ ತಿಳುವಳಿಕೆಯನ್ನು ಹೊಂದಬೇಕಾಗಿದೆ. ರಾಷ್ಟ್ರದ ಹೆಮ್ಮೆಯ ಪ್ರತೀಕವಾದ ರಾಷ್ಟ್ರಧ್ವಜವನ್ನು ಸ್ವಾತಂತ್ರ್ಯ ದಿನಾಚರಣೆಯಂದು ಪ್ರತಿಯೊಂದು ಮನೆಯ ಮೇಲೆ ಹಾರಿಸುವ ಮೂಲಕ ಸಂಭ್ರಮಿಸಬೇಕಾಗಿದೆ ಎಂದರು.

ರಾಷ್ಟ್ರಧ್ವಜದ ಸಂಹಿತೆಯಂತೆ  ಧ್ವಜಾರೋಹಣ ಮತ್ತು ಅವರೋಹಣ ಕ್ರಮವನ್ನು ಪಾಲಿಸಬೇಕು.      ವಿದ್ಯಾರ್ಥಿಗಳು ಪ್ಲಾಸ್ಟಿಕ್ ಧ್ವಜಗಳನ್ನು ಬಳಸಬಾರದು ಎಂದರು.

ದೊಡ್ಡಬಳ್ಳಾಪುರ ಉಪವಿಭಾಗದ ಅಂಚೆ ನಿರೀಕ್ಷಕರಾದ ಹರಿಪ್ರಕಾಶ್ ಮಾತನಾಡಿ,  ಪ್ರತಿ ವರ್ಷವು ಅಂಚೆ ಇಲಾಖೆಯ ವತಿಯಿಂದ ಹರ್ ಘರ್ ತಿರಂಗ್ ಅಭಿಯಾನವನ್ನು ನಡೆಸಲಾಗುತ್ತಿದೆ. ರಾಷ್ಟ್ರೀಯ ಭಾವೈಕ್ಯತೆ ಮತ್ತು ರಾಷ್ಟ್ರಪ್ರೇಮವನ್ನು ಮೂಡಿಸುವ ಉದ್ದೇಶಕ್ಕಾಗಿ ಕೇಂದ್ರ ಸರ್ಕಾರ ಹರ್ ಘರ್ ತಿರಂಗ್ ಅಭಿಯಾನ ಪ್ರಾರಂಭಿಸಿದೆ ಎಂದರು.

ಈ ಅಭಿಯಾನದ ಮೂಲಕ ದೊಡ್ಡಬಳ್ಳಾಪುರ  ತಾಲ್ಲೂಕಿನಲ್ಲಿ   ರಾಷ್ಟ್ರಧ್ವಜವನ್ನು ಪ್ರತಿಯೊಬ್ಬರ ಮನೆಯ ಮೇಲೆ  ಹಾರಿಸುವಂತೆ  ಮನವಿ ಮಾಡಿಕೊಳ್ಳಲಾಗುತ್ತಿದೆ.   ಪ್ರತಿ ವರ್ಷದಂತೆ ಈ ವರ್ಷವು ಸಾರ್ವಜನಿಕರು ಹರ್ ಘರ್ ತಿರಂಗ್ ಅಭಿಯಾನಕ್ಕೆ ಉತ್ತಮ ಪ್ರೋತ್ಸಾಹ  ಮತ್ತು ಸಹಕಾರ ನೀಡುತ್ತಿದ್ದಾರೆ ಎಂದರು.

ಅಭಿಯಾನದಲ್ಲಿ ದೊಡ್ಡಬಳ್ಳಾಪುರ ಅಂಚೆ ಕಾರ್ಯಾಲಯದ ಮುಖ್ಯಸ್ಥರಾದ ಬಸವರಾಜು, ಅಧಿಕಾರಿಗಳಾದ ಆರ್.ಕೃಷ್ಣಮೂರ್ತಿ, ಎಚ್.ಮುನಿಸಂಜೀವಯ್ಯ, ಡಿ.ಸಿ.ಮೋಹನ್ ಕುಮಾರ್, ನಿರ್ಮಲಬಾಯಿ, ವಸಂತಬಾಯಿ ಹಾಗೂ ಸಿಬ್ಬಂದಿಯವರು ಭಾಗವಹಿಸಿದ್ದರು.

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

19 minutes ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

11 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

12 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

12 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

15 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

18 hours ago