Categories: ಕೋಲಾರ

ನಗರದ ಅಭಿವೃದ್ಧಿಗೆ ಸಹಕಾರ ಮತ್ತು ಮಾರ್ಗದರ್ಶನದ ಭರವಸೆ ನೀಡಿದ ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ನಗರದ ಅಭಿವೃದ್ಧಿಗೆ ನೂತನ ಅಧ್ಯಕ್ಷರಿಗೆ ಉಪಾಧ್ಯಕ್ಷರಿಗೆ ಎಲ್ಲಾ ರೀತಿಯ ಸಹಕಾರ ಮತ್ತು ಮಾರ್ಗದರ್ಶನ ಮಾಡಲಿದ್ದು, ಎಲ್ಲಾ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಾರ್ವಜನಿಕ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಮಾದರಿ ನಗರಸಭೆ ಯಾಗಿಸುವಂತೆ ಶಾಸಕ ಕೊತ್ತೂರು ಜಿ ಮಂಜುನಾಥ್ ತಿಳಿಸಿದರು

ಬುಧವಾರ ಕೋಲಾರ ನಗರಸಭೆಯಲ್ಲಿ ನೂತನ ಅಧ್ಯಕ್ಷೆ ಲಕ್ಷ್ಮೀದೇವಮ್ಮ ಹಾಗೂ ಉಪಾಧ್ಯಕ್ಷೆ ಸಂಗೀತಾ ಅವರ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಕೋಲಾರ ನಗರಸಭೆಯ ಆಡಳಿತ ಮಂಡಳಿಯ ಚುಕ್ಕಾಣಿಯನ್ನು ಹೆಣ್ಣು ಮಕ್ಕಳೇ ವಹಿಸಿದ್ದಾರೆ ಮನೆಯ ಜವಾಬ್ದಾರಿಯನ್ನು ವಹಿಸಿ ಹೇಗೆ ನಿಭಾಯಿಸುತ್ತಾರೆ ಅದೇ ರೀತಿ ಸಹ ನಗರಸಭೆಯನ್ನು ಅಭಿವೃದ್ದಿಯ ಕಡೆಗೆ ತರಲಿದ್ದಾರೆ ನಗರಸಭೆಯಲ್ಲಿನ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸವನ್ನು ನೂತನ ಅಧ್ಯಕ್ಷರು ಉಪಾಧ್ಯಕ್ಷರು ಮಾಡಬೇಕಾಗಿದೆ ಎಂದರು.

ನಗರಸಭೆ ನೂತನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಕಛೇರಿಗೆ ಮಾತ್ರ ಸೀಮಿತವಾಗದೇ ನಗರವನ್ನು ಸಂಚರಿಸಿ ಸಮಸ್ಯೆಗಳನ್ನು ಪಟ್ಟಿ ಮಾಡಿ ಅಧಿಕಾರಿಗಳಿಂದ ಪರಿಹಾರವನ್ನು ಕಂಡುಕೊಳ್ಳುವ ಕೆಲಸ ಮಾಡಬೇಕು ತಮಗೆ ಸಿಕ್ಕಿರುವ ಅಧಿಕಾರದಿಂದ ಮಾದರಿ ನಗರಸಭೆಯಾಗಿ ಮಾಡಬೇಕು ಯಾವುದೇ ಕಾರಣಕ್ಕೂ ಅಧಿಕಾರದ ದುರುಪಯೋಗ ವಾಗದಂತೆ ಕ್ರಮ ವಹಿಸಬೇಕು ನಗರಸಭೆಯಲ್ಲಿ ಇವತ್ತಿನ ಪರಿಸ್ಥಿತಿಯನ್ನು ಸರಿಪಡಿಸಬೇಕು ಮುಂದೆ ಹಂತಹಂತವಾಗಿ ನಗರದಲ್ಲಿ ಸಮಸ್ಯೆಗಳನ್ನು ಬಗೆಹರಿಸಬೇಕು ಸಮಸ್ಯೆಗಳ ಪರಿಹಾರಕ್ಕೆ ನಾನು ಎಂಎಲ್ಸಿಗಳು ಮಾರ್ಗದರ್ಶನ ನೀಡಲಾಗುವುದು ಎಂದು ಹೇಳಿದರು.

ನಗರದಲ್ಲಿನ ಹಾಸ್ಟೆಲ್‌ಗಳಿಗೆ ಭೇಟಿ ನೀಡಿ ನೀರಿನ ಸಮಸ್ಯೆ ಬಗೆಹರಿಸಬೇಕು. ಈಗಾಗಲೇ ನಗರಕ್ಕೆ ಯರಗೋಳ್ ನೀರು ಹರಿಯುತ್ತಿದ್ದು, ಎಲ್ಲ ಹಾಸ್ಟೆಲ್‌ಗಳಿಗೂ ಬಾಕಿ ಕೆಲಸಗಳಿಗೆ ವೇಗ ನೀಡಿ ಪ್ರತಿಯೊಂದು ಮನೆಗೂ ನೀರು ಹರಿಸುವ ಕೆಲಸ ಮಾಡಬೇಕು ಅಧ್ಯಕ್ಷರಾಗಿ ಅವರ ಕೆಲಸ ಅವರೇ ಮಾಡಿಕೊಂಡು ಹೋಗುತ್ತಾರೆ ನಗರಸಭೆಯಲ್ಲಿ ಹಣ ನೀಡದೆ ಯಾವುದೇ ಕೆಲಸ ಆಗದಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಎಲ್ಲ ಅವ್ಯವಸ್ಥೆಯನ್ನು ಸರಿಪಡಿಸಿ ಜನರಿಗೆ ಉತ್ತಮ ಸೇವೆ ನೀಡಲು ಕ್ರಮಕೈಗೊಳ್ಳುವುದಾಗಿ ಹೇಳಿದ ಅವರು, ಸದ್ಯಕ್ಕೆ ಪೌರಾಯುಕ್ತರ ಹುದ್ದೆ ಖಾಲಿಯಿದ್ದು, ಒಳ್ಳೆಯವರನ್ನು ನೇಮಕ ಮಾಡಲು ಇಲಾಖೆಯ ಸಚಿವರಿಗೆ ಮನವಿ ಮಾಡಲಾಗಿದೆ. ೨-೩ ದಿನಗಳಲ್ಲಿ ಜನಪರ ಕಾಳಜಿಯುಳ್ಳ ವ್ಯಕ್ತಿಯನ್ನೇ ನೇಮಕ ಮಾಡಲಿದ್ದಾರೆ. ಎಂದರು.

ಈ ಸಂದರ್ಭದಲ್ಲಿ ಎಂಎಲ್ಸಿ ಅನಿಲ್‌ಕುಮಾರ್, ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ವೈ ಶಿವಕುಮಾರ್, ಮುಖಂಡರಾದ ಸೀಸಂದ್ರ ಗೋಪಾಲಗೌಡ, ಮೈಲಾಂಡಹಳ್ಳಿ ಮುರಳಿ, ಕುರಿಗಳ ರಮೇಶ್, ಜಗದೀಶ್, ಚಂದ್ರಮೌಳಿ,ಸೇರಿದಂತೆ ನಗರಸಭೆ ಸದಸ್ಯರು, ಮಾಜಿ ಸದಸ್ಯರು ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತಿತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಬರದ ನಡುವೆಯೂ ರಾಗಿ ರೈತರಿಗೆ ಆಸರೆ: ಫಸಲ್ ಬಿಮಾ ಪ್ರೀಮಿಯಂ ಭರಿಸುವುದಾಗಿ ಶಾಸಕ ಧೀರಜ್ ಮುನಿರಾಜ್ ಘೋಷಣೆ

ದೊಡ್ಡಬಳ್ಳಾಪುರ: ಸಮರ್ಪಕ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ಎದುರಿಸುತ್ತಿರುವ ದೊಡ್ಡಬಳ್ಳಾಪುರ ಕ್ಷೇತ್ರದ ರೈತರಿಗೆ ನೆರವಾಗುವ ಉದ್ದೇಶದಿಂದ, ಕ್ಷೇತ್ರದ ಪ್ರಮುಖ ಬೆಳೆಯಾದ…

35 minutes ago

ಕೋಳಿ ವಿಚಾರದ ಜಗಳಕ್ಕೆ ಹೊಸ ಟ್ವಿಸ್ಟ್: ಎರಡೂ ಕಡೆಯಿಂದ ಹಲ್ಲೆ ಆರೋಪ, ಆಸ್ಪತ್ರೆಯಲ್ಲೂ ಗಲಾಟೆ

ಗೌರಿಬಿದನೂರು: ಕೋಳಿ ವಿಚಾರವಾಗಿ ಆರಂಭವಾದ ನೆರೆಹೊರೆಯವರ ನಡುವಿನ ಜಗಳ ಗಂಭೀರ ಸ್ವರೂಪ ಪಡೆದು, ಸಾರ್ವಜನಿಕ ಆಸ್ಪತ್ರೆಯೊಳಗೂ ಗಲಾಟೆ ನಡೆದ ಘಟನೆ…

2 hours ago

” ಕ್ಷಮೆ” ಎಂಬ ಭಾವದ ಸುತ್ತ……

ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…

10 hours ago

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

20 hours ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

21 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

1 day ago