Categories: ಕೋಲಾರ

ನಗರದ ಅಭಿವೃದ್ಧಿಗೆ ಸಹಕಾರ ಮತ್ತು ಮಾರ್ಗದರ್ಶನದ ಭರವಸೆ ನೀಡಿದ ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ನಗರದ ಅಭಿವೃದ್ಧಿಗೆ ನೂತನ ಅಧ್ಯಕ್ಷರಿಗೆ ಉಪಾಧ್ಯಕ್ಷರಿಗೆ ಎಲ್ಲಾ ರೀತಿಯ ಸಹಕಾರ ಮತ್ತು ಮಾರ್ಗದರ್ಶನ ಮಾಡಲಿದ್ದು, ಎಲ್ಲಾ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಾರ್ವಜನಿಕ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಮಾದರಿ ನಗರಸಭೆ ಯಾಗಿಸುವಂತೆ ಶಾಸಕ ಕೊತ್ತೂರು ಜಿ ಮಂಜುನಾಥ್ ತಿಳಿಸಿದರು

ಬುಧವಾರ ಕೋಲಾರ ನಗರಸಭೆಯಲ್ಲಿ ನೂತನ ಅಧ್ಯಕ್ಷೆ ಲಕ್ಷ್ಮೀದೇವಮ್ಮ ಹಾಗೂ ಉಪಾಧ್ಯಕ್ಷೆ ಸಂಗೀತಾ ಅವರ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಕೋಲಾರ ನಗರಸಭೆಯ ಆಡಳಿತ ಮಂಡಳಿಯ ಚುಕ್ಕಾಣಿಯನ್ನು ಹೆಣ್ಣು ಮಕ್ಕಳೇ ವಹಿಸಿದ್ದಾರೆ ಮನೆಯ ಜವಾಬ್ದಾರಿಯನ್ನು ವಹಿಸಿ ಹೇಗೆ ನಿಭಾಯಿಸುತ್ತಾರೆ ಅದೇ ರೀತಿ ಸಹ ನಗರಸಭೆಯನ್ನು ಅಭಿವೃದ್ದಿಯ ಕಡೆಗೆ ತರಲಿದ್ದಾರೆ ನಗರಸಭೆಯಲ್ಲಿನ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸವನ್ನು ನೂತನ ಅಧ್ಯಕ್ಷರು ಉಪಾಧ್ಯಕ್ಷರು ಮಾಡಬೇಕಾಗಿದೆ ಎಂದರು.

ನಗರಸಭೆ ನೂತನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಕಛೇರಿಗೆ ಮಾತ್ರ ಸೀಮಿತವಾಗದೇ ನಗರವನ್ನು ಸಂಚರಿಸಿ ಸಮಸ್ಯೆಗಳನ್ನು ಪಟ್ಟಿ ಮಾಡಿ ಅಧಿಕಾರಿಗಳಿಂದ ಪರಿಹಾರವನ್ನು ಕಂಡುಕೊಳ್ಳುವ ಕೆಲಸ ಮಾಡಬೇಕು ತಮಗೆ ಸಿಕ್ಕಿರುವ ಅಧಿಕಾರದಿಂದ ಮಾದರಿ ನಗರಸಭೆಯಾಗಿ ಮಾಡಬೇಕು ಯಾವುದೇ ಕಾರಣಕ್ಕೂ ಅಧಿಕಾರದ ದುರುಪಯೋಗ ವಾಗದಂತೆ ಕ್ರಮ ವಹಿಸಬೇಕು ನಗರಸಭೆಯಲ್ಲಿ ಇವತ್ತಿನ ಪರಿಸ್ಥಿತಿಯನ್ನು ಸರಿಪಡಿಸಬೇಕು ಮುಂದೆ ಹಂತಹಂತವಾಗಿ ನಗರದಲ್ಲಿ ಸಮಸ್ಯೆಗಳನ್ನು ಬಗೆಹರಿಸಬೇಕು ಸಮಸ್ಯೆಗಳ ಪರಿಹಾರಕ್ಕೆ ನಾನು ಎಂಎಲ್ಸಿಗಳು ಮಾರ್ಗದರ್ಶನ ನೀಡಲಾಗುವುದು ಎಂದು ಹೇಳಿದರು.

ನಗರದಲ್ಲಿನ ಹಾಸ್ಟೆಲ್‌ಗಳಿಗೆ ಭೇಟಿ ನೀಡಿ ನೀರಿನ ಸಮಸ್ಯೆ ಬಗೆಹರಿಸಬೇಕು. ಈಗಾಗಲೇ ನಗರಕ್ಕೆ ಯರಗೋಳ್ ನೀರು ಹರಿಯುತ್ತಿದ್ದು, ಎಲ್ಲ ಹಾಸ್ಟೆಲ್‌ಗಳಿಗೂ ಬಾಕಿ ಕೆಲಸಗಳಿಗೆ ವೇಗ ನೀಡಿ ಪ್ರತಿಯೊಂದು ಮನೆಗೂ ನೀರು ಹರಿಸುವ ಕೆಲಸ ಮಾಡಬೇಕು ಅಧ್ಯಕ್ಷರಾಗಿ ಅವರ ಕೆಲಸ ಅವರೇ ಮಾಡಿಕೊಂಡು ಹೋಗುತ್ತಾರೆ ನಗರಸಭೆಯಲ್ಲಿ ಹಣ ನೀಡದೆ ಯಾವುದೇ ಕೆಲಸ ಆಗದಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಎಲ್ಲ ಅವ್ಯವಸ್ಥೆಯನ್ನು ಸರಿಪಡಿಸಿ ಜನರಿಗೆ ಉತ್ತಮ ಸೇವೆ ನೀಡಲು ಕ್ರಮಕೈಗೊಳ್ಳುವುದಾಗಿ ಹೇಳಿದ ಅವರು, ಸದ್ಯಕ್ಕೆ ಪೌರಾಯುಕ್ತರ ಹುದ್ದೆ ಖಾಲಿಯಿದ್ದು, ಒಳ್ಳೆಯವರನ್ನು ನೇಮಕ ಮಾಡಲು ಇಲಾಖೆಯ ಸಚಿವರಿಗೆ ಮನವಿ ಮಾಡಲಾಗಿದೆ. ೨-೩ ದಿನಗಳಲ್ಲಿ ಜನಪರ ಕಾಳಜಿಯುಳ್ಳ ವ್ಯಕ್ತಿಯನ್ನೇ ನೇಮಕ ಮಾಡಲಿದ್ದಾರೆ. ಎಂದರು.

ಈ ಸಂದರ್ಭದಲ್ಲಿ ಎಂಎಲ್ಸಿ ಅನಿಲ್‌ಕುಮಾರ್, ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ವೈ ಶಿವಕುಮಾರ್, ಮುಖಂಡರಾದ ಸೀಸಂದ್ರ ಗೋಪಾಲಗೌಡ, ಮೈಲಾಂಡಹಳ್ಳಿ ಮುರಳಿ, ಕುರಿಗಳ ರಮೇಶ್, ಜಗದೀಶ್, ಚಂದ್ರಮೌಳಿ,ಸೇರಿದಂತೆ ನಗರಸಭೆ ಸದಸ್ಯರು, ಮಾಜಿ ಸದಸ್ಯರು ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತಿತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಟಾಕ್ಸಿಕ್

ಕ್ರಿಯಾತ್ಮಕತೆ ಮತ್ತು ಪ್ರಯತ್ನಗಳಿಗೂ ಒಂದಷ್ಟು ಮಿತಿ ಇರುತ್ತದೆ. ಏಕೆಂದರೆ ನಾವು ಸಾಮಾನ್ಯ ಮನುಷ್ಯರು. ಹಣ, ಜನಪ್ರಿಯತೆ, ಅಧಿಕಾರ ಬಂದ ತಕ್ಷಣ…

2 days ago

ಚಿ.ನಾ.ಹಳ್ಳಿ ತಾಲ್ಲೂಕಿಗೆ ಸಿಇಒ ದಿಢೀರ್ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…

2 days ago

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ ನಾಲ್ವರು ಬಲಿ

ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್‌ಸ್ಪೆಕ್ಟರ್…

3 days ago

ರಕ್ಷಾ ಬಂಧನ ಮತ್ತು ಮದರ್ ತೆರೇಸಾ

ಮದರ್‌ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…

3 days ago

ರೈತಪರ ಯೋಜನೆ : ವಿಬಿ-ಜಿ ರಾಮ್ ಜಿ ಯೋಜನೆ

ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…

3 days ago

ಮೂರು ತಾಲೂಕು ಬರದ ಪಟ್ಟಿಗೆ; ದೊಡ್ಡಬಳ್ಳಾಪುರಕ್ಕೆ ವಿನಾಯಿತಿ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

4 days ago