ನಗರದ ಅರ್ಕಾವತಿ ಬಡಾವಣೆಯ ಇತಿಹಾಸ ಪ್ರಸಿದ್ದ ಶ್ರೀ ಲಕ್ಷೀ ನರಸಿಂಹಸ್ವಾಮಿಯ ವಿಜೃಂಭಣೆ ಬ್ರಹ್ಮ ರಥೋತ್ಸವ

ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿದ್ದ 5ನೇ ವರ್ಷದ ಕಾರ್ಯಕ್ರಮಗಳು ಭಾನುವಾರದಿಂದ ಆರಂಭವಾಗಿ ಹನುಮಂತೋತ್ಸವ, ಗರುಡೋತ್ಸವ, ಸೋಮವಾರ ಗಜವಾಹನೋತ್ಸವ, ಅಶ್ವವಾಹನೋತ್ಸವ, ತಿರುಕಲ್ಯಾಣೋತ್ಸವ ಸೇರಿದಂತೆ ಅನೇಕ ಧಾರ್ಮಿಕ ಕಾರ್ಯಕ್ರಮಗಳು ನಡೆದವು.

ಮಂಗಳವಾರ ಮದ್ಯಾಹ್ನ 12 ಗಂಟೆಗೆ ಬ್ರಹ್ಮ ರಥೋತ್ಸವಕ್ಕೆ ಗಣ್ಯರಿಂದ ಚಾಲನೆ ನೀಡಲಾಯಿತು. ಬ್ರಹ್ಮರಥೋತ್ಸವಕ್ಕೆ ನಗರ ಹಾಗೂ ಗ್ರಾಮಾಂತರ ಭಾಗದಿಂದ ಬಂದಿದ್ದ ಭಕ್ತರು ಶ್ರದ್ದೆ ಭಕ್ತಿಯಿಂದ ಸ್ವಾಮಿಯ ರಥಕ್ಕೆ ಹೂವು ಹಣ್ಣು ದವನ ಅರ್ಪಿಸಿ ಭಕ್ತಿ ಭಾವ ಮೆರೆದರು. ರಥೋತ್ಸವದ ಅಂಗವಾಗಿ ದೇವಾಲಯದಲ್ಲಿ ವಿಶೇಷ ಅಭಿಷೇಕ, ಸುಪ್ರಭಾತ ಸೇವೆ, ಹೂಮಾಲೆ ಸೇವೆ, ನವಗ್ರಹ ಪೂಜೆ, ರಥದ ಮುಂಭಾಗದಲ್ಲಿ ವಿಶೇಷ ಹೋಮಗಳನ್ನು ನಡೆಸಲಾಯಿತು.

ಲಕ್ಷೀ ನರಸಿಂಹಸ್ವಾಮಿಗೆ ವಿಶೇಷವಾಗಿ ವಿವಿದ ಬಗೆಯ ಪುಷ್ಪಗಳಿಂದ ಅಲಂಕರಿಸಲಾಗಿತ್ತು. ಕೆಲವು ಸಾಂಸ್ಕೃತಿಕ ಕಲಾ ತಂಡಗಳಿಂದ ಭಕ್ತಿಗೀತೆ ಗಾಯನ, ಭಜನೆ, ಆಗಮಿಕರ ಮಂತ್ರ ಪಠಣೆಗಳು, ಭಕ್ತಜನ ಸಾಗರದ ಜಯ ಘೋಷದೊಂದಿಗೆ ರಥೋತ್ಸವ ನಡೆಯಿತ್ತು. ಜಾತ್ರೆಯ ಪ್ರಯುಕ್ತ ದೇವಾಲಯದ ಟ್ರಸ್ಟ್ ವತಿಯಿಂದ ರಥೊತ್ಸವಕ್ಕೆ ಆಗಮಿಸುವ ಭಕ್ತರಿಗೆ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು. ಅಲ್ಲದೆ ಮಜ್ಜಿಗೆ ಪಾನಕ ಕೋಸಂಬರಿ ವಿತರಿಸಲಾಯಿತು.

ಡಿ.ಕ್ರಾಸ್ ರೈಲ್ವೆ ಮೇಲ್ಸೇತುವೆ ಕೆಳಗೆ ಬ್ರಹ್ಮ ರಥೋತ್ಸವದ ಅಂಗವಾಗಿ ಅಂಗಡಿ ಮುಗ್ಗಟ್ಟುಗಳ ಜಾತ್ರೆಯ ಕಲರವ ಜೋರಾಗಿತ್ತು. ಬರುವ ಭಕ್ತರ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿತು.

ಬ್ರಹ್ಮರಥೋತ್ಸವದಲ್ಲಿ ತಾಲೂಕಿನ ಅನೇಕ ಗಣ್ಯರು, ದೇವಸ್ಥಾನದ ಟ್ರಸ್ಟ್ ನ ಸದಸ್ಯರು ಸೇರಿದಂತೆ ಸಂಘ ಸಂಸ್ಥೆಗಳ ಮುಖಂಡರು, ಸದಸ್ಯರು ಇದ್ದರು.

Ramesh Babu

Journalist

Recent Posts

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

3 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

18 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

1 day ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

1 day ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

1 day ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

2 days ago