Categories: ಕೋಲಾರ

ನಗರದ ಅಭಿವೃದ್ಧಿಗೆ ಸಹಕಾರ ಮತ್ತು ಮಾರ್ಗದರ್ಶನದ ಭರವಸೆ ನೀಡಿದ ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ನಗರದ ಅಭಿವೃದ್ಧಿಗೆ ನೂತನ ಅಧ್ಯಕ್ಷರಿಗೆ ಉಪಾಧ್ಯಕ್ಷರಿಗೆ ಎಲ್ಲಾ ರೀತಿಯ ಸಹಕಾರ ಮತ್ತು ಮಾರ್ಗದರ್ಶನ ಮಾಡಲಿದ್ದು, ಎಲ್ಲಾ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಾರ್ವಜನಿಕ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಮಾದರಿ ನಗರಸಭೆ ಯಾಗಿಸುವಂತೆ ಶಾಸಕ ಕೊತ್ತೂರು ಜಿ ಮಂಜುನಾಥ್ ತಿಳಿಸಿದರು

ಬುಧವಾರ ಕೋಲಾರ ನಗರಸಭೆಯಲ್ಲಿ ನೂತನ ಅಧ್ಯಕ್ಷೆ ಲಕ್ಷ್ಮೀದೇವಮ್ಮ ಹಾಗೂ ಉಪಾಧ್ಯಕ್ಷೆ ಸಂಗೀತಾ ಅವರ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಕೋಲಾರ ನಗರಸಭೆಯ ಆಡಳಿತ ಮಂಡಳಿಯ ಚುಕ್ಕಾಣಿಯನ್ನು ಹೆಣ್ಣು ಮಕ್ಕಳೇ ವಹಿಸಿದ್ದಾರೆ ಮನೆಯ ಜವಾಬ್ದಾರಿಯನ್ನು ವಹಿಸಿ ಹೇಗೆ ನಿಭಾಯಿಸುತ್ತಾರೆ ಅದೇ ರೀತಿ ಸಹ ನಗರಸಭೆಯನ್ನು ಅಭಿವೃದ್ದಿಯ ಕಡೆಗೆ ತರಲಿದ್ದಾರೆ ನಗರಸಭೆಯಲ್ಲಿನ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸವನ್ನು ನೂತನ ಅಧ್ಯಕ್ಷರು ಉಪಾಧ್ಯಕ್ಷರು ಮಾಡಬೇಕಾಗಿದೆ ಎಂದರು.

ನಗರಸಭೆ ನೂತನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಕಛೇರಿಗೆ ಮಾತ್ರ ಸೀಮಿತವಾಗದೇ ನಗರವನ್ನು ಸಂಚರಿಸಿ ಸಮಸ್ಯೆಗಳನ್ನು ಪಟ್ಟಿ ಮಾಡಿ ಅಧಿಕಾರಿಗಳಿಂದ ಪರಿಹಾರವನ್ನು ಕಂಡುಕೊಳ್ಳುವ ಕೆಲಸ ಮಾಡಬೇಕು ತಮಗೆ ಸಿಕ್ಕಿರುವ ಅಧಿಕಾರದಿಂದ ಮಾದರಿ ನಗರಸಭೆಯಾಗಿ ಮಾಡಬೇಕು ಯಾವುದೇ ಕಾರಣಕ್ಕೂ ಅಧಿಕಾರದ ದುರುಪಯೋಗ ವಾಗದಂತೆ ಕ್ರಮ ವಹಿಸಬೇಕು ನಗರಸಭೆಯಲ್ಲಿ ಇವತ್ತಿನ ಪರಿಸ್ಥಿತಿಯನ್ನು ಸರಿಪಡಿಸಬೇಕು ಮುಂದೆ ಹಂತಹಂತವಾಗಿ ನಗರದಲ್ಲಿ ಸಮಸ್ಯೆಗಳನ್ನು ಬಗೆಹರಿಸಬೇಕು ಸಮಸ್ಯೆಗಳ ಪರಿಹಾರಕ್ಕೆ ನಾನು ಎಂಎಲ್ಸಿಗಳು ಮಾರ್ಗದರ್ಶನ ನೀಡಲಾಗುವುದು ಎಂದು ಹೇಳಿದರು.

ನಗರದಲ್ಲಿನ ಹಾಸ್ಟೆಲ್‌ಗಳಿಗೆ ಭೇಟಿ ನೀಡಿ ನೀರಿನ ಸಮಸ್ಯೆ ಬಗೆಹರಿಸಬೇಕು. ಈಗಾಗಲೇ ನಗರಕ್ಕೆ ಯರಗೋಳ್ ನೀರು ಹರಿಯುತ್ತಿದ್ದು, ಎಲ್ಲ ಹಾಸ್ಟೆಲ್‌ಗಳಿಗೂ ಬಾಕಿ ಕೆಲಸಗಳಿಗೆ ವೇಗ ನೀಡಿ ಪ್ರತಿಯೊಂದು ಮನೆಗೂ ನೀರು ಹರಿಸುವ ಕೆಲಸ ಮಾಡಬೇಕು ಅಧ್ಯಕ್ಷರಾಗಿ ಅವರ ಕೆಲಸ ಅವರೇ ಮಾಡಿಕೊಂಡು ಹೋಗುತ್ತಾರೆ ನಗರಸಭೆಯಲ್ಲಿ ಹಣ ನೀಡದೆ ಯಾವುದೇ ಕೆಲಸ ಆಗದಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಎಲ್ಲ ಅವ್ಯವಸ್ಥೆಯನ್ನು ಸರಿಪಡಿಸಿ ಜನರಿಗೆ ಉತ್ತಮ ಸೇವೆ ನೀಡಲು ಕ್ರಮಕೈಗೊಳ್ಳುವುದಾಗಿ ಹೇಳಿದ ಅವರು, ಸದ್ಯಕ್ಕೆ ಪೌರಾಯುಕ್ತರ ಹುದ್ದೆ ಖಾಲಿಯಿದ್ದು, ಒಳ್ಳೆಯವರನ್ನು ನೇಮಕ ಮಾಡಲು ಇಲಾಖೆಯ ಸಚಿವರಿಗೆ ಮನವಿ ಮಾಡಲಾಗಿದೆ. ೨-೩ ದಿನಗಳಲ್ಲಿ ಜನಪರ ಕಾಳಜಿಯುಳ್ಳ ವ್ಯಕ್ತಿಯನ್ನೇ ನೇಮಕ ಮಾಡಲಿದ್ದಾರೆ. ಎಂದರು.

ಈ ಸಂದರ್ಭದಲ್ಲಿ ಎಂಎಲ್ಸಿ ಅನಿಲ್‌ಕುಮಾರ್, ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ವೈ ಶಿವಕುಮಾರ್, ಮುಖಂಡರಾದ ಸೀಸಂದ್ರ ಗೋಪಾಲಗೌಡ, ಮೈಲಾಂಡಹಳ್ಳಿ ಮುರಳಿ, ಕುರಿಗಳ ರಮೇಶ್, ಜಗದೀಶ್, ಚಂದ್ರಮೌಳಿ,ಸೇರಿದಂತೆ ನಗರಸಭೆ ಸದಸ್ಯರು, ಮಾಜಿ ಸದಸ್ಯರು ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತಿತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

KSRTC ಬಸ್-ಕಂಟೇನರ್ ಲಾರಿ ನಡುವೆ ಅಪಘಾತ; ಕೆಲವರಿಗೆ ಗಾಯ

ಹೊಸಕೋಟೆ: ಕೋಲಾರ-ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ KSRTC ಬಸ್ ಹಾಗೂ ಕಂಟೇನರ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ಹೊಸಕೋಟೆ ಸಮೀಪದ…

4 hours ago

ರಾಜ್ಯಸಭೆ, ಪರಿಷತ್ ಚುನಾವಣೆ: ಬಿಜೆಪಿ ಅಚ್ಚರಿ ನಿರ್ಧಾರ, ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ನಿರಾಕರಣೆ

ಬೆಂಗಳೂರು: 2026ರ ರಾಜ್ಯಸಭೆ ಹಾಗೂ ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಪ್ರಕಟಿಸಿದ್ದು, ಕರ್ನಾಟಕದಿಂದ ರಾಜ್ಯಸಭೆಗೆ…

7 hours ago

ಅಳಬೇಡಿ ಸ್ವಾಮಿ ಅಳಬೇಡಿ, ದಯವಿಟ್ಟು ಅಳಬೇಡಿ, ಸ್ವಲ್ಪ ನಕ್ಕು ಬಿಡಿ…..

ನಾನು ವಿದ್ಯಾವಂತನಾಗಿರಲಿಲ್ಲ, ಅದರಿಂದಾಗಿ ಯಶಸ್ವಿಯಾಗಲಿಲ್ಲ. ನಾನು ಬುದ್ದಿವಂತನಾಗಿರಲಿಲ್ಲ, ಅದರಿಂದಾಗಿ ಜನಪ್ರಿಯನಾಗಲಿಲ್ಲ. ನಾನು ಪ್ರತಿಭಾವಂತನಾಗಿರಲಿಲ್ಲ, ಅದರಿಂದಾಗಿ ಪ್ರಖ್ಯಾತನಾಗಲಿಲ್ಲ. ನಾನು ಶ್ರೀಮಂತನಾಗಿರಲಿಲ್ಲ, ಅದರಿಂದಾಗಿ…

10 hours ago

ದೊಡ್ಡಬಳ್ಳಾಪುರ ಯೋಗಾ ಪ್ರತಿಭೆ, ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಪುರಸ್ಕೃತೆ ಜಾಹ್ನವಿ ಎಂ.ಆರ್ ಗೆ ಸನ್ಮಾನ

ಕರ್ನಾಟಕ ಸ್ಟೇಟ್ ಅಮೆಚೂರು ಯೋಗ ಸ್ಪೋರ್ಟ್ಸ್ ಅಸೋಸಿಯೇಷನ್ ವತಿಯಿಂದ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಜೂ.6, 7ರಂದು ನಡೆದ ರಾಜ್ಯಮಟ್ಟದ…

22 hours ago

ತಡರಾತ್ರಿ ರೌಡಿ ಶೀಟರ್‌ ಬರ್ಬರ ಹತ್ಯೆ: ಸೂಲಿಬೆಲೆಯಲ್ಲಿ ಭೀಕರ ಘಟನೆ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಗ್ರಾಮದಲ್ಲಿ ತಡರಾತ್ರಿ ರೌಡಿ ಶೀಟರ್‌ನನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಬರ್ಬರವಾಗಿ ಹತ್ಯೆ…

1 day ago

ಕಾಕ್ರೋಚ್ ಜನತಾ ಪಾರ್ಟಿ……

ಕಾಕ್ರೋಚ್ ಜನತಾ ಪಾರ್ಟಿ...... ಸಾಮಾಜಿಕ ಜಾಲತಾಣದ ಹೊಸ ರಾಜಕೀಯ ಚಳುವಳಿ ಎಂದು ಕಳೆದ ಐದಾರು ವಾರಗಳಿಂದ ಇಡೀ ದೇಶದಾದ್ಯಂತ ಬಹುದೊಡ್ಡ…

1 day ago