ನಗರದಲ್ಲಿ ಹರ್ ಘರ್ ತಿರಂಗ ಅಭಿಯಾನ: ರಾಷ್ಟ್ರ ಧ್ವಜಕ್ಕೆ ಗೌರವ

ದೊಡ್ಡಬಳ್ಳಾಪುರ ತಾಲ್ಲೂಕಿನ ಅಂಚೆ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯಿಂದ ನಗರದ  ಪ್ರಮುಖ ರಸ್ತೆಗಳಲ್ಲಿ ಹರ್ ಘರ್ ತಿರಂಗ್ ಅಭಿಯಾನ ನಡೆಸಲಾಯಿತು.

76ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ನಡೆಯುತ್ತಿರುವ ಅಭಿಯಾನದಲ್ಲಿ ಭಾಗವಹಿಸಿ ಮಾತನಾಡಿದ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ನಮ್ಮ ರಾಷ್ಟ್ರ ಧ್ವಜಕ್ಕೆ ಪ್ರತಿಯೊಬ್ಬರೂ ಗೌರವ ಸಲ್ಲಿಸಬೇಕಾಗಿದೆ. ರಾಷ್ಟ್ರಧ್ವಜದ ಹಿರಿಮೆಯನ್ನು  ಅರಿಯುವುದರೊಂದಿಗೆ ರಾಷ್ಟ್ರಧ್ವಜದ ಬಗ್ಗೆ ಸರಿಯಾದ ತಿಳುವಳಿಕೆಯನ್ನು ಹೊಂದಬೇಕಾಗಿದೆ. ರಾಷ್ಟ್ರದ ಹೆಮ್ಮೆಯ ಪ್ರತೀಕವಾದ ರಾಷ್ಟ್ರಧ್ವಜವನ್ನು ಸ್ವಾತಂತ್ರ್ಯ ದಿನಾಚರಣೆಯಂದು ಪ್ರತಿಯೊಂದು ಮನೆಯ ಮೇಲೆ ಹಾರಿಸುವ ಮೂಲಕ ಸಂಭ್ರಮಿಸಬೇಕಾಗಿದೆ ಎಂದರು.

ರಾಷ್ಟ್ರಧ್ವಜದ ಸಂಹಿತೆಯಂತೆ  ಧ್ವಜಾರೋಹಣ ಮತ್ತು ಅವರೋಹಣ ಕ್ರಮವನ್ನು ಪಾಲಿಸಬೇಕು.      ವಿದ್ಯಾರ್ಥಿಗಳು ಪ್ಲಾಸ್ಟಿಕ್ ಧ್ವಜಗಳನ್ನು ಬಳಸಬಾರದು ಎಂದರು.

ದೊಡ್ಡಬಳ್ಳಾಪುರ ಉಪವಿಭಾಗದ ಅಂಚೆ ನಿರೀಕ್ಷಕರಾದ ಹರಿಪ್ರಕಾಶ್ ಮಾತನಾಡಿ,  ಪ್ರತಿ ವರ್ಷವು ಅಂಚೆ ಇಲಾಖೆಯ ವತಿಯಿಂದ ಹರ್ ಘರ್ ತಿರಂಗ್ ಅಭಿಯಾನವನ್ನು ನಡೆಸಲಾಗುತ್ತಿದೆ. ರಾಷ್ಟ್ರೀಯ ಭಾವೈಕ್ಯತೆ ಮತ್ತು ರಾಷ್ಟ್ರಪ್ರೇಮವನ್ನು ಮೂಡಿಸುವ ಉದ್ದೇಶಕ್ಕಾಗಿ ಕೇಂದ್ರ ಸರ್ಕಾರ ಹರ್ ಘರ್ ತಿರಂಗ್ ಅಭಿಯಾನ ಪ್ರಾರಂಭಿಸಿದೆ ಎಂದರು.

ಈ ಅಭಿಯಾನದ ಮೂಲಕ ದೊಡ್ಡಬಳ್ಳಾಪುರ  ತಾಲ್ಲೂಕಿನಲ್ಲಿ   ರಾಷ್ಟ್ರಧ್ವಜವನ್ನು ಪ್ರತಿಯೊಬ್ಬರ ಮನೆಯ ಮೇಲೆ  ಹಾರಿಸುವಂತೆ  ಮನವಿ ಮಾಡಿಕೊಳ್ಳಲಾಗುತ್ತಿದೆ.   ಪ್ರತಿ ವರ್ಷದಂತೆ ಈ ವರ್ಷವು ಸಾರ್ವಜನಿಕರು ಹರ್ ಘರ್ ತಿರಂಗ್ ಅಭಿಯಾನಕ್ಕೆ ಉತ್ತಮ ಪ್ರೋತ್ಸಾಹ  ಮತ್ತು ಸಹಕಾರ ನೀಡುತ್ತಿದ್ದಾರೆ ಎಂದರು.

ಅಭಿಯಾನದಲ್ಲಿ ದೊಡ್ಡಬಳ್ಳಾಪುರ ಅಂಚೆ ಕಾರ್ಯಾಲಯದ ಮುಖ್ಯಸ್ಥರಾದ ಬಸವರಾಜು, ಅಧಿಕಾರಿಗಳಾದ ಆರ್.ಕೃಷ್ಣಮೂರ್ತಿ, ಎಚ್.ಮುನಿಸಂಜೀವಯ್ಯ, ಡಿ.ಸಿ.ಮೋಹನ್ ಕುಮಾರ್, ನಿರ್ಮಲಬಾಯಿ, ವಸಂತಬಾಯಿ ಹಾಗೂ ಸಿಬ್ಬಂದಿಯವರು ಭಾಗವಹಿಸಿದ್ದರು.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

7 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

11 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

11 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

14 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

1 day ago