Categories: ಕೋಲಾರ

ನಗರದ ಅಭಿವೃದ್ಧಿಗೆ ಸಹಕಾರ ಮತ್ತು ಮಾರ್ಗದರ್ಶನದ ಭರವಸೆ ನೀಡಿದ ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ನಗರದ ಅಭಿವೃದ್ಧಿಗೆ ನೂತನ ಅಧ್ಯಕ್ಷರಿಗೆ ಉಪಾಧ್ಯಕ್ಷರಿಗೆ ಎಲ್ಲಾ ರೀತಿಯ ಸಹಕಾರ ಮತ್ತು ಮಾರ್ಗದರ್ಶನ ಮಾಡಲಿದ್ದು, ಎಲ್ಲಾ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಾರ್ವಜನಿಕ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಮಾದರಿ ನಗರಸಭೆ ಯಾಗಿಸುವಂತೆ ಶಾಸಕ ಕೊತ್ತೂರು ಜಿ ಮಂಜುನಾಥ್ ತಿಳಿಸಿದರು

ಬುಧವಾರ ಕೋಲಾರ ನಗರಸಭೆಯಲ್ಲಿ ನೂತನ ಅಧ್ಯಕ್ಷೆ ಲಕ್ಷ್ಮೀದೇವಮ್ಮ ಹಾಗೂ ಉಪಾಧ್ಯಕ್ಷೆ ಸಂಗೀತಾ ಅವರ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಕೋಲಾರ ನಗರಸಭೆಯ ಆಡಳಿತ ಮಂಡಳಿಯ ಚುಕ್ಕಾಣಿಯನ್ನು ಹೆಣ್ಣು ಮಕ್ಕಳೇ ವಹಿಸಿದ್ದಾರೆ ಮನೆಯ ಜವಾಬ್ದಾರಿಯನ್ನು ವಹಿಸಿ ಹೇಗೆ ನಿಭಾಯಿಸುತ್ತಾರೆ ಅದೇ ರೀತಿ ಸಹ ನಗರಸಭೆಯನ್ನು ಅಭಿವೃದ್ದಿಯ ಕಡೆಗೆ ತರಲಿದ್ದಾರೆ ನಗರಸಭೆಯಲ್ಲಿನ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸವನ್ನು ನೂತನ ಅಧ್ಯಕ್ಷರು ಉಪಾಧ್ಯಕ್ಷರು ಮಾಡಬೇಕಾಗಿದೆ ಎಂದರು.

ನಗರಸಭೆ ನೂತನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಕಛೇರಿಗೆ ಮಾತ್ರ ಸೀಮಿತವಾಗದೇ ನಗರವನ್ನು ಸಂಚರಿಸಿ ಸಮಸ್ಯೆಗಳನ್ನು ಪಟ್ಟಿ ಮಾಡಿ ಅಧಿಕಾರಿಗಳಿಂದ ಪರಿಹಾರವನ್ನು ಕಂಡುಕೊಳ್ಳುವ ಕೆಲಸ ಮಾಡಬೇಕು ತಮಗೆ ಸಿಕ್ಕಿರುವ ಅಧಿಕಾರದಿಂದ ಮಾದರಿ ನಗರಸಭೆಯಾಗಿ ಮಾಡಬೇಕು ಯಾವುದೇ ಕಾರಣಕ್ಕೂ ಅಧಿಕಾರದ ದುರುಪಯೋಗ ವಾಗದಂತೆ ಕ್ರಮ ವಹಿಸಬೇಕು ನಗರಸಭೆಯಲ್ಲಿ ಇವತ್ತಿನ ಪರಿಸ್ಥಿತಿಯನ್ನು ಸರಿಪಡಿಸಬೇಕು ಮುಂದೆ ಹಂತಹಂತವಾಗಿ ನಗರದಲ್ಲಿ ಸಮಸ್ಯೆಗಳನ್ನು ಬಗೆಹರಿಸಬೇಕು ಸಮಸ್ಯೆಗಳ ಪರಿಹಾರಕ್ಕೆ ನಾನು ಎಂಎಲ್ಸಿಗಳು ಮಾರ್ಗದರ್ಶನ ನೀಡಲಾಗುವುದು ಎಂದು ಹೇಳಿದರು.

ನಗರದಲ್ಲಿನ ಹಾಸ್ಟೆಲ್‌ಗಳಿಗೆ ಭೇಟಿ ನೀಡಿ ನೀರಿನ ಸಮಸ್ಯೆ ಬಗೆಹರಿಸಬೇಕು. ಈಗಾಗಲೇ ನಗರಕ್ಕೆ ಯರಗೋಳ್ ನೀರು ಹರಿಯುತ್ತಿದ್ದು, ಎಲ್ಲ ಹಾಸ್ಟೆಲ್‌ಗಳಿಗೂ ಬಾಕಿ ಕೆಲಸಗಳಿಗೆ ವೇಗ ನೀಡಿ ಪ್ರತಿಯೊಂದು ಮನೆಗೂ ನೀರು ಹರಿಸುವ ಕೆಲಸ ಮಾಡಬೇಕು ಅಧ್ಯಕ್ಷರಾಗಿ ಅವರ ಕೆಲಸ ಅವರೇ ಮಾಡಿಕೊಂಡು ಹೋಗುತ್ತಾರೆ ನಗರಸಭೆಯಲ್ಲಿ ಹಣ ನೀಡದೆ ಯಾವುದೇ ಕೆಲಸ ಆಗದಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಎಲ್ಲ ಅವ್ಯವಸ್ಥೆಯನ್ನು ಸರಿಪಡಿಸಿ ಜನರಿಗೆ ಉತ್ತಮ ಸೇವೆ ನೀಡಲು ಕ್ರಮಕೈಗೊಳ್ಳುವುದಾಗಿ ಹೇಳಿದ ಅವರು, ಸದ್ಯಕ್ಕೆ ಪೌರಾಯುಕ್ತರ ಹುದ್ದೆ ಖಾಲಿಯಿದ್ದು, ಒಳ್ಳೆಯವರನ್ನು ನೇಮಕ ಮಾಡಲು ಇಲಾಖೆಯ ಸಚಿವರಿಗೆ ಮನವಿ ಮಾಡಲಾಗಿದೆ. ೨-೩ ದಿನಗಳಲ್ಲಿ ಜನಪರ ಕಾಳಜಿಯುಳ್ಳ ವ್ಯಕ್ತಿಯನ್ನೇ ನೇಮಕ ಮಾಡಲಿದ್ದಾರೆ. ಎಂದರು.

ಈ ಸಂದರ್ಭದಲ್ಲಿ ಎಂಎಲ್ಸಿ ಅನಿಲ್‌ಕುಮಾರ್, ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ವೈ ಶಿವಕುಮಾರ್, ಮುಖಂಡರಾದ ಸೀಸಂದ್ರ ಗೋಪಾಲಗೌಡ, ಮೈಲಾಂಡಹಳ್ಳಿ ಮುರಳಿ, ಕುರಿಗಳ ರಮೇಶ್, ಜಗದೀಶ್, ಚಂದ್ರಮೌಳಿ,ಸೇರಿದಂತೆ ನಗರಸಭೆ ಸದಸ್ಯರು, ಮಾಜಿ ಸದಸ್ಯರು ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತಿತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ವೈಚಾರಿಕ ( ವೈಜ್ಞಾನಿಕ ) ಅಧ್ಯಾತ್ಮ………

ಅಧ್ಯಾತ್ಮ ಮತ್ತು ಸದ್ಗುರು ಜಗ್ಗಿ ವಾಸುದೇವ್........ ಇತ್ತೀಚಿನ ವರ್ಷಗಳಲ್ಲಿ ಹೆಚ್ಚು ಜನಪ್ರಿಯರಾದ ಅಧ್ಯಾತ್ಮ ಗುರು. ಅಧ್ಯಾತ್ಮಿಕ ಚಿಂತಕರಲ್ಲಿ ವಿವಿಧ ರೀತಿಯ…

35 minutes ago

ಐಸಿಸಿ ಟಿ-20 ವಿಶ್ವಕಪ್ ಟೂರ್ನಿ: ಪಾಕಿಸ್ತಾನ ತಂಡವನ್ನು 61 ರನ್ ಗಳಿಂದ ಬಗ್ಗುಬಡಿದ ಭಾರತ: ದೇಶದ ಜನತೆಗೆ ಮಹಾಶಿವರಾತ್ರಿ ಗಿಫ್ಟ್

ಕೊಲಂಬೊದ ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಐಸಿಸಿ ಟಿ-20 ವಿಶ್ವಕಪ್ ಟೂರ್ನಿಯ ಗ್ರೂಪ್ ಹಂತದ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು ಭಾರತ…

1 hour ago

ಫೆ.26ರಂದು ಪ್ರಸಿದ್ದ ಮಧುರೆ ಶನಿಮಹಾತ್ಮಸ್ವಾಮಿ 71ನೇ ಬ್ರಹ್ಮರಥೋತ್ಸವ

ಫೆ.26ರಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರಸಿದ್ದ ಚಿಕ್ಕಮಧುರೆ ಶ್ರೀ ಶನಿಮಹಾತ್ಮಸ್ವಾಮಿಯ 71ನೇ ಬ್ರಹ್ಮರಥೋತ್ಸವವು ವಿಜೃಂಭಣೆಯಿಂದ ನೆರವೇರಲಿದೆ ಎಂದು ದೇವಾಲಯದ ಪ್ರಧಾನ ಅರ್ಚಕ…

11 hours ago

Accident Update: ನೆಲಮಂಗಲದ ಜಿಂದಾಲ್‌ ಸಮೀಪ ಭೀಕರ ಅಪಘಾತ: ಅಪಘಾತದಲ್ಲಿ ದೊಡ್ಡಬಳ್ಳಾಪುರದ ಐವರ ಸಾವು ಕೇಸ್: ಮೃತರಲ್ಲಿ ಮೂವರ ಕಣ್ಣುಗಳ ದಾನ

ನೆಲಮಂಗಲದ ಜಿಂದಾಲ್‌ ಸಮೀಪ ನಡೆದ ಭೀಕರ ಅಪಘಾತದಲ್ಲಿ, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಐವರು ದುರ್ಮರಣಕ್ಕೀಡಾಗಿದ್ದಾರೆ. ಕಳೆದ ರಾತ್ರಿ 11 ಗಂಟೆಯ ಸುಮಾರಿಗೆ…

12 hours ago

ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಫಾರ್ಮ್ ಪಾರ್ಟಿ: ಸಂತಸದಿಂದ ಪ್ರಾಣಿಗಳ ಜೊತೆಯಲ್ಲಿ ಸಮಯ ಕಳೆದ ವಿದ್ಯಾರ್ಥಿಗಳು ಮತ್ತು ಪೋಷಕರು

ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಶನಿವಾರದಂದು ನಡೆದ ಸೈನ್ಸ್ ಫೆಸ್ಟ್ ನಂತರ ಮಕ್ಕಳಿಗೆ ಮತ್ತು ಪೋಷಕರಿಗೆ ಮನರಂಜನೆ ಉಣಬಡಿಸುವ ಪ್ರಯುಕ್ತ ಮಧ್ಯಾಹ್ನ…

13 hours ago

Accident Update: ಹೊಸಕೋಟೆ ಸರಣಿ ಅಪಘಾತ ಪ್ರಕರಣ ಮಾಸುವ ಮುನ್ನವೇ, ನೆಲಮಂಗಲದ ಜಿಂದಾಲ್‌ ಸಮೀಪ ಮತ್ತೊಂದು ಭೀಕರ ಅಪಘಾತ: ಅಪಘಾತದಲ್ಲಿ ದೊಡ್ಡಬಳ್ಳಾಪುರದ ಐವರ ಸಾವು: ಮೃತರ ವಿವರ ಇಲ್ಲಿದೆ ನೋಡಿ…

ನೆಲಮಂಗಲದ ಜಿಂದಾಲ್‌ ಸಮೀಪ ನಡೆದ ಭೀಕರ ಅಪಘಾತದಲ್ಲಿ, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಐವರು ದುರ್ಮರಣಕ್ಕೀಡಾಗಿದ್ದಾರೆ. ಕಳೆದ ರಾತ್ರಿ 12 ಗಂಟೆಯ ಸುಮಾರಿಗೆ…

20 hours ago