Categories: ಕೋಲಾರ

ನಗರದ ಅಭಿವೃದ್ಧಿಗೆ ಸಹಕಾರ ಮತ್ತು ಮಾರ್ಗದರ್ಶನದ ಭರವಸೆ ನೀಡಿದ ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ನಗರದ ಅಭಿವೃದ್ಧಿಗೆ ನೂತನ ಅಧ್ಯಕ್ಷರಿಗೆ ಉಪಾಧ್ಯಕ್ಷರಿಗೆ ಎಲ್ಲಾ ರೀತಿಯ ಸಹಕಾರ ಮತ್ತು ಮಾರ್ಗದರ್ಶನ ಮಾಡಲಿದ್ದು, ಎಲ್ಲಾ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಾರ್ವಜನಿಕ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಮಾದರಿ ನಗರಸಭೆ ಯಾಗಿಸುವಂತೆ ಶಾಸಕ ಕೊತ್ತೂರು ಜಿ ಮಂಜುನಾಥ್ ತಿಳಿಸಿದರು

ಬುಧವಾರ ಕೋಲಾರ ನಗರಸಭೆಯಲ್ಲಿ ನೂತನ ಅಧ್ಯಕ್ಷೆ ಲಕ್ಷ್ಮೀದೇವಮ್ಮ ಹಾಗೂ ಉಪಾಧ್ಯಕ್ಷೆ ಸಂಗೀತಾ ಅವರ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಕೋಲಾರ ನಗರಸಭೆಯ ಆಡಳಿತ ಮಂಡಳಿಯ ಚುಕ್ಕಾಣಿಯನ್ನು ಹೆಣ್ಣು ಮಕ್ಕಳೇ ವಹಿಸಿದ್ದಾರೆ ಮನೆಯ ಜವಾಬ್ದಾರಿಯನ್ನು ವಹಿಸಿ ಹೇಗೆ ನಿಭಾಯಿಸುತ್ತಾರೆ ಅದೇ ರೀತಿ ಸಹ ನಗರಸಭೆಯನ್ನು ಅಭಿವೃದ್ದಿಯ ಕಡೆಗೆ ತರಲಿದ್ದಾರೆ ನಗರಸಭೆಯಲ್ಲಿನ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸವನ್ನು ನೂತನ ಅಧ್ಯಕ್ಷರು ಉಪಾಧ್ಯಕ್ಷರು ಮಾಡಬೇಕಾಗಿದೆ ಎಂದರು.

ನಗರಸಭೆ ನೂತನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಕಛೇರಿಗೆ ಮಾತ್ರ ಸೀಮಿತವಾಗದೇ ನಗರವನ್ನು ಸಂಚರಿಸಿ ಸಮಸ್ಯೆಗಳನ್ನು ಪಟ್ಟಿ ಮಾಡಿ ಅಧಿಕಾರಿಗಳಿಂದ ಪರಿಹಾರವನ್ನು ಕಂಡುಕೊಳ್ಳುವ ಕೆಲಸ ಮಾಡಬೇಕು ತಮಗೆ ಸಿಕ್ಕಿರುವ ಅಧಿಕಾರದಿಂದ ಮಾದರಿ ನಗರಸಭೆಯಾಗಿ ಮಾಡಬೇಕು ಯಾವುದೇ ಕಾರಣಕ್ಕೂ ಅಧಿಕಾರದ ದುರುಪಯೋಗ ವಾಗದಂತೆ ಕ್ರಮ ವಹಿಸಬೇಕು ನಗರಸಭೆಯಲ್ಲಿ ಇವತ್ತಿನ ಪರಿಸ್ಥಿತಿಯನ್ನು ಸರಿಪಡಿಸಬೇಕು ಮುಂದೆ ಹಂತಹಂತವಾಗಿ ನಗರದಲ್ಲಿ ಸಮಸ್ಯೆಗಳನ್ನು ಬಗೆಹರಿಸಬೇಕು ಸಮಸ್ಯೆಗಳ ಪರಿಹಾರಕ್ಕೆ ನಾನು ಎಂಎಲ್ಸಿಗಳು ಮಾರ್ಗದರ್ಶನ ನೀಡಲಾಗುವುದು ಎಂದು ಹೇಳಿದರು.

ನಗರದಲ್ಲಿನ ಹಾಸ್ಟೆಲ್‌ಗಳಿಗೆ ಭೇಟಿ ನೀಡಿ ನೀರಿನ ಸಮಸ್ಯೆ ಬಗೆಹರಿಸಬೇಕು. ಈಗಾಗಲೇ ನಗರಕ್ಕೆ ಯರಗೋಳ್ ನೀರು ಹರಿಯುತ್ತಿದ್ದು, ಎಲ್ಲ ಹಾಸ್ಟೆಲ್‌ಗಳಿಗೂ ಬಾಕಿ ಕೆಲಸಗಳಿಗೆ ವೇಗ ನೀಡಿ ಪ್ರತಿಯೊಂದು ಮನೆಗೂ ನೀರು ಹರಿಸುವ ಕೆಲಸ ಮಾಡಬೇಕು ಅಧ್ಯಕ್ಷರಾಗಿ ಅವರ ಕೆಲಸ ಅವರೇ ಮಾಡಿಕೊಂಡು ಹೋಗುತ್ತಾರೆ ನಗರಸಭೆಯಲ್ಲಿ ಹಣ ನೀಡದೆ ಯಾವುದೇ ಕೆಲಸ ಆಗದಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಎಲ್ಲ ಅವ್ಯವಸ್ಥೆಯನ್ನು ಸರಿಪಡಿಸಿ ಜನರಿಗೆ ಉತ್ತಮ ಸೇವೆ ನೀಡಲು ಕ್ರಮಕೈಗೊಳ್ಳುವುದಾಗಿ ಹೇಳಿದ ಅವರು, ಸದ್ಯಕ್ಕೆ ಪೌರಾಯುಕ್ತರ ಹುದ್ದೆ ಖಾಲಿಯಿದ್ದು, ಒಳ್ಳೆಯವರನ್ನು ನೇಮಕ ಮಾಡಲು ಇಲಾಖೆಯ ಸಚಿವರಿಗೆ ಮನವಿ ಮಾಡಲಾಗಿದೆ. ೨-೩ ದಿನಗಳಲ್ಲಿ ಜನಪರ ಕಾಳಜಿಯುಳ್ಳ ವ್ಯಕ್ತಿಯನ್ನೇ ನೇಮಕ ಮಾಡಲಿದ್ದಾರೆ. ಎಂದರು.

ಈ ಸಂದರ್ಭದಲ್ಲಿ ಎಂಎಲ್ಸಿ ಅನಿಲ್‌ಕುಮಾರ್, ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ವೈ ಶಿವಕುಮಾರ್, ಮುಖಂಡರಾದ ಸೀಸಂದ್ರ ಗೋಪಾಲಗೌಡ, ಮೈಲಾಂಡಹಳ್ಳಿ ಮುರಳಿ, ಕುರಿಗಳ ರಮೇಶ್, ಜಗದೀಶ್, ಚಂದ್ರಮೌಳಿ,ಸೇರಿದಂತೆ ನಗರಸಭೆ ಸದಸ್ಯರು, ಮಾಜಿ ಸದಸ್ಯರು ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತಿತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಕೃಷಿ ಹೊಂಡಕ್ಕೆ ಬಿದ್ದು ವ್ಯಕ್ತಿ ಸಾವು

ಕೃಷಿ ಹೊಂಡಕ್ಕೆ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3 ಗಂಟೆಯಲಿ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ…

3 minutes ago

ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

2025-26ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ…

2 hours ago

ತೋಟಗಾರಿಕೆ ಬೆಳೆಗಳಿಗೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ತೋಟಗಾರಿಕೆ ಇಲಾಖೆ ವತಿಯಿಂದ 2025-26ನೇ ಸಾಲಿನ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ತೋಟಗಾರಿಕೆ…

2 hours ago

ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳ ವಿವೇಚನೆ ಮತ್ತು ಜವಾಬ್ದಾರಿ‌……..

ರಾಜಕೀಯ ಪಕ್ಷಗಳ ಭಿನ್ನಮತದ ಸುತ್ತ, ಅಧಿಕಾರ ಕುರ್ಚಿಯ ಹಾವು ಏಣಿ ಆಟದ ಸುತ್ತ, ಸ್ವಾಮೀಜಿಗಳ ಪೀಠದ ಸುತ್ತ, ಧರ್ಮಸ್ಥಳದ ನಿಗೂಢ…

11 hours ago

ನಾಳೆ (ಜು.29) ರಂದು ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬ: ಭಕ್ತರಿಗೆ ವಿಶೇಷ ಆಹ್ವಾನ: ವಿಶೇಷ ಪೂಜೆ, ಭಕ್ತರಿಗೆ ಭೋಜನೆ ವ್ಯವಸ್ಥೆ

ನಾಳೆ (ಜು.29) ರಂದು ದೊಡ್ಡಬಳ್ಳಾಪುರ ತಾಲೂಕಿನ ಪವಿತ್ರ ಹಾಗೂ ಪುಣ್ಯ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬವನ್ನು…

23 hours ago

“ಉತ್ತರ ಕರ್ನಾಟಕದ ಗ್ರಾಮೀಣ ನಾಗರ ಪಂಚಮಿ: ಹೆಣ್ಮಕ್ಕಳ ಜೋಕಾಲಿ ಸಂಭ್ರಮ”

ಭಾರತೀಯರು ಹಬ್ಬ-ಹರಿದಿನಗಳ ಪ್ರಿಯರು ಒಂದೋದು ಹಬ್ಬಕ್ಕೆ ತನ್ನದೇಯಾದ ವೈಶಿಷ್ಟತೆಯನ್ನು ನೀಡುತ್ತಾ, ಭಕ್ತಿ-ಭಾವದಿಂದ ನೂರಾರು ತಲೆಮಾರುಗಳಿಂದ ಆಚರಿಸಿಕೊಂಡು ಬರುತ್ತಿದ್ದಾರೆ. ಅದರಲ್ಲಿ ಉತ್ತರ…

23 hours ago