ನಗರದ ಅರ್ಕಾವತಿ ಬಡಾವಣೆಯ ಇತಿಹಾಸ ಪ್ರಸಿದ್ದ ಶ್ರೀ ಲಕ್ಷೀ ನರಸಿಂಹಸ್ವಾಮಿಯ ವಿಜೃಂಭಣೆ ಬ್ರಹ್ಮ ರಥೋತ್ಸವ

ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿದ್ದ 5ನೇ ವರ್ಷದ ಕಾರ್ಯಕ್ರಮಗಳು ಭಾನುವಾರದಿಂದ ಆರಂಭವಾಗಿ ಹನುಮಂತೋತ್ಸವ, ಗರುಡೋತ್ಸವ, ಸೋಮವಾರ ಗಜವಾಹನೋತ್ಸವ, ಅಶ್ವವಾಹನೋತ್ಸವ, ತಿರುಕಲ್ಯಾಣೋತ್ಸವ ಸೇರಿದಂತೆ ಅನೇಕ ಧಾರ್ಮಿಕ ಕಾರ್ಯಕ್ರಮಗಳು ನಡೆದವು.

ಮಂಗಳವಾರ ಮದ್ಯಾಹ್ನ 12 ಗಂಟೆಗೆ ಬ್ರಹ್ಮ ರಥೋತ್ಸವಕ್ಕೆ ಗಣ್ಯರಿಂದ ಚಾಲನೆ ನೀಡಲಾಯಿತು. ಬ್ರಹ್ಮರಥೋತ್ಸವಕ್ಕೆ ನಗರ ಹಾಗೂ ಗ್ರಾಮಾಂತರ ಭಾಗದಿಂದ ಬಂದಿದ್ದ ಭಕ್ತರು ಶ್ರದ್ದೆ ಭಕ್ತಿಯಿಂದ ಸ್ವಾಮಿಯ ರಥಕ್ಕೆ ಹೂವು ಹಣ್ಣು ದವನ ಅರ್ಪಿಸಿ ಭಕ್ತಿ ಭಾವ ಮೆರೆದರು. ರಥೋತ್ಸವದ ಅಂಗವಾಗಿ ದೇವಾಲಯದಲ್ಲಿ ವಿಶೇಷ ಅಭಿಷೇಕ, ಸುಪ್ರಭಾತ ಸೇವೆ, ಹೂಮಾಲೆ ಸೇವೆ, ನವಗ್ರಹ ಪೂಜೆ, ರಥದ ಮುಂಭಾಗದಲ್ಲಿ ವಿಶೇಷ ಹೋಮಗಳನ್ನು ನಡೆಸಲಾಯಿತು.

ಲಕ್ಷೀ ನರಸಿಂಹಸ್ವಾಮಿಗೆ ವಿಶೇಷವಾಗಿ ವಿವಿದ ಬಗೆಯ ಪುಷ್ಪಗಳಿಂದ ಅಲಂಕರಿಸಲಾಗಿತ್ತು. ಕೆಲವು ಸಾಂಸ್ಕೃತಿಕ ಕಲಾ ತಂಡಗಳಿಂದ ಭಕ್ತಿಗೀತೆ ಗಾಯನ, ಭಜನೆ, ಆಗಮಿಕರ ಮಂತ್ರ ಪಠಣೆಗಳು, ಭಕ್ತಜನ ಸಾಗರದ ಜಯ ಘೋಷದೊಂದಿಗೆ ರಥೋತ್ಸವ ನಡೆಯಿತ್ತು. ಜಾತ್ರೆಯ ಪ್ರಯುಕ್ತ ದೇವಾಲಯದ ಟ್ರಸ್ಟ್ ವತಿಯಿಂದ ರಥೊತ್ಸವಕ್ಕೆ ಆಗಮಿಸುವ ಭಕ್ತರಿಗೆ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು. ಅಲ್ಲದೆ ಮಜ್ಜಿಗೆ ಪಾನಕ ಕೋಸಂಬರಿ ವಿತರಿಸಲಾಯಿತು.

ಡಿ.ಕ್ರಾಸ್ ರೈಲ್ವೆ ಮೇಲ್ಸೇತುವೆ ಕೆಳಗೆ ಬ್ರಹ್ಮ ರಥೋತ್ಸವದ ಅಂಗವಾಗಿ ಅಂಗಡಿ ಮುಗ್ಗಟ್ಟುಗಳ ಜಾತ್ರೆಯ ಕಲರವ ಜೋರಾಗಿತ್ತು. ಬರುವ ಭಕ್ತರ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿತು.

ಬ್ರಹ್ಮರಥೋತ್ಸವದಲ್ಲಿ ತಾಲೂಕಿನ ಅನೇಕ ಗಣ್ಯರು, ದೇವಸ್ಥಾನದ ಟ್ರಸ್ಟ್ ನ ಸದಸ್ಯರು ಸೇರಿದಂತೆ ಸಂಘ ಸಂಸ್ಥೆಗಳ ಮುಖಂಡರು, ಸದಸ್ಯರು ಇದ್ದರು.

Ramesh Babu

Journalist

Recent Posts

ಯುಗಾದಿ, ರಂಜಾನ್ ಹಬ್ಬ ವಿಶೇಷ: ಜೂಜಾಟ ಸೇರಿದಂತೆ ಅಕ್ರಮ ಚಟುವಟಿಕೆ ತಡೆಗೆ ಪೊಲೀಸ್ ಇಲಾಖೆ ಕಸರತ್ತು: ಬೆಳ್ಳಂಬೆಳಗ್ಗೆ ರೌಡಿ ಪರೇಡ್: 70ಕ್ಕೂ ಹೆಚ್ಚು ರೌಡಿಗಳಿಗೆ ಬೆವರಿಳಿಸಿದ ಡಿವೈಎಸ್ ಪಿ ಪಾಂಡುರಂಗ

ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸಪ್ಲೆ, ಕಾಲೇಜುಗಳ ಬಳಿ ಸುಖಾ ಸುಮ್ಮನೆ ಓಡಾಟ, ಏರಿಯಾಗಳಲ್ಲಿ ಹವಾ ಮೇಂಟೈನ್ ಮಾಡೋದು, ಅಫ್ತಾ ವಸೂಲಿ…

26 minutes ago

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…

8 hours ago

9 ತಿಂಗಳಲ್ಲಿ ಬಮೂಲ್ ಒಕ್ಕೂಟಕ್ಕೆ 60 ಕೋಟಿ ಲಾಭ: ಸಂಪೂರ್ಣ ರೈತರ ಖಾತೆಗೆ ಲಾಭಾಂಶ ಹಣ

ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…

1 day ago

ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಚಿಂತನೆ: ₹184 ಕೋಟಿ ಮೊತ್ತದ ಕೇಂದ್ರ ಸರ್ಕಾರದ ಯೋಜನೆಗೆ ಶೀಘ್ರವೇ ಅನುಮೋದನೆ – ಸಂಸದ ಡಾ.ಕೆ‌ ಸುಧಾಕರ್

ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…

1 day ago

ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಬೇಕು- ಪೊಲೀಸ್ ಸಬ್ ಇನ್ಸ್ಪೆಕ್ಟರ್ ವರಲಕ್ಷ್ಮಿ .ವಿ

ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…

2 days ago